Homeಕರ್ನಾಟಕಆರ್‌ಎಸ್‌ಎಸ್‌ ಹೊಗಳಲು ಪ್ರಧಾನಿ ಸ್ಥಾನ ಬಳಸಿಕೊಂಡಿರುವುದು ಅಪರಾಧ: ಬಿ ಕೆ ಹರಿಪ್ರಸಾದ್

ಆರ್‌ಎಸ್‌ಎಸ್‌ ಹೊಗಳಲು ಪ್ರಧಾನಿ ಸ್ಥಾನ ಬಳಸಿಕೊಂಡಿರುವುದು ಅಪರಾಧ: ಬಿ ಕೆ ಹರಿಪ್ರಸಾದ್

ಸ್ವಯಂ ಘೋಷಿತ ನಿಸ್ವಾರ್ಥ ಸೇವೆಯ ಹೆಸರಿನಲ್ಲಿ ದೇಶಕ್ಕೆ ಅಪಾಯವಾಗಿರುವ ಸಂಘಟನೆಯನ್ನು ಹೊಗಳಲು ಪ್ರಧಾನಿ ಸ್ಥಾನವನ್ನು ಬಳಸಿಕೊಂಡಿರುವುದು ಅಕ್ಷಮ್ಯ ಮಾತ್ರವಲ್ಲ ಅಪರಾಧ ಕೂಡ ಹೌದು ಎಂದು ಎಐಸಿಸಿ ಮುಖಂಡ ಮತ್ತು ವಿಧಾನ ಪರಿಷತ್‌ ಸದಸ್ಯ ಬಿ ಕೆ ಹರಿಪ್ರಸಾದ್‌ ಟೀಕಿಸಿದ್ದಾರೆ.

ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಅವರು, “ಮಹಾತ್ಮಾ ಗಾಂಧಿಯ ಹತ್ಯೆಯ ಪಿತೂರಿ ಮತ್ತು ಹತ್ಯೆಯ ಸಂಭ್ರಮದಿಂದ ಹಿಡಿದು ಭಾರತದ ಸಂವಿಧಾನಕ್ಕೆ, ಪ್ರಜಾಪ್ರಭುತ್ವ ಮೌಲ್ಯಕ್ಕೆ ಹಾಗೂ ಸೌಹಾರ್ದತಯ ಪರಂಪರೆಗೆ ಸಂಘ ಪರಿವಾರ ಮಾಡಿರುವ ಪ್ರಮಾದಗಳನ್ನು ಮರೆ ಮಾಚಿ ಪ್ರಧಾನಿ ನರೇಂದ್ರ ಮೋದಿ ಸಂಘದ ಮಾಧ್ಯಮ ವಕ್ತಾರಿಕೆ ಮಾಡುವುದು ಲಜ್ಜೆಗೇಡಿತನದ ಪರಮಾವಧಿ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಮನ್ ಕೀ ಬಾತ್‌ನಲ್ಲಿ ಆರ್.ಎಸ್.ಎಸ್ ಸಂಘಟನೆಯ ನೂರು ವರ್ಷದ ಕಾರ್ಯಕ್ರಮದ ವಕ್ತಾರಿಕೆ ಮಾಡುವ ಬದಲು ಪ್ರಧಾನಿ ನರೇಂದ್ರ ಮೋದಿ ಸಂಘದ ಅಧಿಕೃತ ಪತ್ರಿಕೆ ಆರ್ಗನೈಸರ್‌ಗೆ ಲೇಖನ ಬರೆದು ಬಿಡಲಿ. ಬರೆಯುವ ಮುನ್ನ ಪತ್ರಿಕೆಯಲ್ಲಿ ಈ ಹಿಂದೆ ದೇಶಕ್ಕೆ ಗಂಡಾಂತರ ತಂದಿರುವ ಸಂಘದ ಅಪಾಯಕಾರಿ ನಿಲುವುಗಳ ಬಗ್ಗೆಯೂ ಮನ್ ಕೀ ಬಾತ್ ಅಲ್ಲೇ ಮಾತಾಡಲಿ” ಎಂದು ಆಗ್ರಹಿಸಿದ್ದಾರೆ.

“ಸ್ವತಂತ್ರ ಚಳುವಳಿಯಲ್ಲಿ ಭಾಗವಹಿಸದೇ, ಬ್ರಿಟಿಷರ ಗುಲಾಮಗಿರಿಯ ಸಹಾಯಧನ ಪಡೆದವರು ದೇಶದ ಸೇವೆ ಮಾಡಿದ್ದೇವೆ ಎಂದು ಹೇಳುವುದು ಸ್ವತಂತ್ರ ಹೋರಾಟಗಾರರನ್ನೇ ಅವಮಾನಿಸಿದಂತೆ. ದೇಶದ ಶಾಂತಿ, ಸುವ್ಯವಸ್ಥೆ ಹಾಗೂ ಭದ್ರತೆಗೆ ಸಂಘ ಮಾಡಿರುವ ಗಂಡಾಂತರಗಳ ಇತಿಹಾಸವೇ ಇದೆ” ಎಂದು ವಾಗ್ದಾಳಿ ನಡೆಸಿದ್ದಾರೆ.

“ಗಾಂಧಿಯ ಹತ್ಯೆಯ ನಂತರ ಸರ್ಧಾರ್ ಪಟೇಲ್ ಅವರು ಸಂಘವನ್ನೇ ಬ್ಯಾನ್ ಮಾಡುವಾಗ ಹೇಳಿದ ಮಾತುಗಳನ್ನಾದರೂ ಮನ್ ಕೀ ಬಾತ್ ಅಲ್ಲಿ ಮಾತಾಡುವ ಎದೆಗಾರಿಕೆ ಇದೆಯಾ? ದೇಶದ ಸೌಹಾರ್ದತೆಯ ಸೌಂದರ್ಯವನ್ನು ಹಾಳು ಮಾಡಿ, ಪ್ರಕೃತಿ ವಿಕೋಪದ ಸೇವೆಯನ್ನೇ ಪ್ರಧಾನಿಗಳು ಪ್ರದರ್ಶನ ಮಾಡುವುದು ಹಾಸ್ಯಾಸ್ಪದ” ಎಂದು ಲೇವಡಿ ಮಾಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments