Homeಕರ್ನಾಟಕನೇಹಾ ಹಿರೇಮಠ ಕೊಲೆ ರೀತಿಯಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಕೊಲೆ

ನೇಹಾ ಹಿರೇಮಠ ಕೊಲೆ ರೀತಿಯಲ್ಲೇ ಹುಬ್ಬಳ್ಳಿಯಲ್ಲಿ ಮತ್ತೊಬ್ಬ ಯುವತಿ ಕೊಲೆ

ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿ ವೀರಾಪುರ ಓಣಿಯಲ್ಲಿ ಮನೆಯಲ್ಲಿ ಮಲಗಿದ್ದ ಯುವತಿಗೆ ಯುವಕನೊಬ್ಬ ಚಾಕು ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ.

ಯುವತಿ ಅಂಜಲಿ ಅಂಬಿಗೇರ(19) ಮೃತಪಟ್ಟ ಯುವತಿ. ಹುಬ್ಬಳ್ಳಿಯ ವೀರಾಪುರ ಓಣಿಯ ಮೂರನೇ ಕ್ರಾಸ್ ನಿವಾಸಿ, ಆಟೊ ಚಾಲಕ ಗಿರೀಶ ಸಾವಂತ ಕೊಲೆ ಮಾಡಿದ ಆರೋಪಿಯಾಗಿದ್ದಾನೆ.

“ಬುಧವಾರ ಬೆಳಗಿನ ಜಾವ 5ಗಂಟೆಗೆ ಅಂಜಲಿ ಮನೆಗೆ ಹೋಗಿ ಬಾಗಿಲು ಬಡಿದಿದ್ದಾನೆ. ಯಾರೂ ಬಾಗಿಲು ತೆರೆಯದಿದ್ದಾಗ, ಮತ್ತೊಮ್ಮೆ ಜೋರಾಗಿ ಬಾಗಿಲು ಬಡಿದಿದ್ದಾನೆ. ಅಂಜಲಿ ಸಹೋದರಿ ಬಾಗಿಲು ತೆರದಿದ್ದರು. ಏಕಾಏಕಿ ಒಳಗೆ ನುಗ್ಗಿದ ಗಿರೀಶ, ನಿದ್ದೆಯಲ್ಲಿದ್ದ ಅಂಜಲಿಯ ಕುತ್ತಿಗೆ ಹಾಗೂ ಹೊಟ್ಟೆ ಭಾಗಕ್ಕೆ ಚಾಕು ಇರಿದಿದ್ದಾನೆ. ತೀವ್ರ ರಕ್ತಸ್ರಾವವಾಗಿ ಮೃತಪಟ್ಟಿದ್ದಾಳೆ” ಎಂದು ಪೊಲೀಸರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಬೆಂಡಿಗೇರಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದೆ. ಪರಸ್ಪರ ಪ್ರೀತಿಸುತ್ತಿದ್ದ ಅಂಜಲಿ ಮತ್ತು ಗಿರೀಶ ನಡುವೆ ವೈಮನಸ್ಸು ಮೂಡಿತ್ತು ಎನ್ನಲಾಗಿದೆ. ಇದರಿಂದ ಕೋಪಗೊಂಡ ಗಿರೀಶ್ ಕೊಲೆ ಕೃತ್ಯ ಎಸಗಿದ್ದಾನೆ ಎಂದು ತಿಳಿದುಬಂದಿದೆ.

ಕೊಲೆ ಮಾಡಿದ ಯುವಕ ಆಕೆಗೆ ನೇಹಾ ಕೊಲೆಯಾದ ಮಾದರಿಯಲ್ಲಿಯೇ ನಿನ್ನನ್ನು ಸಾಯಿಸುವೆ ಎಂದು ಎಚ್ಚರಿಸಿದ್ದ ಎಂಬ ಅಂಶ ಬೆಳಕಿಗೆ ಬಂದಿದೆ.

ಕಳ್ಳತನ ಕೇಸ್‌ಗಳಲ್ಲಿ ಆರೋಪಿ

ಕೃತ್ಯವೆಸಗಿದ ಗಿರೀಶ್ ಸಾವಂತ ವಿರುದ್ಧ ಹಲವು ಕಳ್ಳತನ ಪ್ರಕರಣಗಳಲ್ಲಿ ಶಾಮೀಲಾದ, ಜತೆಗೆ ಬೈಕ್ ಕಳ್ಳತನದಲ್ಲಿಯೂ ಆರೋಪಿ ಎಂದು ತಿಳಿದುಬಂದಿದೆ.

ಅಜ್ಜಿ ದೂರನ್ನು ನಿರಾಕರಿಸಿದ್ದರೆ ಪೊಲೀಸ್‌

ಇನ್ನು ಆರೋಪಿ ಗಿರೀಶ್ ಸಾವಂತ ಅಂಜಲಿಗೆ ಬೆದರಿಕೆ ಹಾಕಿರುವ ವಿಚಾರವಾಗಿ ಅಜ್ಜಿ ಗಂಗಮ್ಮ ಪೊಲೀಸರ ಗಮನಕ್ಕೆ ತಂದಿದ್ದರು. ಆದರೆ, ಅಜ್ಜಿಯ ಮಾತಿಗೆ ಪೊಲೀಸರು ನಿಗಾವಹಿಸಲಿಲ್ಲ ಎಂಬ ಆರೋಪ ಕುಟುಂಬದಿಂದ ಕೇಳಿಬಂದಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments