Homeಕರ್ನಾಟಕಮುಡಾ ಪ್ರಕರಣ: ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಡಿ.10 ಮುಂದೂಡಿಕೆ

ಮುಡಾ ಪ್ರಕರಣ: ಸಿಬಿಐ ತನಿಖೆಗೆ ಕೋರಿರುವ ಅರ್ಜಿ ವಿಚಾರಣೆ ಡಿ.10 ಮುಂದೂಡಿಕೆ

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದು ಕೋರಿರುವ ಅರ್ಜಿಯ ವಿಚಾರಣೆಯನ್ನು ಡಿಸೆಂಬರ್‌ 10ಕ್ಕೆ ನ್ಯಾಯಾಲಯ ಮುಂದೂಡಿದೆ.

ಲೋಕಾಯುಕ್ತ ತನಿಖೆ ಬದಲು, ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ದೂರುದಾರ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ವಿಚಾರವಣೆ ನಡೆಸಿದ ನ್ಯಾಯಾಲಯ ಡಿ.10ಕ್ಕೆ ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.

ಇದರ ಬೆನ್ನಲ್ಲೇ ಮೈಸೂರು ಲೋಕಾಯುಕ್ತ ಪೊಲೀಸರು ಕೂಡ ಮುಡಾ ಹಗರಣದ ತನಿಖಾ ವರದಿಯನ್ನು ಸಲ್ಲಿಕೆ ಮಾಡದೆ ಹಿಂದೆ ಸರಿದಿದ್ದಾರೆ.

“ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಹಗರಣದ ಕುರಿತು ಲೋಕಾಯುಕ್ತ ತನಿಖೆ ನಡೆಸುತ್ತಿದ್ದು, ಲೋಕಾಯುಕ್ತ ಅಧಿಕಾರಿಗಳ ನಡೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಹಾಗಾಗಿ ತನಿಖೆಯನ್ನು ಸಿಬಿಐಗೆ ಒಪ್ಪಿಸಬೇಕು” ಎಂದು ಸ್ನೇಹಮಯಿ ಕೃಷ್ಣ ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments