Homeಕರ್ನಾಟಕಬೆಂಗಳೂರು ಭಾರತದ ಹೃದಯವಾಗಬೇಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು ಭಾರತದ ಹೃದಯವಾಗಬೇಕು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

  • ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿಗಳ ಸಂವಾದ

ಆಸ್ತಿ ಮಾಲೀಕರ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಅರಿವಿದ್ದು, ಆಸ್ತಿಯ ಸಂಪೂರ್ಣ ಹಕ್ಕು ಮಾಲೀಕರಿಗಿರಬೇಕು
ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದರು.

ಅವರು ಇಂದು ಕರ್ನಾಟಕ ಅಪಾರ್ಟ್ಮೆಂಟ್ (ಮಾಲೀಕತ್ವ ಮತ್ತು ನಿರ್ವಹಣೆ) 2026 ಕುರಿತು ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ನಡೆದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಆಸ್ತಿ ಕೊಳ್ಳುವಾಗ ಅದರ ಸಾಧಕ ಬಾಧಕಗಳನ್ನು ಮಾಲೀಕರೇ ನೋಡಿಕೊಳ್ಳುವಂತಾಗಬೇಕು. ಮಾಲೀಕರಾದ ಮೇಲೆ ಒಪ್ಪಂದ, ನೋಂದಣಿ, ಒಳಗೆ ಹೋದ ನಂತರ ಬೇರೆ ಬೇರೆ ರೀತಿಯಲ್ಲಿ ತಲೆದೋರುವ ಸಮಸ್ಯೆಗಳ ಬಗ್ಗೆ ಸರ್ಕಾರಕ್ಕೆ ಸಂಪೂರ್ಣ ಅರಿವಿದೆ ಎಂದರು.

ಕಷ್ಟ ಪಟ್ಟು ಗಳಿಸಿರುವ ಆಸ್ತಿಯನ್ನು ಮಾಲೀಕರು ಸರಿಯಾಗಿ ಅನುಭವಿಸಬೇಕೆನ್ನುವುದು ಸರ್ಕಾರದ ಆಶಯವಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ರಾಜ್ಯದಲ್ಲಿ ಇ ಖಾತಾ ವನ್ನು ಮನೆ ಬಾಗಿಲಿಗೆ ಕೊಡುವ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಕ್ರಾಂತಿಯನ್ನೇ ಉಂಟುಮಾಡಿದೆ ಎಂದರು. ಬೆಂಗಳೂರಿನ 40 ಲಕ್ಷ ಆಸ್ತಿಗಳಲ್ಲಿ 26 ಲಕ್ಷ ಆಸ್ತಿಗಳಿಗೆ ಇ ಖಾತಾ ಮಾಡಿಕೊಡಲಾಗಿದೆ. ಇಡೀ ದೇಶದಲ್ಲಿ ಇಂಥ ಮತ್ತೊಂದು ವ್ಯವಸ್ಥೆ ಇಲ್ಲ ಎಂದು ಹೇಳಿದರು.

ದಾಖಲಾತಿಗಳ ಸರಾಗ ವರ್ಗಾವಣೆಗೆ ಕ್ರಮ

ಅಪಾರ್ಟ್ ಮೆಂಟ್ ಗಲ್ಲಿ STP, ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲು ಸರ್ಕಾರ ಸುಧಾರಣೆಗಳನ್ನು ತಂದಿದೆ. ಅಂತರ್ಜಲ ವೃದ್ಧಿ, ಕಾವೇರಿ 5 ನೇ ಹಂತಗಳ ಮೂಲಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಕೆಲವು ಡೆವೆಲಪರ್ ಗಳು ಸಮಸ್ಯೆಗಳನ್ನು ಸೃಷ್ಟಿಸುತ್ತಾರೆ. ಅವರೊಂದಿಗೂ ಮಾತನಾಡಿ ದಾಖಲಾತಿಗಳ ವರ್ಗಾವಣೆ ಸರಾಗವಾಗಿ ಆಗಬೇಕೆಂದು ಸೂಚಿಸಲಾಗುವುದು. ಸಮಸ್ಯೆಗಳನ್ನು ಆದಷ್ಟು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಿದೆ ಎಂದರು.

ಅಧಿಕಾರ ವಿಕೇಂದ್ರೀಕರಣ ನಮ್ಮ ಸರ್ಕಾರದ ಉದ್ದೇಶವಾಗಿದೆ

ಈಸ್ ಆಫ್ ಬಿಸಿನೆಸ್ ಗಾಗಿ ನಗರದಲ್ಲಿ ಐದು ಕಾರ್ಪೊರೇಷನ್ ಗಳನ್ನು ರಚಿಸಲಾಗಿದ್ದು, ವಿಮಾನ ನಿಲ್ದಾಣ, ಎಲೆಕ್ಟ್ರಾನಿಕ್ ಸಿಟಿ ಬಳಿ, ಅಕ್ಕಪಕ್ಕದ ಅಪಾರ್ಟ್ ಮೆಂಟ್ ಗಳ ಸಮಸ್ಯೆಗಳನ್ನೂ ಬಗೆಹರಿಸುವ ನಿಟ್ಟಿನಲ್ಲಿ ಸರ್ಕಾರ ಬದ್ಧವಾಗಿದೆ. ಅಧಿಕಾರ ವಿಕೇಂದ್ರೀಕರಣ ನಮ್ಮ ಸರ್ಕಾರದ ಉದ್ದೇಶ. ವ್ಯಾಜ್ಯಗಳಿಗೆ ಹೋಗದೆ ಬಗೆಹರಿಸಿಕೊಳ್ಳಲು ಒತ್ತು ನೀಡಲಾಗುತ್ತಿದೆ ಎಂದರು. ಜನರ ಧ್ವನಿಯೇ ಸರ್ಕಾರದ ಧ್ವನಿಯಾಗಬೇಕು. ಟೀಂ ಕರ್ನಾಟಕವಾಗಿ ನಾವೆಲ್ಲ ಕೆಲಸ ಮಾಡಬೇಕೆಂದು ಸಿಎಂ ಕರೆ ನೀಡಿದರು.

ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧ

ಬೆಂಗಳೂರಿನಲ್ಲಿ ಬಹಳ ವರ್ಷಗಳಿಂದ ಅಸ್ತಿತ್ವದಲ್ಲಿರುವ ಸಮಸ್ಯೆಗಳನ್ನು ಬಗೆಹರಿಸಲು ಸರ್ಕಾರ ಬದ್ಧವಾಗಿದೆ ನಗರದಲ್ಲಿ 1.35 ಕೋಟಿ ವಾಹನಗಳಿದ್ದು , ಗುಂಡಿಗಳನ್ನು ಮುಚ್ಚಲೆಂದೇ 4000 ಕೋಟಿ ವೆಚ್ಚ ಮಾಡಲಾಗಿದೆ. ಬಡವರೂ ಕೂಡ ಮನೆ ಕಟ್ಟಲು ಅಗತ್ಯ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ. ಮರು ಅಭಿವೃದ್ಧಿ ವಿಚಾರದಲ್ಲಿಯೂ ಸಮಸ್ಯೆಗಳಿದ್ದು, ನಿರ್ವಹಣೆ ಮುಂತಾದ ಕೆಲಸಗಳಾಗುತ್ತಿದೆ. ಬಡವರೂ ಕೂಡ ಮನೆ ಕಟ್ಟಲು ಅಗತ್ಯ ನೆರವು ಒದಗಿಸಲು ಸರ್ಕಾರ ಬದ್ಧವಾಗಿದೆ. ಅಧಿಕಾರಿಗಳು ಮನೆ ಬಾಗಿಲಿಗೆ ಬಂದು ದಾಖಲಾತಿಗಳನ್ನು ನೀಡಲು ವ್ಯವಸ್ಥೆ ಮಾಡಲಾಗಿದೆ ಎಂದರು.

ವಿಶ್ವದ ನಾಯಕರು ಬೆಂಗಳೂರಿನತ್ತ ನೋಡುತ್ತಿದ್ದಾರೆ

ಯಾವುದೇ ಕಟ್ಟಡ ಕಾನೂನುಬದ್ಧವಾಗಿ ನಿರ್ಮಾಣವಾಗಬೇಕು. ಭೂಮಿಯ ಬೆಲೆ ಕಡಿಮೆಯಾಗಬೇಕೆನ್ನುವುದು ನಮ್ಮ ಆಶಯ. ಮುಂಬೈ ನಲ್ಲಿ ಕಟ್ಟಡಗಳ ಬೆಲೆ ಹೆಚ್ಚಿದ್ದು, ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಕಟ್ಟಡಗಳನ್ನು ಕೊಳ್ಳಬಹುದಾಗಿದೆ. ಅದಕ್ಕಾಗಿಯೇ ವಿಶ್ವದ ನಾಯಕರು ಬೆಂಗಳೂರಿನತ್ತ ನೋಡುತ್ತಿದ್ದಾರೆ ಎಂದು ತಿಳಿಸಿದರು.

ಸಚಿವರಾದ ಕೃಷ್ಣ ಬೈರೇಗೌಡ, ಬೈರತಿ ಸುರೇಶ್, ಕೆ.ಜೆ.ಜಾರ್ಜ್ , ಬಿಡಿಎ ಅಧ್ಯಕ್ಷ ಎನ್. ಎ .ಹ್ಯಾರಿಸ್, ಅಪಾರ್ಟ್ ಮೆಂಟ್ ಸಂಘಗಳ ಅಧ್ಯಕ್ಷ ರಾಜೀವ್ ಗೌಡ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments