ಮತದಾನ ಗೌಪ್ಯತೆ ಕಾಪಾಡದ ಆರೋಪದ ಮೇಲೆ ದಾವಣಗೆರೆ ಬಿಜೆಪಿ ಸಂಸದ ಜಿ ಎಂ ಸಿದ್ದೇಶ್ವರ ವಿರುದ್ಧ ನಗರದ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತೋಟಗಾರಿಕೆ ಸಹಾಯಕ ನಿರ್ದೇಶಕ, ಎಫ್ ಎಸ್ ಟಿ ಮುಖ್ಯಸ್ಥ ರಾಜೇಶ್ ಕುಮಾರ್ ಅವರು ಸಂಸದರ ವಿರುದ್ಧ ಮತದಾನ ಗೌಪ್ಯತೆ ಕಾಪಾಡಿಲ್ಲ ಎಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ದಾವಣಗೆರೆ ಲೋಕಸಭಾ ಕ್ಷೇತ್ರದ 106ನೇ ವೃತ್ತದ ಲೋಕಸಭಾ ಕ್ಷೇತ್ರ ವ್ಯಾಪ್ತಿಗೆ ಬರುವ ಪಿಎಸ್- 236 ಮಾಗನೂರು ಬಸಪ್ಪ ಪಬ್ಲಿಕ್ ಶಾಲೆಯ ಕೊಠಡಿ ಸಂಖ್ಯೆ- 1ರಲ್ಲಿ ಜಿ ಎಂ ಸಿದ್ದೇಶ್ವರ್ ಅವರು ಮತ ಚಲಾಯಿಸಿದರು. ಇದೇ ವೇಳೆ ದಾವಣಗೆರೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ತಮ್ಮ ಪತ್ನಿ ಗಾಯತ್ರಿ ಸಿದ್ದೇಶ್ವರ ಅವರೊಂದಿಗೆ ಹಾಲಿ ಬಿಜೆಪಿ ಸಂಸದರು ಮತದಾನ ಮಾಡಿದರು.
ಮೊದಲು ಮತದಾನ ಮಾಡಿದ ಸಿದ್ದೇಶ್ವರ ಅವರು, ಗಾಯತ್ರಿಯವರ ಮತದಾನ ಆಗುವವರೆಗೆ ಅಲ್ಲೇ (ಮತಯಂತ್ರದ ಪಕ್ಕದಲ್ಲೇ) ಉಳಿದಿದ್ದರು. ಅಲ್ಲದೆ, ಗಾಯಿತ್ರಿ ಸಿದ್ದೇಶ್ವರ್ ರವರು ಮತದಾನ ಮಾಡುತ್ತಿರುವುದನ್ನು ಸಿದ್ದೇಶ್ವರ್ ಜಿಎಂ ರವರು ಪಕ್ಕದಲ್ಲೇ ನಿಂತು ನೋಡಿದರು. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿದೆ.
ಈ ವಿಡಿಯೋ ತುಣುಕು ಜಿಲ್ಲೆಯ ಸಹಾಯಕ ಚುನಾವಣಾಧಿಕಾರಿಗಳಿಗೂ ತಲುಪಿದ್ದು, ಆ ಹಿನ್ನೆಲೆಯಲ್ಲಿ ಅವರು ದೂರು ದಾಖಲಿಸುವಂತೆ ಪೊಲೀಸರಿಗೆ ಸೂಚಿಸಿದ್ದರು. ಆ ಹಿನ್ನೆಲೆಯಲ್ಲಿ ದೂರು ದಾಖಲಾಗಿದೆ.
ಬಳ್ಳಾರಿಯಲ್ಲಿ ಕಾರ್ಪೊರೇಟರ್ ವಿರುದ್ಧ ಕ್ರಮ
ಮೇ 7ರಂದು ನಡೆದಿದ್ದ ಲೋಕಸಭಾ ಚುನಾವಣೆಯ ಮತದಾನದ ಸಂದರ್ಭದಲ್ಲಿ ಮತದಾನದ ಗೌಪ್ಯತೆ ನಿಯಮ ಉಲ್ಲಂಘಿಸಿದ್ದ ಬಳ್ಳಾರಿಯ ಕಾರ್ಪೋರೇಟರ್ ಒಬ್ಬರ ವಿರುದ್ದ ಎಫ್ ಐ ಆರ್ ದಾಖಲಾಗಿದೆ. ಬಳ್ಳಾರಿ ಪಾಲಿಕೆ 10 ನೇ ವಾರ್ಡ್ ನ ಬಿಜೆಪಿ ಸದಸ್ಯ ಕೋನಂಕಿ ತಿಲಕ್ ಅವರು ಮತದಾನದ ನಂತರ ಮತದಾರರ ಮೇಲೆ ಪ್ರಭಾವ ಬೀರುವಂಥ ಕೆಲಸ ಮಾಡಿದ್ದಾರೆಂಬ ಅವರ ಮೇಲಿದೆ.