Homeಕರ್ನಾಟಕಮೋದಿ, ಜೈಶಂಕರ್ ವಿದೇಶಾಂಗ ನೀತಿಯಿಂದ ಅಮೆರಿಕ ಭಾರತ ಬಗ್ಗೆ ಹಗುರ ಮಾತು: ಪ್ರಿಯಾಂಕ್ ಖರ್ಗೆ 

ಮೋದಿ, ಜೈಶಂಕರ್ ವಿದೇಶಾಂಗ ನೀತಿಯಿಂದ ಅಮೆರಿಕ ಭಾರತ ಬಗ್ಗೆ ಹಗುರ ಮಾತು: ಪ್ರಿಯಾಂಕ್ ಖರ್ಗೆ 

ಮೋದಿ, ಜೈಶಂಕರ್ ಅವರ ವಿದೇಶಾಂಗ ನೀತಿಯಿಂದಾಗಿ ಅಮೇರಿಕಾದವರು ಭಾರತದ ಬಗ್ಗೆ ಹಗುರವಾಗಿ ಮಾತನಾಡುವಂತಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಹಾಗೂ ವಿದೇಶಾಂಗ ಸಚಿವ ಜೈಶಂಕರ್ ಅವರ ವಿದೇಶ ನೀತಿಯಿಂದಾಗಿ ಅಮೇರಿಕಾದ ವಿದೇಶಾಂಗ ಸಚಿವರು ಸೇರಿದಂತೆ ಪ್ರತಿಯೊಬ್ಬರು ಭಾರತದ ಬಗ್ಗೆ ಹಗುರವಾಗಿ ಮಾತನಾಡುಂತಾಗಿದೆ. ಇದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತದ ಬಗ್ಗೆ ಅವಮಾನ ಅನುಭವಿಸುವಂತಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ವರಾಜ್ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಹರಿಹಾಯ್ದರು.

ಕಲಬುರಗಿ ಯ ಐವಾನ್ ಇ ಶಾಹಿ ಅತಿಥಿ ಗೃಹದಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಅವರು ಮಾತನಾಡಿ, “ಅಮೇರಿಕಾದ ವಿದೇಶಾಂಗ ಅಧಿಕಾರಿಯೊಬ್ಬರು ನಾವು ಭಾರತವನ್ನು ಬೆಳೆಯಲು ಬಿಡುವುದಿಲ್ಲ. ಯುದ್ದದ ಪರಿಣಾಮದಿಂದಾಗಿ ಭಾರತ, ರಷ್ಯಾದಿಂದ 30 ದಿನಗಳ ವರೆಗೆ ತೈಲ ಖರೀದಿಸಲು ಅನುಮತಿ ನೀಡಿದ್ದೇವೆ ಎಂದು ಹೇಳಿಕೆ ನೀಡಿದ್ದಾರೆ‌. ಭಾರತಕ್ಕೆ ಅನುಮತಿ ನೀಡಲು ಅವರು ಯಾರು ? ಮೋದಿ, ಜೈಶಂಕರ್ ಸೇರಿದಂತೆ ಬಿಜೆಪಿ ನಾಯಕರು ಯಾರೊಬ್ಬರು ಈ ಬಗ್ಗೆ ಪ್ರತಿಕ್ರಿಯೆ ನೀಡಿಲ್ಲ. ಭಾರತದ ಬಗ್ಗೆ ಹಗುರವಾಗಿ ಮಾತನಾಡುತ್ತಿರುವುದರಿಂದಾಗಿ ಅಂತರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಅವಮಾನವಾಗುತ್ತಿದೆ ಎಂದು ಖರ್ಗೆ ಟೀಕಿಸಿದರು.

ಪ್ರಶ್ನೆಯೊಂದಕ್ಕೆ‌ ಉತ್ತರಿಸುತ್ತಿದ್ದ ಸಚಿವರು, ” ನಾನು ಮನಸು ಮಾಡಿದರೆ ಮೋದಿ ಅವರ ರಾಜಕೀಯ ಭವಿಷ್ಯ ಹಾಳು ಮಾಡಬಲ್ಲೆ. ಆದರೆ, ಮೋದಿ ನನ್ನ ಸ್ನೇಹಿತರು ಹಾಗಾಗಿ ನಾನು ಹಾಗೆ ಮಾಡುವುದಿಲ್ಲ ” ಎಂದು ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಹೇಳಿದ್ದಾರೆ ಇದಕ್ಕೂ ಕೂಡಾ ಮೋದಿ ಪ್ರತಿಕ್ರಿಯೆ ನೀಡಿಲ್ಲ. ಯಾಕೆ ಅವರು ಮಾತಮಾಡುತ್ತಿಲ್ಲ, ಮೋದಿಯವರ ಬಗ್ಗೆ ಎಫ್ಸ್ಟೀನ್ ಫೈಲ್ ನಲ್ಲಿ ಏನಾದರೂ ಇದೆಯಾ ? ಎಂದು ಪ್ರಿಯಾಂಕ್ ಖರ್ಗೆ ವ್ಯಂಗ್ಯ ವಾಡಿದರು.

ಈ ಹಿಂದೆ ಮಧ್ಯಪ್ರಾಚ್ಯಗಳ ವಿಚಾರದಲ್ಲಿ ಅಮೇರಿಕಾ ಮಧ್ಯೆ ಪ್ರವೇಶಿಸಿದಾಗ ಅಂದಿನ ಪ್ರಧಾನಿ ಮನಮೋಹನ್ ಸಿಂಗ್ ಅವರು ಆ ಬಗ್ಗೆ ಆಕ್ಷೇಪ ಎತ್ತಿದ್ದರು. ಅಂತಹ ಎದೆಗಾರಿಕೆ ಮೋದಿಗೆ ಯಾಕೆ ಇಲ್ಲ? ಎಂದು ಪ್ರಶ್ನಿಸಿದ ಸಚಿವರು, ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಬಿಜೆಪಿವರು ನೆಹರು , ಸೋನಿಯಾ, ರಾಹುಲ್ ಗಾಂಧಿ ಬಗ್ಗೆ ಮಾತನಾಡುತ್ತಾರೆ. ಸ್ವತಃ ಮೋದಿ ಸಿನೆಮಾ ನಟ ನಟಿಯರ ಮದುವೆ, ಕ್ರಿಕೆಟ್ ತಂಡಕ್ಕೆ ಶುಭಾಶಯ ಕೋರಲು ಹೋಗುತ್ತಾರೆ. ಆದರೆ, ವಿದೇಶಾಂಗ ನೀತಿಗಖ ಬಗ್ಗೆ ಭಾರತ ದಿಟ್ಟ‌ನಿಲುವಿನ ಬಗ್ಗೆ ಮಾತನಾಡಲು‌ ಅವರಿಗೆ ಸಮಯವಿಲ್ಲ ಎಂದು ಕುಟುಕಿದರು.

ಗೃಹ ಬಳಕೆ‌ ಸಿಲಿಂಡರ್ ಬೆಲೆ ಏರಿಕೆ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಆ ಬಗ್ಗೆ ಕೇಂದ್ರ ಸಚಿವರು ಉತ್ತರಿಸಲಿ. ಬೆಲೆ ಏರಿಕೆಯ ಮಾಸ್ಟರ್ ಸ್ಟೋಕ್ ಬಗ್ಗೆ‌ ಬಿಜೆಪಿಯವರು ಉತ್ತರಿಸಲಿ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಸವಾಲು ಹಾಕಿದರು.

ಕಾಲೇಜುಗಳಲ್ಲಿ‌ ಚುನಾವಣೆ ನಡೆಸುವ ವಿಚಾರಕ್ಕೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಪ್ರಿಯಾಂಕ್ ಖರ್ಗೆ, ಚುನಾವಣೆಗೆ ಪೋಷಕರ ವಿರೋಧ ಸೇರಿದಂತೆ ಎಲ್ಲ ವಿಚಾರಗಳ ಬಗ್ಗೆ ಕೂಲಂಕುಷ ಪರಿಶೀಲನೆ ನಡೆಸಲಾಗುತ್ತದೆ. ಜೆಎನ್ ಯೂ ಸೇರಿದಂತೆ ಬಹುತೇಕ ‌ಶೈಕ್ಷಣಿಕ ಕೇಂದ್ರಗಳಲ್ಲಿ‌ ವಿದ್ಯಾರ್ಥಿ ಸಂಘಕ್ಕೆ‌ ಚುನಾವಣೆ ನಡೆಸಲಾಗುತ್ತಿದೆ. ಎಲ್ಲ ಹಂತದ ಪರಿಶೀಲನೆ ನಂತರ‌ ರೂಪಿಸಲಾದ ನಿಯಮಗಳ ಪ್ರಕಾರ ಎನ್ ಎಸ್ ಐ ಯೂ, ಎಬಿ ವಿಪಿ ಸಂಘಗಳು ಒಪ್ಪಬೇಕಾಗುತ್ತದೆ ಎಂದರು.

ಗ್ರಾಮಪಂಚಾಯತ್ ಅಡಿಯಲ್ಲಿ ಬಿಲ್ ಕಲೆಕ್ಟರ್ ಹಾಗೂ ಡಾಟಾ ಆಪರೇಟರ್ ಅವರುಗಳು ನೇಮಕಾತಿಗೆ ಸಂಬಂಧಿಸಿದಂತೆ ಪ್ರಾವಿಷನಲ್ ಲಿಸ್ಟ್ ಇನ್ನೂ ನೆನೆಗುದಿಗೆ ಬಿದ್ದಿರುವ ಕುರಿತು ಉತ್ತರಿಸಿದ ಸಚಿವರು ಈ ಬಗ್ಗೆ ಒಂದು ವಾರದಲ್ಲೇ ತೀರ್ಮಾನ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments