Homeಕರ್ನಾಟಕನಿವೃತ್ತಿ ವೇತನ ನೀಡಲು ಲಂಚ ಕೇಳಿದ ಅಧಿಕಾರಿ ಅಮಾನತು ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್‌

ನಿವೃತ್ತಿ ವೇತನ ನೀಡಲು ಲಂಚ ಕೇಳಿದ ಅಧಿಕಾರಿ ಅಮಾನತು ಮಾಡಿದ ಡಿಸಿಎಂ ಡಿ ಕೆ ಶಿವಕುಮಾರ್‌

ನಿವೃತ್ತಿ ವೇತನ ನೀಡಲು ಲಂಚ ಕೇಳಿದ ಅಧಿಕಾರಿ ಅಮಾನತು, ರಾಜಕಾಲುವೆ ಕಾಮಗಾರಿ ಪೂರ್ಣಕ್ಕೆ ಸೂಚನೆ, ಬಿಡಿಎ ನಿವೇಶನಗಳ ಸಮಸ್ಯೆ ಪರಿಹಾರ ಸೇರಿ 3,000 ಕ್ಕೂ ಹೆಚ್ಚು ಮನವಿಗಳಿಗೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್

ಪರಿಷ್ಕೃತಗೊಂಡ ಪಿಂಚಣಿಯ ಬಾಕಿ ಮೊತ್ತ ಬಿಡುಗಡೆಗೆ 50 ಸಾವಿರ ಲಂಚ ಕೇಳಿದ್ದ ಬೆಸ್ಕಾಂ ಕೆಂಗೇರಿ ವಿಭಾಗದ ಲೆಕ್ಕಾಧಿಕಾರಿ ಗಿರೀಶ್ ಅವರನ್ನು ಅಮಾನತು ಮಾಡಬೇಕು ಎಂದು ಸ್ಥಳದಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಬೆಸ್ಕಾಂನಲ್ಲಿ ಕಾರ್ಯನಿರ್ವಹಿಸಿ 2007 ರಲ್ಲಿ ನಿವೃತ್ತಿ ಹೊಂದಿದ್ದೇನೆ.‌15 ವರ್ಷಗಳಿಂದ ಅಲೆದು ಸುಸ್ತಾಗಿದ್ದೇನೆ ಎಂದು ಅವಲತ್ತುಕೊಂಡ ಎಸ್.ಎಂ. ಗೋವಿಂದಪ್ಪ ಅವರಿಗೆ “ಕೆಲವೇ ದಿನಗಳಲ್ಲಿ ನಿಮಗೆ ನಿವೃತ್ತಿ ವೇತನ ದೊರೆಯುತ್ತದೆ” ಎಂದು ಭರವಸೆ ನೀಡಿದರು.

ನಗರದ ಶೇಷಾದ್ರಿಪುರಂನ ಶಿರೂರು ಮೈದಾನದಲ್ಲಿ ನಡೆದ “ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ” ಸರಣಿ ಕಾರ್ಯಕ್ರಮದ 5 ನೇ ಆವೃತ್ತಿಯು ಅನೇಕ ಜನಪರ ಸ್ಪಂದನೆಗಳಿಗೆ ಸಾಕ್ಷಿಯಾಯಿತು.

ವೇದಿಕೆಯ ಮುಂಭಾಗ ಜಮಾಯಿಸಿದ್ದ 100 ಕ್ಕೂ ಹೆಚ್ಚು ಮಲ್ಲೇಶ್ವರದ ಬೀದಿಬದಿ ವ್ಯಾಪಾರಿಗಳು “ಶಿವಕುಮಾರ್ ಸಾರ್ ನಮಗೆ ವ್ಯಾಪಾರ ಮಾಡಲು ಸ್ಥಳವಕಾಶ ಮಾಡಿಕೊಡಿ ಎಂದು ಮನವಿ ಮಾಡಿದರು “ನೀವು ಎಲ್ಲಿದ್ದೀರೋ ಅಲ್ಲಿಗೆ ಬರುತ್ತೇನೆ, ನಿಮ್ಮ ಸಮಸ್ಯೆ ಆಲಿಸುತ್ತೇನೆ” ಎಂದು ವೇದಿಕೆ ಇಳಿದು ಬೀದಿಬದಿ ವ್ಯಾಪಾರಿಗಳು ಇದ್ದಲ್ಲಿಗೆ ಡಿಸಿಎಂ ಅವರು ತೆರಳಿದರು.

“ಪಾಲಿಕೆ ವತಿಯಿಂದ ತಳ್ಳುವ ಗಾಡಿಗೆ 10 ಸಾವಿರ ನೀಡಲಾಗುವುದು. ಸಾರ್ವಜನಿಕರಿಗೆ ಹಾಗೂ ನಿಮಗೆ ಇಬ್ಬರಿಗೂ ತೊಂದರೆ ಆಗದಂತೆ ತೀರ್ಮಾನ ಮಾಡಲಾಗುವುದು” ಎಂದಾಗ ಜೈಕಾರ ಕೂಗಿ ಬೀದಿಬದಿ ವ್ಯಾಪಾರಿಗಳು ಸಂತಸ ವ್ಯಕ್ತಪಡಿಸಿದರು.

ಬಿಡಿಎ ಕೆಂಪೇಗೌಡ ಬಡಾವಣೆಯಲ್ಲಿ ನಿವೇಶನಕ್ಕೆ ದುಡ್ಡು ಕಟ್ಟಿದ್ದರೂ ನಮಗೆ ನಿವೇಶನ ನೀಡಿಲ್ಲ ಎಂದು ಅಬ್ಬಿಗೆರೆಯ ಗಾಯತ್ರಿ ಬಾಯಿ ಅವರು ಕಣ್ಣೀರಾದರು. ‘ಅಳಬೇಡಮ್ಮ…’ ಎಂದ ಡಿಸಿಎಂ ಅವರು ಬಿಡಿಎ ಆಯುಕ್ತರಾದ ಜಯರಾಂ ಅವರಿಗೆ “ಇಲ್ಲೇ ಈ ಸಮಸ್ಯೆ ಬಗೆಹರಿಸಿ” ಎಂದು ಸೂಚನೆ ನೀಡಿದರು.

“ಜಮೀರ್ ಅವರನ್ನು ಬಿಡಬೇಡ ಹಿಡ್ಕೊ”

ಕುಂಬಳಗೋಡಿನ ದೇವಕೆರೆಯಲ್ಲಿ ಮನೆಗಳನ್ನು ಹಂಚಿಕೆ ಮಾಡಿದ್ದಾರೆ. ಆದರೆ ನಮ್ಮ‌ ಹೆಸರಿಗೆ ನೀಡಿಲ್ಲ ಎಂದಾಗ “ಜಮೀರ್ ಅವರೇ ಸಚಿವರು, ಅವರನ್ನ ಬಿಡಬೇಡ ಹಿಡ್ಕೊ” ಎಂದು ಮನವಿ ನೀಡಿದ ಪ್ರಕಾಶ್‌ಗೆ ಹೇಳಿದರು.

ಡಿ ಕೆ ಶಿವಕುಮಾರ್ ಅವರು ಸಿಎಂ ಆಗಲಿ

ಪಾದಚಾರಿ ಮಾರ್ಗ ಒತ್ತುವರಿ ತೆರವು ಮಾಡುವ ಮೂಲಕ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. ವೃದ್ಧರಿಗೆ, ಶಾಲಾಮಕ್ಕಳ ಓಡಾಟಕ್ಕೆ ಇದ್ದ ತೊಂದರೆ ನಿವಾರಣೆಯಾಗಿದೆ. ಮುಂದಿನ ದಿನಗಳಲ್ಲಿ ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಗಳಾಗಲಿ ಎಂದು ಬಿಜೆಪಿ ಶಾಸಕ, ಮಾಜಿ ಸಚಿವರಾದ ಡಾ. ಅಶ್ವಥ್ ನಾರಾಯಣ ಅವರು ಶುಭ ಹಾರೈಸಿದರು.

ಬಡವರಿಗೆ ವಸತಿ ನೀಡುವಲ್ಲಿ ಎಲ್ಲಾ ಸರ್ಕಾರಗಳು ವಿಫಲವಾಗಿ, ಆಸ್ತಿ ತೆರಿಗೆ ಹೆಚ್ಚಳದ ಸಮಸ್ಯೆ, ಪರಿಷ್ಕೃರಣೆ ಮತ್ತು ರಸ್ತೆ ಒತ್ತುವರಿ ಸಮಸ್ಯೆಗಳನ್ನು ಪರಿಹರಿಸಿ ಎಂದು ಡಾ.ಎ.ಎನ್. ಅಶ್ವಥ್ ನಾರಾಯಣ ಅವರು ಉದ್ಘಾಟನಾ ಭಾಷಣದ ವೇಳೆ ಮನವಿ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments