Homeಕರ್ನಾಟಕಪ್ರಿಯಾಂಕ್ ಖರ್ಗೆ, ಎಂ ಬಿ ಪಾಟೀಲ್ ವಿರುದ್ಧ ತನಿಖೆಗೆ ರಾಜ್ಯಪಾಲರಿಂದ ಅನುಮತಿ ಸಾಧ್ಯತೆ

ಪ್ರಿಯಾಂಕ್ ಖರ್ಗೆ, ಎಂ ಬಿ ಪಾಟೀಲ್ ವಿರುದ್ಧ ತನಿಖೆಗೆ ರಾಜ್ಯಪಾಲರಿಂದ ಅನುಮತಿ ಸಾಧ್ಯತೆ

ಮುಡಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜ್ಯಪಾಲರಿಂದ ಕಂಟಕ ಎದುರಾದಂತೆ ಎಐಸಿಸಿ ಅಧ್ಯಕ್ಷರಿಗೂ, ಸಚಿವರಿಗೂ ಸಮಸ್ಯೆ ಎದುರಾಗಲಿದೆಯಾ ಎಂಬ ಅನುಮಾನ ಮೂಡಿದೆ.

ಎಐಸಿಸಿ‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬದ ಟ್ರಸ್ಟ್‌ಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿ ಹಂಚಿಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್ ಅವರು ಕಾನೂನು ತಜ್ಞರಿಂದ ಮಾಹಿತಿ ಪಡೆದಿದ್ದಾರೆ.

ಖರ್ಗೆ ವಿರುದ್ಧದ ದೂರಿನ ಬಗ್ಗೆ ಈಗಾಗಲೇ ಕಾನೂನು ತಜ್ಞರ ಮಾಹಿತಿ ಪಡೆದಿದ್ದ ರಾಜ್ಯಪಾಲರು, ದೂರಿನಲ್ಲಿ ದಾಖಲಾದ ಅಂಶಗಳ ಕೂಲಂಕುಷ ಮಾಹಿತಿಯೊಂದಿಗೆ ಅಭಿಪ್ರಾಯ ನೀಡುವಂತೆ ಸೂಚನೆ ನೀಡಿದ್ದಾರೆ.

ರಾಜ್ಯಪಾಲರಿಗೆ ಸಲ್ಲಿಕೆ ಮಾಡಿರುವ ಅಭಿಪ್ರಾಯದಲ್ಲಿ ತಜ್ಞರು, ತರಾತುರಿಯಲ್ಲಿ ಭೂಮಿ ಹಂಚಿಕೆ ಮಾಡಿರುವ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ. ಅರ್ಜಿ ಸಲ್ಲಿಕೆಯಾದ ಎರಡೇ ದಿನಗಳಲ್ಲಿ ಭೂ ಹಂಚಿಕೆ ಪ್ರಕ್ರಿಯೆ ಮಾಡಿರುವುದರಿಂದ ಪ್ರಶ್ನೆ ಮೂಡಿದೆ ಎಂದಿದ್ದಾರೆ.

ರಾಜ್ಯಪಾಲರು ತಜ್ಞರ ಅಭಿಪ್ರಾಯ ಪರಿಶೀಲಿಸಿ ಪ್ರಕರಣದ ಸಂಬಂಧ ಹೆಚ್ಚಿನ ತನಿಖೆಗೆ ಆದೇಶಿಸುವ ಸಾಧ್ಯತೆ ಇದೆ. ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಎಂ ಬಿ ಪಾಟೀಲ್ ವಿರುದ್ಧ ತನಿಖೆಗೆ ಅನುಮತಿ ನೀಡುವ ಸಾಧ್ಯತೆ ಇದೆ.

ಒಂದು ವೇಳೆ ಪ್ರಿಯಾಂಕ್ ಖರ್ಗೆ ಹಾಗೂ ಎಂ ಬಿ ಪಾಟೀಲ್ ವಿರುದ್ಧ ರಾಜ್ಯಪಾಲರು ತನಿಖೆಗೆ ಆದೇಶಿಸಿದಲ್ಲಿ ರಾಜ್ಯಪಾಲರು ಹಾಗೂ ರಾಜ್ಯ ಸರ್ಕಾರದ ನಡುವಣ ಸಂಘರ್ಷ ತಾರಕ್ಕೇರಲಿದೆ.

ಈಗಾಗಲೇ ಮುಡಾ ಹಗರಣ ಸಂಬಂಧ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಸರ್ಕಾರ ಸಿಡಿದೆದ್ದಿದೆ. ವಿವಿಗಳಿಗೆ ಕುಲಪತಿ ನೇಮಕ ವಿಚಾರದಲ್ಲಿ ರಾಜ್ಯಪಾಲರ ಅಧಿಕಾರ ಮೊಟಕುಗೊಳಿಸುವ ನಿಟ್ಟಿನಲ್ಲಿ ವಿಧೇಯಕಕ್ಕೆ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದೀಗ ಮತ್ತೊಂದು ಸುತ್ತಿನ ಕದನಕ್ಕೆ ಅಖಾಡ ಸಿದ್ಧವಾಗುತ್ತಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments