Homeಕರ್ನಾಟಕಬಾಲಕಿಯ ಜೀವ ತೆಗೆದಿದ್ದ ಬಿಹಾರ ಯುವಕ ಪೊಲೀಸ್‌ ಗುಂಡೇಟಿಗೆ ಬಲಿ

ಬಾಲಕಿಯ ಜೀವ ತೆಗೆದಿದ್ದ ಬಿಹಾರ ಯುವಕ ಪೊಲೀಸ್‌ ಗುಂಡೇಟಿಗೆ ಬಲಿ

ಐದು ವರ್ಷದ ಬಾಲಕಿಯ ಜೀವ ತೆಗೆದಿದ್ದ ಬಿಹಾರ ಮೂಲದ ಯುವಕ, ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.

ಬಿಹಾರ ಮೂಲದ ಆರೋಪಿ ರಿತೇಶ್‌ ಕುಮಾರ್‌ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿ. ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿ ತಪ್ಪಿಸಿಕೊಳ್ಳಲು ಮುಂದಾಗಿದ್ದನು. ಆಗ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್​ ಮಾಡಿದ್ದರು. ಮಹಿಳಾ ಪಿಎಸ್‌ಐ ಗುಂಡೇಟು ನೀಡಿದ್ದರು. ಗುಂಡು ತಾಗಿ ತೀವ್ರವಾಗಿ ಗಾಯಗೊಂಡಿದ್ದ ಆರೋಪಿಯನ್ನ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿದರೂ ಚಿಕಿತ್ಸೆ ಫಲಿಸದಿದ್ದರಿಂದ ಜೀವ ಹೋಗಿದೆ.

ವಿಚಾರಣೆ ಮಾಡುವಾಗ ಆರೋಪಿಯು ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದನು. ಈ ವೇಳೆ ಆತನ ಮೇಲೆ ಪೊಲೀಸರು ಗುಂಡು ಹಾರಿಸಿದ್ದಾರೆ. ಕಮಿಷನರ್‌ ಶಶಿಕುಮಾರ್‌ ಅವರು ಕಿಮ್ಸ್​ ಆಸ್ಪತ್ರೆಗೆ ಹೋಗಿ ಗಾಯಗೊಂಡಿರುವ ಮಹಿಳಾ ಪಿಎಸ್‌ಐ ಅನ್ನಪೂರ್ಣ ಹಾಗೂ ಸಿಬ್ಬಂದಿ ಆರೋಗ್ಯ ಹೇಗಿದೆ ಎಂದು ನೋಡಿಕೊಂಡು ಬಂದಿದ್ದಾರೆ.

ಆರೋಪಿ ಹುಬ್ಬಳ್ಳಿಯ ತಾರಿಹಾಳ ಬಳಿ ವಾಸವಿದ್ದನು ಎನ್ನುವ ಮಾಹಿತಿ ಆಧರಿಸಿ ಬಂಧಿಸಲೆಂದು ಪೊಲೀಸರು ಹೋಗಿದ್ದರು. ಆಗ ಸಿಬ್ಬಂದಿ ಮೇಲೆ ದಾಳಿ ಮಾಡಿದ್ದನು. ಗಾಳಿಯಲ್ಲಿ ಗುಂಡು ಹಾರಿಸಲಾಗಿತ್ತು. ಆದರೆ ಆರೋಪಿ ಓಡಿ ಹೋಗಲು ಪ್ರಯತ್ನಿಸಿದಾಗ ಫೈರಿಂಗ್ ಮಾಡಲಾಗಿದ್ದು, ಆರೋಪಿ ಬೆನ್ನಿಗೆ ಗುಂಡು ಹೊಕ್ಕಿದೆ. ಆದ್ರೆ ಆಸ್ಪತ್ರೆಯಲ್ಲಿ ​ಚಿಕಿತ್ಸೆ ಫಲಕಾರಿಯಾಗದೆ ಜೀವ ಹೋಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments