Homeಕರ್ನಾಟಕಬಿಬಿಎಂಪಿ-ಬಿಡಿಎ ನಡುವೆ ಸಮನ್ವಯ ಕೊರತೆ, ಜನರಿಗೆ ತಪ್ಪದ ಅಲೆದಾಟ: ಆರ್‌ ಅಶೋಕ್‌

ಬಿಬಿಎಂಪಿ-ಬಿಡಿಎ ನಡುವೆ ಸಮನ್ವಯ ಕೊರತೆ, ಜನರಿಗೆ ತಪ್ಪದ ಅಲೆದಾಟ: ಆರ್‌ ಅಶೋಕ್‌

ಸಾರ್ವಜನಿಕರು ತಮ್ಮ ಸ್ವಂತ ನಿವೇಶನದಲ್ಲಿ ತಮ್ಮ ಸ್ವಂತ ದುಡ್ಡಿನಲ್ಲಿ ಮನೆ ಕಟ್ಟಿಸಬೇಕಾದರೂ ವರ್ಷಗಟ್ಟಲೇ ಬಿಬಿಎಂಪಿ, ಬಿಡಿಎ ಕಚೇರಿಗಳಿಗೆ ಅಲೆದಾಟ ನಡೆಸಬೇಕಾದ ದುಸ್ಥಿತಿ ನಿರ್ಮಾಣವಾಗಿದೆ ಎಂದು ವಿಪಕ್ಷ ನಾಯಕ ಆರ್‌ ಅಶೋಕ್‌ ಟೀಕಿಸಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಬಗ್ಗೆ ಬರೆದಿಕೊಂಡಿರುವ ಅವರು, “ಕಾಂಗ್ರೆಸ್‌ನ ತುಘಲಕ್ ಸರ್ಕಾರದ ಆಡಳಿತದಲ್ಲಿ ಸಚಿವರಿಗೆ ಅಧಿಕಾರಿಗಳ ಮೇಲೆ ಹಿಡಿತವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇಲಾಖೆಗಳ ನಡುವೆ ಸಮನ್ವಯತೆ ಇಲ್ಲದಂತಾಗಿದೆ” ಎಂದಿದ್ದಾರೆ.

“ಬಿಬಿಎಂಪಿ ವ್ಯಾಪ್ತಿಯಲ್ಲಿ 4 ಸಾವಿರ ಚದರ ಅಡಿ (50X80) ವಿಸ್ತೀರ್ಣದ ವರೆಗಿನ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಆನ್‌ಲೈನ್‌ ಮೂಲಕ ನಕ್ಷೆ ಮಂಜೂರಾತಿಗೆ ʼನಂಬಿಕೆ ನಕ್ಷೆʼ ಯೋಜನೆ ಜಾರಿಗೆ ತರಲಾಗುತ್ತಿದೆ ಎಂದು ಬಿಟ್ಟಿ ಪ್ರಚಾರ ಪಡೆದುಕೊಂಡ ಕಾಂಗ್ರೆಸ್‌ ಸರ್ಕಾರ, ಈಗ ಏಕಾಏಕಿ ನಿಯಮ ಬದಲಾವಣೆ ಮಾಡಿ ಬಿಡಿಎ ಬಡಾವಣೆಗಳಲ್ಲಿರುವ ನಿವೇಶನಗಳಿಗೆ ಬಿಡಿಎ ಬಳಿಯೇ ನಕ್ಷೆ ಅನುಮತಿ ಪಡೆಯಬೇಕು ಎಂಬ ಆದೇಶ ಹೊರಡಿಸಿದೆ” ಎಂದು ‌ವಾಗ್ದಾಳಿ ನಡೆಸಿದ್ದಾರೆ.

“ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ ತಾವು ನಂಬಿಕೆ ನಕ್ಷೆ ಯೋಜನೆ ಜಾರಿ ಮಾಡುವಾಗ ಬಿಬಿಎಂಪಿ ಮತ್ತು ಬಿಡಿಎ ಅಧಿಕಾರಿಗಳನ್ನ ವಿಶ್ವಾಸಕ್ಕೆ ತೆಗೆದುಕೊಂಡಿರಲಿಲ್ಲವೇ? ಬಿಬಿಎಂಪಿ ಮತ್ತು ಬಿಡಿಎ ನಡುವೆ ತಾಳಮೇಳವಿಲ್ಲದೆ ನಿಯಮಗಳನ್ನು ಮನಬಂದಂತೆ ಬದಲಾಯಿಸಿದರೆ ಸಾರ್ವಜನಿಕರಿಗೆ ತೊಂದರೆ ಆಗುವುದಿಲ್ಲವೇ” ಎಂದು ಕೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments