Homeಕರ್ನಾಟಕಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ, ಮೂವರು ಪೊಲೀಸ್ ವಶಕ್ಕೆ

ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ, ಮೂವರು ಪೊಲೀಸ್ ವಶಕ್ಕೆ

ಆರ್​ ಆರ್ ನಗರ ಬಿಜೆಪಿ ಶಾಸಕ ಮುನಿರತ್ನ ಮೇಲೆ ಬೆಂಗಳೂರಿನ ನಂದಿನಿ ಲೇಔಟ್​​ ಠಾಣಾ ವ್ಯಾಪ್ತಿಯಲ್ಲಿ ಮೊಟ್ಟೆ ಎಸೆಯಲಾಗಿದೆ.

ಲಕ್ಷ್ಮೀದೇವಿ ನಗರ ವಾರ್ಡ್​ನ ಬಿಜೆಪಿ ಕಚೇರಿಯಲ್ಲಿ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಜನ್ಮದಿನ ನಿಮಿತ್ತ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ, ಕಂಠೀರವ ಸ್ಟುಡಿಯೋ ಬಳಿ ಮುನಿರತ್ನ ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ.

ಸ್ಥಳಕ್ಕೆ ನಂದಿನಿ ಲೇಔಟ್ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಘಟನೆಯ ನಂತರ ರಸ್ತೆಯಲ್ಲೇ ಕುಳಿತು ಶಾಸಕ ಮುನಿರತ್ನ ಬೆಂಬಲಿಗರು ಪ್ರತಿಭಟನೆ ನಡೆಸಿದ್ದಾರೆ. ಮೂವರು ಪೊಲೀಸ್ ವಶಕ್ಕೆ ಮುನಿರತ್ನ ಮೇಲೆ ಮೊಟ್ಟೆ ಎಸೆತ ಪ್ರಕರಣ ಸಂಬಂಧ ನಂದಿನಿ ಲೇಔಟ್​ ಠಾಣೆ ಪೊಲೀಸರು ಮೂವರನ್ನು ವಶಕ್ಕೆ ಪಡೆದಿದ್ದಾರೆ.

ಮುನಿರತ್ನ ಬೆಂಬಲಿಗರು ಹಲ್ಲೆ ಮಾಡಿದ್ದಾರೆ ಎಂದು ಕಾಂಗ್ರೆಸ್ ಕಾರ್ಯಕರ್ತರು ಆರೋಪ ಮಾಡಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರ ಕಾರನ್ನು ಜಖಂಗೊಳಿಸಿರುವ ಆರೋಪ ಕೇಳಿಬಂದಿದೆ. ಸ್ಥಳದಿಂದ ಬಿಜೆಪಿ ಶಾಸಕ ಮುನಿರತ್ನ ತೆರಳಿದ ಬಳಿಕ ಕಾಂಗ್ರೆಸ್​ ಕಾರ್ಯಕರ್ತರು, ಮುನಿರತ್ನ ಬೆಂಬಲಿಗರ ನಡುವೆ ಗಲಾಟೆ ನಡೆದಿದ್ದು, 2-3 ಕಾರುಗಳು ಜಖಂಗೊಂಡಿವೆ. ಹಲವರು ಗಾಯಗೊಂಡಿದ್ದಾರೆ.

“ನನ್ನ ಮೇಲೆ ಹಲ್ಲೆಗೆ ಡಿಕೆಶಿ, ಸುರೇಶ್ ರೇಟ್ ಫಿಕ್ಸ್ ಮಾಡಿದ್ದಾರೆ. ಕೊಲೆ ಬೆದರಿಕೆ ಹಿನ್ನೆಲೆ ಗನ್​ಮ್ಯಾನ್​ ಕೇಳಿದ್ದೆ, ಆದರೂ ಕೊಡಲಿಲ್ಲ. ಈ ಘಟನೆಗೆ ಡಿಸಿಎಂ ಡಿಕೆ ಶಿವಕುಮಾರ್​, ಡಿಕೆ ಸುರೇಶ್​, ಹನುಮಂತರಾಯಪ್ಪ, ಕುಸುಮಾ ಅವರೇ ಕಾರಣ” ಎಂದು ಮುನಿರತ್ನ ಆರೋಪಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments