Homeಕರ್ನಾಟಕಕೆಪಿಎಸ್‌ಸಿ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆ ರದ್ದು

ಕೆಪಿಎಸ್‌ಸಿ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆ ರದ್ದು

ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್‌ ಪ್ರೊಬೇಷನರ್‌ ನೇಮಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಸ್‌ಎಟಿ) ರದ್ದುಪಡಿಸಿದೆ.

ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಿ ಎನ್‌ ಮಧು ಸಲ್ಲಿಸಿದ್ದ ಅರ್ಜಿಯನ್ನು ಕೆಎಸ್‌ಎಟಿ ಅಧ್ಯಕ್ಷ ನ್ಯಾಯಮೂರ್ತಿ ಬಿ ಆರ್‌ ಬೂದಿಹಾಳ್‌ ಮತ್ತು ಆಡಳಿತಾತ್ಮಕ ಸದಸ್ಯ ರಾಘವೇಂದ್ರ ಔರಾದ್ಕರ್‌ ಅವರ ವಿಭಾಗೀಯ ಪೀಠ ಪುರಸ್ಕರಿಸಿದ್ದು, ಮೇ 28ರಂದು ಈ ಕುರಿತು ಆದೇಶ ಹೊರಡಿಸಿದೆ.

ಸರ್ಕಾರಿ ನೇಮಕಾತಿಗಳಲ್ಲಿ ಮೀಸಲು ಪ್ರಮಾಣವನ್ನು ಶೇ.50ರಿಂದ ಶೇ.56ಕ್ಕೆ ಹೆಚ್ಚಳ ಮಾಡಿದ ರಾಜ್ಯ ಸರ್ಕಾರದ ಆದೇಶಕ್ಕೆ ಈ ಮೂಲಕ ಹಿನ್ನಡೆಯಾಗಿದೆ. ಹಾಗೆಯೇ ಕೆಎಎಸ್‌ ಹುದ್ದೆಗಳ ಭರ್ತಿ ಜೊತೆಗೆ 2022ರ ಡಿಸೆಂಬರ್‌ 12ರಂದು ರಾಜ್ಯ ಸರ್ಕಾರ ಮೀಸಲು ಹೆಚ್ಚಳಕ್ಕೆ ಹೊರಡಿಸಿದ್ದ ಆದೇಶವನ್ನೂ ಸಹ ಕೆಎಸ್‌ಎಟಿ ರದ್ದುಗೊಳಿಸಿದೆ.

ಕೆಪಿಎಸ್‌ಸಿ ಕಾನೂನು ಪ್ರಕಾರ ನೇಮಕಕ್ಕೆ ಹೊಸದಾಗಿ ಅಧಿಸೂಚನೆ ಹೊರಡಿಸಲು ಸ್ವತಂತ್ರವಾಗಿದೆ ಎಂದು ಸ್ಪಷ್ಟಪಡಿಸಿದೆ. ಇದರಿಂದ ಕೆಎಎಸ್‌ ಅಧಿಕಾರಿಗಳ ನೇಮಕ ಮತ್ತೆ ಅತಂತ್ರಕ್ಕೆ ಸಿಲುಕಿದಂತಾಗಿದೆ.

ಬಸವರಾಜ ಬೊಮ್ಮಾಯಿ ನೇತೃತ್ವದ ಹಿಂದಿನ ಬಿಜೆಪಿ ಸರ್ಕಾರ 2022ರಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿ ಸೀಟು ಹಂಚಿಕೆ ಮೀಸಲು ಮತ್ತು ರಾಜ್ಯ ಸೇವೆಯಲ್ಲಿ ನೇಮಕ ಹುದ್ದೆಗಳಿಗೆ ಮೀಸಲು) ಸುಗ್ರೀವಾಜ್ಞೆ ಜಾರಿಗೊಳಿಸಿತ್ತು.

ಅದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಮೀಸಲಾತಿ ಪ್ರಮಾಣವನ್ನು ಶೇ. 18ರಿಂದ ಶೇ. 24ಕ್ಕೆ ಹೆಚ್ಚಿಸಿ ಸುಗ್ರೀವಾಜ್ಞೆ ಹೊರಡಿಸಿತ್ತು. ಅದನ್ನು ಆಧರಿಸಿ ಕರ್ನಾಟಕ ಸರ್ಕಾರಿ ಸೇವೆಯಲ್ಲಿ ರೋಸ್ಟರ್‌ ಮೀಸಲು ನಿಗದಿಪಡಿಸಿತ್ತು. ಆನಂತರ ಅದನ್ನು ಆಧರಿಸಿ ಕೆಪಿಎಸ್‌ಸಿ 384 ಗ್ರೂಪ್‌ ಎ ಮತ್ತು ಬಿ ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿತ್ತು. ಅದನ್ನು ಅರ್ಜಿದಾರರು ಪ್ರಶ್ನಿಸಿ ಕೆಎಎಸ್‌ಎಟಿ ಮೊರೆ ಹೋಗಿದ್ದರು.

ಕೆಎಎಸ್‌ ಅಧಿಕಾರಿಗಳ ನೇಮಕಕ್ಕೆ ಮುಖ್ಯ ಪರೀಕ್ಷೆ ನಡೆದು ಇನ್ನೇನು ಫಲಿತಾಂಶ ಹೊರಬೀಳಬೇಕಿದೆ. ಈ ಹಂತದಲ್ಲಿ ಕೆಎಸ್‌ಎಟಿ ಆದೇಶ ಅಭ್ಯರ್ಥಿಗಳಿಗೆ ಸಂಕಷ್ಟ ತಂದಿದ್ದು, ಸರ್ಕಾರ ಇದೀಗ ನೇಮಕ ಪ್ರಕ್ರಿಯೆಯನ್ನು ಊರ್ಜಿತಗೊಳಿಸಬೇಕಾದರೆ ಕೆಎಸ್‌ಎಟಿ ಆದೇಶವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಬೇಕಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments