Homeಕರ್ನಾಟಕಡಿ ವಿ ಸದಾನಂದಗೌಡ ಕುರಿತು ಕುತೂಹಲ ಸೃಷ್ಟಿಸಿದ ಡಿ ಕೆ ಶಿವಕುಮಾರ್‌ ಹೇಳಿಕೆ

ಡಿ ವಿ ಸದಾನಂದಗೌಡ ಕುರಿತು ಕುತೂಹಲ ಸೃಷ್ಟಿಸಿದ ಡಿ ಕೆ ಶಿವಕುಮಾರ್‌ ಹೇಳಿಕೆ

ಮಾಜಿ ಕೇಂದ್ರ ಸಚಿವ ಡಿ ವಿ ಸದಾನಂದಗೌಡರನ್ನು ಕಾಂಗ್ರೆಸ್‌ಗೆ ಕರೆತರುವ ವಿಚಾರವಾಗಿ ಡಿಸಿಎಂ ಡಿ ಕೆ ಶಿವಕುಮಾರ್‌ ಪ್ರತಿಕ್ರಿಯಿಸಿದ್ದು, “ಲಕ್ಷ್ಮಣ್ ಸವದಿ, ಜಗದೀಶ್ ಶೆಟ್ಟರ್ ಕರೆ ತಂದು ಟಿಕೆಟ್ ನೀಡಿದ್ವಿ. ಜೆಡಿಎಸ್ ನಿಂದ ಎಂ ಪಿ ಕುಮಾರಸ್ವಾಮಿ, ಆಯನೂರು ಮಂಜುನಾಥ್ ಕತರೆ ತಂದೆವು. ರಾಜಕೀಯದಲ್ಲಿ ಇದು ಸರ್ವೇ ಸಾಮಾನ್ಯ” ಎನ್ನುವ ಮೂಲಕಲ ಕುತೂಹಲ ಸೃಷ್ಟಿಸಿದ್ದಾರೆ.

ಮಂಗಳವಾರ ದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, “ನಾಳೆ ನಮ್ಮ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ. ನನಗೆ ವಿಶ್ವಾಸ ಇದೆ. ಎರಡು ಮೂರು ಕ್ಷೇತ್ರ ಬಿಟ್ಟು ಎಲ್ಲಾ ಅಭ್ಯರ್ಥಿಗಳ ಪಟ್ಟಿ ಫೈನಲ್ ಆಗಲಿದೆ” ಎಂದರು.

“ಟಿಕೆಟ್‌ ಹಂಚಿಕೆ ವಿಚಾರದಲ್ಲಿ ಜೆಡಿಎಸ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿದ ಡಿ ಕೆ ಶಿವಕುಮಾರ್, “ನಮಗೆ ಮೊದಲಿಂದಲೂ ಗೊತ್ತಿರುವ ವಿಚಾರ. ಬಿಜೆಪಿ ಸ್ಟೈಲೇ ಅದು. ಎಲ್ಲ ರಾಜ್ಯದಲ್ಲೂ ಹೀಗೆ ಮಾಡುತ್ತಾರೆ. ಅವರ ಆಂತರಿಕ ವಿಚಾರದ ಬಗ್ಗೆ ನಾನು ಹೆಚ್ಚು ಪ್ರತಿಕ್ರಿಯಿಸಲ್ಲ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments