ಗುಜರಾತ್ ರಾಜಧಾನಿ ಅಹಮದಾಬಾದ್ ವಿಮಾನ ನಿಲ್ದಾಣದಿಂದ 242 ಪ್ರಯಾಣಿಕರೊಂದಿಗೆ ಲಂಡನ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನವು ಮೇಲೇರಿರುವ ಸಮಯದಲ್ಲಿ ಅಪಘಾತಕ್ಕೀಡಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಅಹಮದಾಬಾದ್ನ ಮೇಘನಿ ನಗರ ಬಳಿ ಪತನಗೊಂಡಿದ್ದು, ಹೊತ್ತಿ ಉರಿಯುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ವೈದ್ಯಕೀಯ ಸಿಬ್ಬಂದಿಗಳು ಹಾಗೂ ಆ್ಯಂಬುಲೆನ್ಸ್ಗಳು ಸ್ಥಳಕ್ಕೆ ದಾವಿಸಿವೆ. ಹಲವು ಸಾವು ನೋವು ಸಂಭವಿಸಿರುವ ಸಾಧ್ಯತೆ ಇದೆ. ಕೆಲವು ಜನಪ್ರತಿನಿಧಿಗಳು ಇದ್ದರು ಎನ್ನಲಾಗಿದೆ.
ಎಐ 171 ಬೋಯಿಂಗ್ ವಿಮಾನ ಪತನವಾಗಿದೆ. ಮೇಲೇರಿರುವ ಸಮಯದಲ್ಲಿ ಬಹುಮಹಡಿಯ ಕಟ್ಟಡಕ್ಕೆ ಬಡಿದು ವಿಮಾನ ಪತನಗೊಂಡಿದೆ ಎಂದು ಸದ್ಯಕ್ಕೆ ತಿಳಿದುಬಂದಿದೆ. ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಇದ್ದರು ಎನ್ನುವ ಮಾಹಿತಿ ವರದಿಯಾಗಿದೆ. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್ನತ್ತ ತೆರಳುತ್ತಿತ್ತು.
ಘಟನೆಯ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್, ರಾಜ್ಯ ಗೃಹ ಸಚಿವ ಹರ್ಷ ಸಾಂಘವಿ ಹಾಗೂ ಅಹಮದಾಬಾದ್ ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ್ದಾರೆ.