HomeSportಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ, ವಿಧಾನಸೌಧದ ಮುಂದೆ ಸರ್ಕಾರದಿಂದ ಸನ್ಮಾನ

ಇಂದು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ, ವಿಧಾನಸೌಧದ ಮುಂದೆ ಸರ್ಕಾರದಿಂದ ಸನ್ಮಾನ

ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಗೆದ್ದಿರುವ ಆರ್‌ಸಿಬಿ ತಂಡಕ್ಕೆ ಹಾಗೂ ಅಭಿಮಾನಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿನಂದಿಸಿದರು.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ರಾಜ್ಯ ಅತೀವ ಹೆಮ್ಮೆ ಹಾಗೂ ಪಡುವಂಥ ಕೆಲಸ ಆರ್.ಸಿ.ಬಿ ಮಾಡಿದ್ದು, ವಿಧಾನಸೌಧದ ಮೆಟ್ಟಿಲುಗಳಲ್ಲಿ ಇಂದು ತಂಡಕ್ಕೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ” ಎಂದು ತಿಳಿಸಿದರು.

ಡಿ ಕೆ ಶಿವಕುಮಾರ್‌ ಹೇಳಿದ್ದೇನು?

“ನಮ್ಮ ರಾಜ್ಯಕ್ಕೆ ಆರ್‌ಸಿಬಿ ತಂಡದ ಹುಡುಗರು ಗೌರವ ಮತ್ತು ಹೆಮ್ಮೆ ತಂದಿದ್ದಾರೆ. ಈ ಕಾರಣಕ್ಕಾಗಿ ನಾವು ಅವರಿಗೆ ಅಭಿನಂದನೆ ಸಲ್ಲಿಸುತ್ತೇವೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್‌ ಹೇಳಿದರು.

ಬೆಂಗಳೂರಿನಲ್ಲಿ ಬುಧವಾರ ಮಾತನಾಡಿದ ಅವರು, “ಪಂಜಾಬ್ ಕಿಂಗ್ಸ್ ವಿರುದ್ದ ಅಭೂತಪೂರ್ವ ಗೆಲುವು ಸಾಧಿಸಿದ ಆರ್‌ ಸಿ ಬಿ ತಂಡಕ್ಕೆ ಗೌರವ ಸಲ್ಲಿಸಲು ಸರ್ಕಾರ ಯೋಚಿಸುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಸಿದ್ದರಾಮಯ್ಯ ಜೊತೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು” ಎಂದರು.

“ಆರ್ ಸಿ ಬಿ ತಂಡಕ್ಕೆ ನಾವು ಗೌರವ ಸಲ್ಲಿಸಬೇಕು. ಯಾವ ರೀತಿ ಅವರನ್ನು ಗೌರವಿಸಬೇಕು ಎಂಬುದರ ಬಗ್ಗೆ ಚರ್ಚೆ ನಡೆಯುತ್ತಿದೆ. ಬೆಂಗಳೂರಿನಲ್ಲಿ ಸಂಚಾರ ವ್ಯವಸ್ಥೆಗೆ ಯಾವ ರೀತಿಯಲ್ಲಿ ಸಮಸ್ಯೆ ಆಗಬಾರದು. ಈ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“ಬೆಂಗಳೂರಿನಲ್ಲಿ ಗೆಲುವಿನ ಸಂಭ್ರಮಾಚರಣೆ ಮಾಡುವ ಬಗ್ಗೆ ಆರ್ ಸಿ ಬಿ ತಂಡದವರು ಶೆಡ್ಯೂಲ್ಡ್ ಹಾಕಿಕೊಂಡಿರಬಹುದು. ಆದರೆ, ಪರಿಸ್ಥಿತಿಯನ್ನು ಇಲ್ಲಿ ನಿಯಂತ್ರಣ ಮಾಡುವವರು ನಾವಲ್ಲವೇ? ಗೃಹ ಸಚಿವರು ಹಾಗೂ ಪೊಲೀಸ್ ಅಧಿಕಾರಿಗಳು ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತಾರೆ” ಎಂದು ತಿಳಿಸಿದರು.

ಇಂದು ಬೆಂಗಳೂರಿನಲ್ಲಿ ವಿಜಯೋತ್ಸವ

ಕೋಟ್ಯಂತರ ಅಭಿಮಾನಿಗಳ ಕಾಯುವಿಕೆ ಕೊನೆಯಾಗಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು‌ ತಂಡವು ಐತಿಹಾಸಿಕ ಐಪಿಎಲ್ 2025 ಪ್ರಶಸ್ತಿ ಗೆದ್ದಿದೆ.

ಅಹಮದಾಬಾದ್​ನಲ್ಲಿ ಮಂಗಳವಾರ (ಜೂ.3) ನಡೆದ ಫೈನಲ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ 6 ವಿಕೆಟ್​ಗಳ ಜಯ ಸಾಧಿಸಿದ ರಜತ್ ಪಾಟೀದಾರ್ ನಾಯಕತ್ವದ ಆರ್​ಸಿಬಿ ಪಡೆ ಚೊಚ್ಚಲ ಬಾರಿ ಟ್ರೋಫಿ ಎತ್ತಿ ಹಿಡಿಯಿತು. ಈ ಮೂಲಕ ಇಂಡಿಯನ್ ಪ್ರೀಮಿಯರ್ ಲೀಗ್​ ಸೀಸನ್-18 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 18 ವರ್ಷಗಳ ಬಳಿಕ ಚಾಂಪಿಯನ್ ಪಟ್ಟ ಅಲಂಕರಿಸಿತು.

ಈ ಸಂಭ್ರಮವನ್ನು ಆಚರಿಸಲು ಆರ್‌ಸಿಬಿ ಜೂ.4 ರಂದು ಬೆಂಗಳೂರಿನಲ್ಲಿ ವಿಜಯೋತ್ಸವ ಮೆರವಣಿಗೆಯನ್ನು ಆಯೋಜಿಸಿದೆ. ನಗರದ ಪ್ರಮುಖ ಪ್ರದೇಶಗಳಲ್ಲಿ ಭವ್ಯ ವಿಜಯೋತ್ಸವ ಬಸ್ ಮೆರವಣಿಗೆ ನಡೆಯಲಿದ್ದು, ಅಭಿಮಾನಿಗಳು ತಮ್ಮ ಪ್ರಶಸ್ತಿ ವಿಜೇತ ಕ್ರಿಕೆಟಿಗರನ್ನು ಹತ್ತಿರದಿಂದ ನೋಡಲು ಅವಕಾಶ ಪಡೆಯಲಿದ್ದಾರೆ.

ಮಂಗಳವಾರ ರಾತ್ರಿಯೇ ಆರ್ ಸಿ ಬಿ ಗೆಲುವನ್ನು ಜನರು ಸಂಭ್ರಮದಿಂದ ಆಚರಿಸಿದ್ದರು. ಇಂದು ವಿಕ್ಟರಿ ಪರೇಡ್ ಮೂಲಕ ಬೆಂಗಳೂರಿನ ಬೀದಿಗಳಲ್ಲಿ ಆರ್ ಸಿ ಬಿ ಅಭಿಮಾನಿಗಳು ಗೆಲುವನ್ನು ಸಂಭ್ರಮಿಸಲು ಸರ್ಕಾರ ಅವಕಾಶ ನೀಡುತ್ತಾರೋ ಇಲ್ಲವೋ ಎಂಬುವುದು ಇನ್ನು ಅಧಿಕೃತವಾಗಿಲ್ಲ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments