Homeಕರ್ನಾಟಕಗಾಂಧಿ ಸಿದ್ಧಾಂತ ಮುಗಿಸಿಹಾಕುವ ಕೆಲಸಕ್ಕೆ ಕೈ ಹಾಕಿರುವ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

ಗಾಂಧಿ ಸಿದ್ಧಾಂತ ಮುಗಿಸಿಹಾಕುವ ಕೆಲಸಕ್ಕೆ ಕೈ ಹಾಕಿರುವ ಬಿಜೆಪಿ: ಪ್ರಿಯಾಂಕ್‌ ಖರ್ಗೆ ಕಿಡಿ

ಅಂದು – ಗೋಡ್ಸೆಯಿಂದ ಗಾಂಧಿ ಹತ್ಯೆ, ಇಂದು – ಗೋಡ್ಸೆವಾದಿಗಳಿಂದ ಗಾಂಧಿವಾದದ ಹತ್ಯೆ ಎಂದು ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಬಿಜೆಪಿ ಮತ್ತು ಆರ್‌ಎಸ್‌ಎಸ್‌ ನಾಯಕರನ್ನು ಗುರಿಯಾಗಿಸಿಕೊಂಡು ವಾಗ್ದಾಳಿ ನಡೆಸಿದ್ದಾರೆ.

“ಜಗತ್ತಿಗೆ ಅಹಿಂಸೆಯ ಸಂದೇಶವನ್ನು ಪ್ರಬಲವಾಗಿ ನೀಡಿದ್ದವರು ಮಹಾತ್ಮ ಗಾಂಧಿ. ಗಾಂಧಿ ಎಂದಿಗೂ ಅವರ ಕೈಲಿದ್ದ ಕೋಲನ್ನು ಎತ್ತಿ ಹಲ್ಲೆಗೆ ಬಳಸಿದವರಲ್ಲ, ಗಾಂಧಿ ಎಂದಿಗೂ ಸುಳ್ಳಿನ ಮಾರ್ಗ ತೋರಿದವರಲ್ಲ, ಆದರೆ,
ಮಹಾತ್ಮನ ಮಹತ್ವ ಅರಿಯದ ಆರ್‌ಎಸ್‌ಎಸ್‌ ಮತ್ತು ಬಿಜೆಪಿ ನಾಯಕರು ಮಹಾತ್ಮ ಗಾಂಧಿಯವರನ್ನು ಹಿಂಸೆಯ ಪ್ರತಿಪಾದಕರನ್ನಾಗಿ ಚಿತ್ರಿಸಿ ಜಾಹೀರಾತು ನೀಡುವ ಮೂಲಕ ಮತ್ತೊಮ್ಮೆ ಮಹಾತ್ಮ ಗಾಂಧೀಜಿಗೆ ಅವಮಾನಿಸಿದ್ದಾರೆ” ಎಂದು ಹರಿಹಾಯ್ದಿದ್ದಾರೆ.

“ಮಹಾತ್ಮ ಗಾಂಧಿಯವರನ್ನು ದೈಹಿಕವಾಗಿ ಮುಗಿಸಿಹಾಕಿದ್ದಲ್ಲದೆ ಈಗ ಅವರ ಸಿದ್ದಾಂತವನ್ನೂ ಮುಗಿಸಿಹಾಕುವ ಕೆಲಸಕ್ಕೆ ಕೈ ಹಾಕಿರುವ ಬಿಜೆಪಿಯಿಂದ ಗಾಂಧೀಜಿಯನ್ನು ಮತ್ತು ಅವರ ತತ್ವಗಳನ್ನು ನಾವು ರಕ್ಷಿಸಬೇಕಿದೆ” ಎಂದು ಕರೆ ನೀಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments