Homeಕರ್ನಾಟಕದೀಪಾವಳಿ | ಪಟಾಕಿಯಿಂದ 60 ಮಂದಿ ಕಣ್ಣಿಗೆ ಹಾನಿ, 50 ಜನರ ಮೈಕೈಗೆ ಸುಟ್ಟ ಗಾಯ

ದೀಪಾವಳಿ | ಪಟಾಕಿಯಿಂದ 60 ಮಂದಿ ಕಣ್ಣಿಗೆ ಹಾನಿ, 50 ಜನರ ಮೈಕೈಗೆ ಸುಟ್ಟ ಗಾಯ

ಜನರ ಬಾಳಲ್ಲಿ ಬೆಳಕಾಗಬೇಕಾಗಿದ್ದ ದೀಪಾವಳಿಯ ಸಂಭ್ರಮದಲ್ಲಿ ಕಣ್ಣಿಗೆ ಹಾನಿ ಮಾಡಿಕೊಂಡಿರುವ ಕೆಲವರ ಬಾಳು ಕತ್ತಲಾಗಿದ್ದು, ಪ್ರತಿ ವರ್ಷದಂತೆ ಬಾರಿ ಕೂಡ ದೀಪಾವಳಿಯಲ್ಲಿ ಪಟಾಕಿ ಅವಗಢಗಳು ಸಂಭವಿಸಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಬೆಳಕಿನ ಹಬ್ಬ ದೀಪಾವಳಿ ಸಂಭ್ರಮದಲ್ಲಿ ಕಳೆದ ಮೂರು ದಿನಗಳಿಂದ‌ ರಾಜಧಾನಿಯಲ್ಲಿ ಪಟಾಕಿ ಸಿಡಿತದಿಂದ 60 ಕ್ಕೂ ಹೆಚ್ಚು ಮಂದಿಯ ಕಣ್ಣುಗಳಿಗೆ ಹಾನಿಯಾಗಿವೆ. ಜೊತೆಗೆ 50 ಮಂದಿಯ ಮೈಕೈಗಳಿಗೆ ಸುಟ್ಟ ಗಾಯಗಳಾಗಿವೆ.

ಕಳೆದ ನ.12ರಿಂದ ಪ್ರಾರಂಭವಾಗಿರುವ ದೀಪಾವಳಿ ಹಬ್ಬದ ಸಂದರ್ಭದಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 60 ಕ್ಕೂ ಹೆಚ್ಚು ಪಟಾಕಿ ಸಂಬಂಧಿತ ಗಾಯಗಳ ಪ್ರಕರಣಗಳು ವರದಿಯಾಗಿವೆ. ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮೂವರು ಗಾಯಾಳುಗಳು ಗಂಭೀರವಾದ ಗಾಯಗಳಿಂದ ಬಳಲುತ್ತಿದ್ದು, ಅವರ ಒಂದು ಕಣ್ಣಿನ ದೃಷ್ಟಿ ಹಾಳಾಗುವ ಸಾಧ್ಯತೆಯಿದೆ ಎಂದು ವೈದ್ಯರು ಹೇಳಿದ್ದಾರೆ.

ಶ್ರೀರಾಂಪುರದಲ್ಲಿ 18 ವರ್ಷದ ಯುವಕ ನ.13ರಂದು ಮಿಂಟೋ ಆಸ್ಪತ್ರೆಗೆ ದಾಖಲಾಗಿದ್ದು, ಆತನ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಧರ್ಮಾವರಂನ 10 ವರ್ಷದ ಬಾಲಕಿ ಮತ್ತು ನಗರದ 22 ವರ್ಷದ ಯುವಕನಿಗೂ ಕಣ್ಣಿನ ಭಾಗಕ್ಕೆ ಹೆಚ್ಚಿನ ಗಾಯಗಳಾಗಿವೆ. ಇದರಿಂದಾಗಿ ಅವರಿಗೆ ದೃಷ್ಟಿ ಸಮಸ್ಯೆ ಎದುರಾಗಿದೆ.

ಮಿಂಟೋ ಆಸ್ಪತ್ರೆಯ ನಿರ್ದೇಶಕ ಜಿ.ನಾಗರಾಜು ಮಾತನಾಡಿ, “ಮೂವರಿಗೂ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ದೀರ್ಘಾವಧಿ ಚಿಕಿತ್ಸೆ ಅಗತ್ಯವಿದೆ. ನ.13ರ ಸಂಜೆಯವರೆಗೆ ಮಿಂಟೋದಲ್ಲಿ ಒಟ್ಟು ಒಂಬತ್ತು ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿತ್ತು. ನವೆಂಬರ್ 12 ರಂದು ಬಿಹಾರದಲ್ಲಿ ಬಿಹಾರಿ ಕುಟುಂಬ ಮೂಲದ ಆರು ವರ್ಷದ ಬಾಲಕ ಕೂಡ ಪಟಾಕಿ ಸಿಡಿಸಿ ಗಾಯಗೊಂಡಿದ್ದು ಬಾಲಕನಿಗೆ ಸ್ಥಳೀಯ ಚಿಕಿತ್ಸಾಲಯದಲ್ಲಿ ಪ್ರಥಮ ಚಿಕಿತ್ಸೆ ನೀಡಿ ನಂತರ ಅವನನ್ನು ನಾರಾಯಣ ನೇತ್ರಾಲಯಕ್ಕೆ ಶಿಫ್ಟ್ ಮಾಡಲಾಗಿದೆ” ಎಂದರು.

ನಾರಾರಣ ಆಸ್ಪತ್ರೆಯ ಅಧ್ಯಕ್ಷ ರೋಹಿತ್ ಶೆಟ್ಟಿ ಮಾತನಾಡಿ, “ಮಗು ದೃಷ್ಟಿ ಕಳೆದುಕೊಳ್ಳಬಹುದು ಎಂಬ ಆತಂಕದಲ್ಲಿ ಕುಟುಂಬಸ್ಥರು ತಕ್ಷಣವೇ ರೈಲಿನಲ್ಲಿ ಬೆಂಗಳೂರಿಗೆ ಬಂದಿದ್ದು ಆಸ್ಪತ್ರೆಗೆ ಸೇರಿಸಿದ್ದಾರೆ. ಅವರು ತಮ್ಮ ಲೆಗೇಜ್​ನೊಂದಿಗೆ ರೈಲ್ವೆ ನಿಲ್ದಾಣದಿಂದ ನೇರವಾಗಿ ಆಸ್ಪತ್ರೆಗೆ ಬಂದರು. ಅದೃಷ್ಟವಶಾತ್, ಹುಡುಗನಿಗೆ ಗಂಭೀರವಾದ ಗಾಯವಾಗಿಲ್ಲ ಮತ್ತು ನಾವು ಅವನಿಗೆ ಚಿಕಿತ್ಸೆ ನೀಡುತ್ತಿದ್ದೇವೆ” ಎಂದು ತಿಳಿಸಿದರು.

“ನಾರಾಯಣ ನೇತ್ರಾಲಯದಲ್ಲಿ ಈ ವರ್ಷ ಒಟ್ಟು 24 ಪ್ರಕರಣಗಳು ದಾಖಲಾಗಿವೆ. ಶಂಕರ ಕಣ್ಣಿನ ಆಸ್ಪತ್ರೆ ಮತ್ತು ಅಗರ್ವಾಲ್ ಕಣ್ಣಿನ ಆಸ್ಪತ್ರೆಯಲ್ಲಿ ಕ್ರಮವಾಗಿ 28 ಮತ್ತು ಮೂರು ಪ್ರಕರಣಗಳು ದಾಖಲಾಗಿವೆ. ಆಸ್ಪತ್ರೆಯಲ್ಲಿ ಕಂಡುಬರುವ 24 ಪ್ರಕರಣಗಳಲ್ಲಿ 13 ಪ್ರಕರಣಗಳು 10 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಎಂದು” ಡಾ. ಶೆಟ್ಟಿ ಹೇಳಿದರು.

“ಸುಮಾರು ಶೇ.90ರಷ್ಟು ಪ್ರಕರಣಗಳು ಪಟಾಕಿ ಸಿಡಿಸುವುದನ್ನು ನೋಡಿ ಗಾಯಗೊಂಡವರೇ ಆಗಿದ್ದಾರೆ, “ಮೂರು ವರ್ಷದ ಮಗು ಸೇರಿದಂತೆ ಆರು ಮಕ್ಕಳು ಬಳಲುತ್ತಿದ್ದಾರೆ. ಕಾಟನ್‌ಪೇಟೆಯ ಟೈಲರ್‌ ಸೇರಿದಂತೆ ಇಬ್ಬರು ಪೇದೆಗಳು ಆಂತರಿಕ ಆಘಾತಕ್ಕೆ ಒಳಗಾಗಿದ್ದಾರೆ. ರಸ್ತೆ ಮೇಲೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ಗಾಳಿಯಿಂದ ಹಾರಿ ಬಂದ ಪಟಾಕಿಯೊಂದು ಅವರ ಬಳಿ ಸಿಡಿದಿದೆ. ಅವರು ಕೂಡ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ” ಎಂದು ಡಾ. ಶೆಟ್ಟಿ ಮಾಹಿತಿ ನೀಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments