Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ, ಪೊಲೀಸರಿಂದ ಬಂಧನ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಬಿಜೆಪಿ ನಾಯಕರ ಪ್ರತಿಭಟನೆ, ಪೊಲೀಸರಿಂದ ಬಂಧನ

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಭಂಡತನದ ನಿರ್ಧಾರವನ್ನು ರಾಜ್ಯ ಸರ್ಕಾರ ಕೂಡಲೇ ಕೈಬಿಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಒತ್ತಾಯಿಸಿದರು.

ಬಿಜೆಪಿ ಕಚೇರಿಯಿಂದ ವಿಧಾನಸೌಧಕ್ಕೆ ಸೈಕಲ್ ಜಾಥಾ ಆರಂಭಕ್ಕೂ ಮುನ್ನ ಅವರು ಮಾತನಾಡಿ, “ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಅಲ್ಲಿನವರೆಗೆ ಬಿಜೆಪಿ ಹೋರಾಟ ಮುಂದುವರೆಯಲಿದೆ” ಎಂದು ಎಚ್ಚರಿಸಿದರು.

“ಬಿಜೆಪಿ ಸರಕಾರದ ನಿರ್ಧಾರದ ವಿರುದ್ಧ ರಾಜ್ಯದಾದ್ಯಂತ ಹೋರಾಟ ಮಾಡುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ವಿಮುಖರಾಗುವುದಿಲ್ಲ” ಎಂದರು.

ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ಜಾಥಾ ಏರ್ಪಡಿಸಿದ್ದವು. ಇಳಿಸಿ ಇಳಿಸಿ ಎಂದು ಆಗ್ರಹಿಸಿ ರಾಜ್ಯ ಸರಕಾರಕ್ಕೆ ಧಿಕ್ಕಾರ ಕೂಗುತ್ತಾ ಸೈಕಲ್ ಜಾಥಾ ನಡೆಯಿತು. ಸೈಕಲ್ ಜಾಥಾ ಪ್ರತಿಭಟನೆ ಸ್ವಲ್ಪ ದೂರ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು ಸೈಕಲ್ ಜಾಥಾದಲ್ಲಿ ಭಾಗವಹಿಸಿದವರನ್ನು ಬಂಧಿಸಿದರು.

ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಮೊದಲಾದ ಪ್ರಮುಖರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments