Homeಕರ್ನಾಟಕಚುನಾವಣೆ ಮುಗಿದಿದ್ದು, ಭಾರತ್‌ ಅಕ್ಕಿಯೂ ನಿಂತಿದೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಚುನಾವಣೆ ಮುಗಿದಿದ್ದು, ಭಾರತ್‌ ಅಕ್ಕಿಯೂ ನಿಂತಿದೆ: ಕೇಂದ್ರದ ವಿರುದ್ಧ ಸಿದ್ದರಾಮಯ್ಯ ಕಿಡಿ

ಭಾರತ್‌ ಅಕ್ಕಿಯನ್ನು ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮತ ಸೆಳೆಯಲು ಕೇಂದ್ರ ಸರ್ಕಾರ ಮಾಡಿತ್ತು. ಈಗ ಚುನಾವಣೆ ಮುಗಿದಿದೆ. ಭಾರತ್‌ ಅಕ್ಕಿಯೂ ನಿಂತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ವಿಧಾನಸೌಧ ಆವರಣದಲ್ಲಿ ಹಸಿರು ಕ್ರಾಂತಿಯ ಹರಿಕಾರ ಹಾಗೂ *ಭಾರತದ ಮಾಜಿ ಉಪ ಪ್ರಧಾನಿ ದಿ. ಡಾ.ಬಾಬು ಜಗಜೀವನ್‍ರಾಮ್ ಅವರ ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

“ನಮ್ಮ ಸರ್ಕಾರ ರಚನೆಯಾದ ಮೇಲಂತೂ ಕೇಂದ್ರ ಸರ್ಕಾರ ಉದ್ದೇಶಪೂರ್ವಕವಾಗಿ ನಮ್ಮ ರಾಜ್ಯಕ್ಕೆ ಅಕ್ಕಿ ಕೊಡುವುದು ನಿಲ್ಲಿಸಿದೆ. ಅದು ರಾಜಕೀಯ ದುರುದ್ದೇಶದಿಂದ ಎಂಬುದು ಸ್ಪಷ್ಟ. ಅಕ್ಕಿ ಇಲ್ಲದೇ ಇದ್ದರೆ ಪರವಾಗಿಲ್ಲ. ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ನಮಗೆ ಅಕ್ಕಿ ಕೊಡಲಿಲ್ಲ. ಹೀಗಾಗಿ ನಾವು ಹಣ ನೀಡಬೇಕಾಯಿತು” ಎಂದರು

ಬಾಬು ಜಗಜೀವನ್‍ರಾಮ್ ಅವರನ್ನು ಇಡೀ ದೇಶ ಸ್ಮರಿಸುತ್ತದೆ. ಅವರ ಸಾಧನೆಯ ಹೆಜ್ಜೆಗಳನ್ನು ಸ್ಮರಿಸುವ ದಿನ ಇವತ್ತು. 40 ವರ್ಷಗಳ ಕಾಲ ರಾಷ್ಟ್ರ ರಾಜಕಾರಣಲ್ಲಿ ಇದ್ದು ಮಹತ್ತರ ಸಾಧನೆ ಮಾಡಿ ಹೋಗಿದ್ದಾರೆ ಎಂದು ಹೇಳಿದರು.

“ದೇಶದಲ್ಲಿ ಆಹಾರ ಭದ್ರೆತೆ ಒದಗಿಸಿಕೊಟ್ಟವರಲ್ಲಿ ಬಾಬು ಜಗಜೀವನ್‍ರಾಮ್ ಪ್ರಮುಖರು. ರಾಕ್ಷಣಾ ಮಂತ್ರಿಯಾಗಿಯೂ ಕೆಲಸ ಮಾಡಿದ್ದಾರೆ. ಕಾರ್ಮಿಕರಿಗೆ ಒಳ್ಳೆಯ ಕಾನೂನುಗಳನ್ನು ರಚನೆ ಮಾಡಿದ್ದಾರೆ. ಕಾರ್ಮಿಕ, ದಲಿತ, ರೈತರ ಪರವಾಗಿ ಸದಾ ಮಿಡಿಯುತ್ತಿದ್ದರು. ಅವರ ದಾರಿಯಲ್ಲೇ ನಮ್ಮ ಸರ್ಕಾರ ನಡೆಯಲಿದೆ” ಎಂದು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments