Homeಕರ್ನಾಟಕರೌಡಿಶೀಟರ್ ಬಿಕ್ಲು ಶಿವ ಕೊಲೆ, ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ಐಆರ್

ರೌಡಿಶೀಟರ್ ಬಿಕ್ಲು ಶಿವ ಕೊಲೆ, ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ಐಆರ್

ಬೆಂಗಳೂರಿನ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವ ಬರ್ಬರ ಹತ್ಯೆ ಹಿಂದೆ ಮಾಜಿ ಸಚಿವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಪಾತ್ರದ ಆರೋಪದ ಮೇಲೆ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಜಮೀನಿನ ವಿಚಾರವಾಗಿ ರೌಡಿಶೀಟರ್ ಶಿವಪ್ರಕಾಶ್ ಹಾಗೂ ಬೈರತಿ ಬಸವರಾಜ್​ ಬೆಂಬಲಿಗರ ನಡುವೆ ಗಲಾಟೆ ನಡೆದಿದೆ ಎಂಬ ಆರೋಪವಿದೆ.

ಶಿವ ಕೊಲೆಗೆ ಬೈರತಿ ಕುಮ್ಮಕ್ಕು ಆರೋಪ

ಬೆಂಗಳೂರಿನ ಭಾರತೀ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಮಾಜಿ ಸಚಿವ ಬೈರತಿ ಬಸವರಾಜ್ ಎ5 ಆರೋಪಿ ಎಂದು ಉಲ್ಲೇಖಿಸಿಲಾಗಿದೆ. ಕಳೆದ ರಾತ್ರಿ ರೌಡಿಶೀಟರ್ ಶಿವಕುಮಾರ್ ಅಲಿಯಾಸ್ ಬಿಕ್ಲು ಶಿವು ಕೊಲೆ ನಡೆದಿದೆ. ಕೊಲೆಗೆ ಬೈರತಿ ಬಸವರಾಜ್ ಕುಮ್ಮಕ್ಕು ನೀಡಿದ್ದಾರೆ ಎಂದು ರೌಡಿಶೀಟರ್ ಶಿವಕುಮಾರ್ ತಾಯಿ ವಿಜಯಲಕ್ಷ್ಮಿ ನೀಡಿದ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ.

ಜಗದೀಶ್, ಕಿರಣ್, ವಿಮಲ್, ಅನಿಲ್ ವಿರುದ್ದವೂ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments