Homeಕರ್ನಾಟಕಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ | ದಲಿತರಿಗಾಗಿ ಯಾರು ಕೈ ಎತ್ತಲಿಲ್ಲ: ಸಂಸದ ರಮೇಶ್ ಜಿಗಜಿಣಗಿ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ | ದಲಿತರಿಗಾಗಿ ಯಾರು ಕೈ ಎತ್ತಲಿಲ್ಲ: ಸಂಸದ ರಮೇಶ್ ಜಿಗಜಿಣಗಿ

ಬಿ ವೈ ವಿಜಯೇಂದ್ರ ಅವರನ್ನು ಬಿಜೆಪಿ ರಾಜ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವ ಬಗ್ಗೆ ಬಿಜೆಪಿಯಲ್ಲೇ ಕೆ ಎಸ್‌ ಈಶ್ವರಪ್ಪ ಸೇರಿದಂತೆ ಹಲವು ಹಿರಿಯ ನಾಯಕರು ಅಸಮಾಧಾನಗೊಂಡಿದ್ದಾರೆ. ಮುಂದುವರಿದು, ಸಂಸದ ರಮೇಶ್ ಜಿಗಜಿಣಗಿ ಕೂಡ ಬೇಸರ ವ್ಯಕ್ತಪಡಿಸಿದ್ದಾರೆ.

ವಿಜಯಪುರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿ, “ವಿಧಾನಸಭಾ ಚುನಾವಣೆಯಲ್ಲಿ ನೋಡಿದ್ದೇವೆ ಲೋಕಸಭೆಯಲ್ಲೂ ನೋಡಿದ್ದೇವೆ. ಅಸೆಂಬ್ಲಿಯಲ್ಲಿ ದೊಡ್ಡ ದೊಡ್ಡ ಗೌಡರು ಸಾಹುಕಾರರುಗಳು ಬಂದರು. ಅವರ ಪರವಾಗಿ ನಾವು ಕೈ ಎತ್ತುತ್ತಲೇ ಇದ್ದೇವೆ. ಕಳೆದ 75 ವರ್ಷಗಳಿಂದ ನಾವು ಕೈ ಎತ್ತಿಕೊಂಡು ಬಂದಿದ್ದೇವೆ” ಎಂದು ಅಸಮಾಧಾನ ವ್ಯಕ್ತಪಡಿಸಿದರು.

“ನಾವು ದಲಿತರು ನಮಗಾಗಿ ಈ ಜೀವನದಲ್ಲಿ ಯಾರು ಕೈ ಎತ್ತಿಲ್ಲ. ಇದು ಬಹಳ ದುಃಖದ ಸಂಗತಿ. ಬಿಜೆಪಿ ರಾಜ್ಯಾಧ್ಯಕ್ಷರಾಗಿ ವಿಜಯೇಂದ್ರರನ್ನು ನಾವಂತೂ ನೇಮಕ ಮಾಡಿಲ್ಲ. ಪಕ್ಷದ ಹಿರಿಯರು ಯಾವ ಯಾವುದೋ ಕಾರಣಕ್ಕೆ ಮಾಡಿದ್ದಾರೆ. ಬಹಳ ಯೋಚಿಸಿ ಯಡಿಯೂರಪ್ಪ ಮಗನೇ ಆಗಬೇಕೆಂದು ನೇಮಿಸಿದ್ದಾರೆ” ಎಂದು ಬೇಸರ ವ್ಯಕ್ತಪಡಿಸಿದರು.

“ವಿಜೇಂದ್ರ ರಾಜ್ಯಾಧ್ಯಕ್ಷ ಆಗಿರುವುದರಿಂದ ನಮಗೇನು ಹೊಟ್ಟೆ ಉರಿ ಇಲ್ಲ. ನಾನೇ ಬಿಜೆಪಿ ರಾಜ್ಯಾಧ್ಯಕ್ಷರಾಗಬೇಕೆಂದು ಅಂದುಕೊಂಡವನು ಅಲ್ಲ. ಆದರೆ, ದಲಿತರಿಗೂ ಕೊಡಬೇಕಿತ್ತು ಎನ್ನುವುದು ನನ್ನ ಆಶಯ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments