Homeಕರ್ನಾಟಕಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುದ್ರೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಸಿಎಂ ಸಿದ್ದರಾಮಯ್ಯ ಮುದ್ರೆ

ಪತ್ರಕರ್ತರ ದಶಕಗಳ ಬೇಡಿಕೆಯಾದ ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುದ್ರೆ ಒತ್ತಿದ್ದಾರೆ.

ಗ್ರಾಮೀಣ ಪತ್ರಕರ್ತರ ಉಚಿತ ಪಾಸ್ ಜಾರಿಗೆ ಅಧಿಕೃತ ಆದೇಶ ಹೊರ ಬಿದ್ದಿದೆ. ಉಚಿತ ಬಸ್ ಪಾಸ್ ಬೇಡಿಕೆಯನ್ನು ದಡ ಮುಟ್ಟಿಸುವಲ್ಲಿ ಯಶಸ್ವಿಯಾದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ ವಿ ಪ್ರಭಾಕರ್ ಅವರ ನಿರಂತರ ಶ್ರಮಕ್ಕೆ ಸಾರ್ಥಕತೆ ದೊರೆತಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಡಿ 2024-25ನೇ ಸಾಲಿನ ಅಯವ್ಯಯ ಭಾಷಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಸೌಲಭ್ಯ ಕಲ್ಪಿಸುವುದಾಗಿ ಘೋಷಿಸಿದ್ದರು.

ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಬಸ್ ಪಾಸ್ ಸೌಲಭ್ಯವನ್ನು ಪ್ರಾರಂಭಿಸುವ ಬಗ್ಗೆ ಅಧಿಕೃತ ಆದೇಶ ಹೊರಬಿದ್ದಿದೆ.

ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ/ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯ ಸಿಗಲಿದೆ.

ರಾಜ್ಯಾದ್ಯಂತ ಒಟ್ಟು 5222 ಪತ್ರಕರ್ತರಿಗೆ ಈ ಯೋಜನೆ ಸಿಗಲಿದೆ. ಕೆ.ಎಸ್.ಆರ್.ಟಿ.ಸಿ ಸಂಸ್ಥೆಯು ನೀಡಿರುವ ಅಂದಾಜಿನಂತೆ, ಪ್ರತಿ ಪಾಸುದಾರರಿಗೆ ಪ್ರತಿ ತಿಂಗಳಿಗೆ ರೂ.2500 ರೂ. ಗಳಾಗಬಹುದೆಂದು ವೆಚ್ಚವನ್ನು ಅಂದಾಜಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments