Homeಕರ್ನಾಟಕಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 40 ಕಡೆ ದಾಳಿ

ಲೋಕಾಯುಕ್ತ ಅಧಿಕಾರಿಗಳಿಂದ ಏಕಕಾಲಕ್ಕೆ 40 ಕಡೆ ದಾಳಿ

ರಾಜ್ಯದಲ್ಲಿ ಏಕಕಾಲಕ್ಕೆ 40 ಕಡೆಗಳಲ್ಲಿ ಗುರುವಾರ ಬೆಳ್ಳಂ ಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರಿನಲ್ಲಿ 12, ತುಮಕೂರಿನಲ್ಲಿ 7, ಬೆಂಗಳೂರು ಗ್ರಾಮಾಂತರದಲ್ಲಿ 8, ಯಾದಗಿರಿಯಲ್ಲಿ 5, ಮಂಗಳೂರಿನಲ್ಲಿ 4 ಹಾಗೂ ವಿಜಯಪುರದಲ್ಲಿ 4 ಸ್ಥಳಗಳಲ್ಲಿ ಲೋಕಾ ದಾಳಿ ನಡೆಸಿದೆ. ಏಳು ಭ್ರಷ್ಟ ಅಧಿಕಾರಿಗಳ ಮನೆ, ಕಚೇರಿಗಳ ಮೇಲೆ ದಾಳಿ ಮಾಡಲಾಗಿದ್ದು, ಅಧಿಕಾರಿಗಳು ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.  ಕೆಲವು ಅಧಿಕಾರಿಗಳ ಮನೆ ಹಾಗೂ ಕಚೇರಿಗಳಲ್ಲಿ ದಾಖಲೆ ಪತ್ರಗಳನ್ನು ವಶಕ್ಕೆ ಪಡೆದಿದ್ದಾರೆ.

ದಾಳಿಗೊಳಗಾದ ಅಧಿಕಾರಿಗಳು

1 ರಾಜಶೇಖರ್: ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ- ತುಮಕೂರು, 2 ಮಂಜುನಾಥ್: ಸರ್ವೆ ಸೂಪರ್ವೈಸರ್ – ಮಂಗಳೂರು,  3 ರೇಣುಕಾ: ಡಾ.ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧಿಕಾರಿ ವಿಜಯಪುರ, 4 ಮುರಳಿ ಟಿವಿ: ಹೆಚ್ಚುವರಿ ನಿರ್ದೇಶಕರು, ನಗರ ಮತ್ತು ಗ್ರಾಮಾಂತರ ಯೋಜನಾ ನಿರ್ದೇಶನಾಲಯ- ಬೆಂಗಳೂರು, 5 ಹೆಚ್​ಆರ್ ನಟರಾಜ್: ಇನ್ಸ್‌ಪೆಕ್ಟರ್, ಕಾನೂನು ಮಾಪನಶಾಸ್ತ್ರ – ಬೆಂಗಳೂರು, 6 ಅನಂತ್ ಕುಮಾರ್: SDA, ಹೊಸಕೋಟೆ ತಾಲೂಕು ಕಚೇರಿ – ಬೆಂಗಳೂರು ಗ್ರಾಮಾಂತರ, 7 ಉಮಾಕಾಂತ್: ಶಹಾಪುರ ತಾಲೂಕು ಕಚೇರಿ ಯಾದಗಿರಿ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments