Homeಕರ್ನಾಟಕಸೌಜನ್ಯಾ ಪ್ರಕರಣ | ನ್ಯಾಯ ಸಿಗದಿರುವುದಕ್ಕೆ ನೋಟಾ ಅಭಿಯಾನ: ಮಹೇಶ್ ಶೆಟ್ಟಿ ತಿಮರೋಡಿ

ಸೌಜನ್ಯಾ ಪ್ರಕರಣ | ನ್ಯಾಯ ಸಿಗದಿರುವುದಕ್ಕೆ ನೋಟಾ ಅಭಿಯಾನ: ಮಹೇಶ್ ಶೆಟ್ಟಿ ತಿಮರೋಡಿ

ಧರ್ಮಸ್ಥಳದ ಉಜಿರೆಯಲ್ಲಿ ಹನ್ನೆರಡು ವರ್ಷಗಳ ಹಿಂದೆ ನಡೆದ ‘ಸೌಜನ್ಯಾ’ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ನ್ಯಾಯ ಸಿಗದಿರುವುದಕ್ಕೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ನೋಟಾ ಚಲಾಯಿಸಲು ಅಭಿಯಾನ ಪ್ರಾರಂಭವಾಗಿದೆ.

ಸೌಜನ್ಯಾ ಹೋರಾಟ ಸಮಿತಿ, ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಹಾಗೂ ಪ್ರಜಾಪ್ರಭುತ್ವ ವೇದಿಕೆಯಿಂದ ನೋಟಾ ಅಭಿಯಾನಾಕ್ಕೆ ಕರೆ ನೀಡಲಾಗಿದೆ.

ಒಂದು ಪಕ್ಷಕ್ಕೆ ಪರೋಕ್ಷವಾಗಿ ಬೆಂಬಲ ನೀಡುವ ಉದ್ದೇಶದಿಂದ ನೋಟಾ ಅಭಿಯಾನ ತೆಗೆದುಕೊಳ್ಳಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಈ ಬಗ್ಗೆ ಮಾತನಾಡಿದ ಮಹೇಶ್ ಶೆಟ್ಟಿ ತಿಮರೋಡಿ ಸ್ಪಷ್ಟನೆ ನೀಡಿದ್ದಾರೆ.

“ಹನ್ನೆರಡು ವರ್ಷಗಳಿಂದ ಸೌಜನ್ಯಾ ಪ್ರಕರಣದಲ್ಲಿ ಹೋರಾಟ ಮಾಡಿಕೊಂಡು ಬರುತ್ತಿದ್ದೇವೆ. ಆದರೂ ನ್ಯಾಯ ಸಿಕ್ಕಿಲ್ಲ. ಬಿಜೆಪಿಯಾಗಲಿ, ಕಾಂಗ್ರೆಸ್ ಆಗಲಿ ನಮಗೆ ನ್ಯಾಯ ಕೊಡಿಸಿಲ್ಲ. ಹಾಗಾಗಿ, ನಾವು ನೋಟಾ ಅಭಿಯಾನಕ್ಕೆ ಕರೆ ನೀಡಿದ್ದೇವೆ” ಎಂದು ತಿಳಿಸಿದ್ದಾರೆ.

“ಯಾವ ಕಾರಣಕ್ಕೂ ಹೋರಾಟದಿಂದ ಹಿಂದೆ ಸರಿಯುವುದಿಲ್ಲ ಎಂದಿದ್ದ ಬಿಜೆಪಿ ನಾಯಕರು ಈಗ ಆ ಬಗ್ಗೆ ಚಕಾರ ಎತ್ತುತ್ತಿಲ್ಲ. ಪ್ರಕರಣವನ್ನು ಭೇದಿಸುತ್ತೇವೆ ಎಂದು ಸವಾಲು ಹಾಕಿದ್ದ ಕಾಂಗ್ರೆಸ್ ಸರಿಯಾಗಿ ಪ್ರತಿಕ್ರಿಯಿಸಿಲ್ಲ” ಎಂದು ತಿಮರೋಡಿ ಆಕ್ರೋಶ ಹೊರಹಾಕಿದ್ದಾರೆ.

ಸೌಜನ್ಯಾ ವಿಚಾರ ಸೈಲೆಂಟ್

“ದಕ್ಷಿಣ ಕನ್ನಡ ಲೋಕಸಭಾ ಚುನಾವಣೆಯ ಪ್ರಚಾರದ ವೇಳೆ ಬಿಜೆಪಿಯ ಅಭ್ಯರ್ಥಿ ಬೃಜೇಶ್ ಚೌಟ ಆಗಲಿ, ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರು ಸೌಜನ್ಯಾ ಕೇಸಿನ ಬಗ್ಗೆ ತುಟಿಬಿಚ್ಚುತ್ತಿಲ್ಲ. ಸನಾತನ ಹಿಂದೂ ಧರ್ಮದ ಮೇಲೆ ನಡೆದ ದೊಡ್ಡ ಷಡ್ಯಂತ್ರವಿದು, ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ ಸುಮಾರು ನಲವತ್ತು ವರ್ಷಗಳಿಂದ ಗುರುತಿಸಿಕೊಂಡು, ಬಿಜೆಪಿಯಲ್ಲಿ ಇದ್ದವರು ನಾವು. ಇಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ನಮಗೆ ಗೊತ್ತಿದೆ” ಎಂದು ತಿಮರೋಡಿ ಹೇಳಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments