ಸರ್ಕಾರದ ಕಚೇರಿ ಮತ್ತು ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ನೀರಿನ ಬಾಟಲ್ಗಳ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ. 2024 ನವೆಂಬರ್ನಲ್ಲೇ ಈ ನಿಯಮ ಜಾರಿಗೆ ತಂದಿದ್ದರೂ ಆದೇಶ ಪಾಲನೆ ಆಗದಿರುವ ಹಿನ್ನಲೆಯಲ್ಲಿ ಮತ್ತೆ ಜಾರಿಗೆ ತರಲಾಗಿದೆ.
ಪ್ಲಾಸ್ಟಿಕ್ನಿಂದ ಪರಿಸರ ಹಾಗೂ ಮನಷ್ಯನ ಆರೋಗ್ಯ ಮೇಲೆ ಬೀಳುವ ದುಷ್ಪರಿಣಾಮ ತಡೆಯಲು ಸರ್ಕಾರ ಈ ನಿಯಮ ಜಾರಿಗೆ ಜನವರಿ 31 ರಂದು ಸುತ್ತೋಲೆ ಹೊರಡಿಸಿದೆ.
ಹಲವಾರು ವೇದಿಕೆ ಕಾರ್ಯಕ್ರಮಗಳಲ್ಲಿ ಅತಿಥಿಗಳಿ ಅರ್ಧ ಲೀಟರ್ ನೀರಿನ ಬಾಟಲ್ಗಳನ್ನು ಮುಂದಿಡುವುದು ರೂಢಿಯಾಗಿತ್ತು. ಹಲವೆಡೆ ಸಾರ್ವಜನಿಕರಿಗೂ ವಿತರಿಸಲಾಗುತ್ತದೆ. ನೂರಾರು, ಸಾವಿರಾರು ಸಂಖ್ಯೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯಕ್ಕೆ ಸರ್ಕಾರವೇ ಪ್ರೋತ್ಸಾಹಿಸಿದಂತಾಗುತ್ತದೆ ಎಂಬ ಕಾರಣಕ್ಕೆ ಏಕ ಬಳಕೆಯ ಪ್ಲಾಸ್ಟಿಕ್ ಬಾಟಲ್ಗಳನ್ನು ಕೊಡುವಂತಿಲ್ಲ ಎಂದು ಕಟ್ಟುನಿಟ್ಟಿನ ನಿರ್ಧಾರವನ್ನು ಸರ್ಕಾರ ಕೈಕೊಂಡಿದೆ.
ಬೆಂಗಳೂರು ಸೇರಿದಂತೆ ಕರ್ನಾಟಕದ ಎಲ್ಲ ಕಡೆಯೂ ಈ ಆದೇಶ ಜಾರಿಗೆ ಬರಲಿದೆ. ರಾಜ್ಯದ ಸರ್ಕಾರಿ ಕಚೇರಿ, ನಿಗಮ, ಮಂಡಳಿ, ವಿಶ್ವವಿದ್ಯಾನಿಲಯಗಳು, ಹಾಗೂ ಸರ್ಕಾರದ ಅನುದಾನದಿಂದ ಮಾಡುವ ಯಾವುದೇ ಕಾರ್ಯಕ್ರಮ, ಸಭೆ ಸಮಾರಂಭಗಳಲ್ಲಿ ಏಕಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲ್ ನ ನೀರಿನ ಬಳಕೆ, ಸರಬರಾಜು ನಿಷೇಧಿಸಲಾಗಿದೆ.
ಸರ್ಕಾರದ ಸಭೆ ಸಮಾರಂಭಗಳಲ್ಲಿ ಕಯಡಿಯುವ ನೀರು ಒದಗಿಸಲು ಶುಚಿತ್ವ ಉಳ್ಳ ಗ್ಲಾಸ್, ಸ್ಟೀಲ್, ಪೇಪರ್ ಮತ್ತಿತ್ತರ ಪ್ಲಾಸ್ಟಿಕ್ ಅಲ್ಲದ ಲೋಟಗಳಲ್ಲಿ ಸರಬರಾಜು ಮಾಡಲು ಕ್ರಮವಹಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.