Homeಕರ್ನಾಟಕಮೇಕೆದಾಟು | ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟ ಕಾಂಗ್ರೆಸ್:‌ ಆರ್‌ ಅಶೋಕ್‌

ಮೇಕೆದಾಟು | ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟ ಕಾಂಗ್ರೆಸ್:‌ ಆರ್‌ ಅಶೋಕ್‌

ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಬೆನ್ನಲ್ಲೇ ವಿಧಾನಸಭಾ ವಿರೋಧ ಪಕ್ಷದ ನಾಯಕ ಆರ್‌ ಅಶೋಕ್‌ ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿರುವ ಅವರು, “ಮೇಕೆದಾಟು ಯೋಜನೆಯನ್ನು ಯಾವುದೇ ಕಾರಣಕ್ಕೂ ಜಾರಿ ಮಾಡಲು ಬಿಡುವುದಿಲ್ಲ ಎಂದು ತಮ್ಮ I.N.D.I.A ಮಿತ್ರಪಕ್ಷ ಡಿಎಂಕೆ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆಯಲ್ಲ ಡಿಸಿಎಂ ಡಿ ಕೆ ಶಿವಕುಮಾರ್‌ ಅವರೇ, ಈಗ ‘ನಮ್ಮ ನೀರು, ನಮ್ಮ ಹಕ್ಕು’ ಎಂದು ತಮ್ಮ ಶಾಸಕರನ್ನು ಚೆನ್ನೈಗೆ ಕರೆದುಕೊಂಡು ಹೋಗಿ ಪ್ರತಿಭಟನೆ ಮಾಡುತ್ತೀರಾ ಅಥವಾ ರಾಹುಲ್‌ ಗಾಂಧಿ ಅವರನ್ನು ಮೆಚ್ಚಿಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ರಾಜಿ ಮಾಡಿಕೊಳ್ಳುತ್ತೀರಾ” ಎಂದು ಪ್ರಶ್ನಿಸಿದ್ದಾರೆ.

“ಬೆಂಗಳೂರಿಗೆ ನೀರು ತರುತ್ತೇವೆ ಎಂದು ಮೇಕೆದಾಟು ಪಾದಯಾತ್ರೆ ಮಾಡಿ ಕನ್ನಡಿಗರ ಮೂಗಿಗೆ ತುಪ್ಪ ಸವರಿ ಅಧಿಕಾರಕ್ಕೇರಿದ ನಾಡದ್ರೋಹಿ ಕಾಂಗ್ರೆಸ್‌ ಸರ್ಕಾರ ಈಗ ಕನ್ನಡಿಗರ ಬೆನ್ನಿಗೆ ಚೂರಿ ಹಾಕುತ್ತಿದೆ” ಎಂದು ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments