Homeಕರ್ನಾಟಕಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

ಬಿಜೆಪಿಗೆ ರಾಜೀನಾಮೆ ನೀಡಿದ ಮಾಜಿ ಶಾಸಕ ಎ.ಟಿ.ರಾಮಸ್ವಾಮಿ

ಮಾಜಿ ಶಾಸಕ ಎ.ಟಿ.ರಾಮಸ್ವಾಮಿ ಬಿಜೆಪಿಗೆ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರಗೆ ನೀಡುವುದಾಗಿ ತಿಳಿಸಿದ್ದಾರೆ. ತಾವು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದು, ಇನ್ಮುಂದೆ ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವುದಾಗಿ ಸ್ಷಷ್ಟಪಡಿಸಿದ್ದಾರೆ. ಕಳೆದ ವಿಧಾನಸಭಾ ಚುನಾವಣೆ ವೇಳೆ ಎ.ಟಿ.ರಾಮಸ್ವಾಮಿ ಜೆಡಿಎಸ್ ತೊರೆದು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ವಿಚಾರವಾಗಿ ಅಸಮಾಧಾನಗೊಂಡು ಬಿಜೆಪಿ ಕಾರ್ಯಚಟುವಟಿಕೆಗಳಿಂದಲೂ ದೂರ ಉಳಿದಿದ್ದರು. ಇದೀಗ ರಾಜೀನಾಮೆ ನೀಡಿದ್ದಾರೆ. “ವಿಶ್ವ ತಾಪಮಾನ ವಿಪರೀತ ಏರಿಕೆಯಿಂದಾಗಿ ಹವಾಮಾನದ ಅಸಮತೋಲನ ಉಂಟಾಗಿದೆ. ಇದರಿಂದ ನೆರೆ, ಬರ, ಚಂಡಮಾರುತ, ಭೂಕಂಪನಗಳು ಸೃಷ್ಟಿಯಾಗುತ್ತಿವೆ. ನಾವು ಕುಡಿಯುವ ನೀರು, ಉಸಿರಾಡುವ ಗಾಳಿ, ಸೇವಿಸುವ ಆಹಾರ ವಿಷಪೂರಿತವಾಗಿವೆ. ಬೆಟ್ಟ, ಗುಡ್ಡ, ಅರಣ್ಯಗಳ ನಾಶದಿಂದ ನದಿ, ತೊರೆಗಳೂ ಬತ್ತಿ ಹೋಗಿವೆ. ಅಂತರ್ಜಲ ಕುಸಿದಿದೆ. ಜೀವ ಸಂಕುಲಗಳಿಗೆ ಸಂಕಷ್ಟ ಬಂದೊದಗಿದೆ. ಈ ಹೊತ್ತಿನಲ್ಲಾದರೂ ನಾವು ಜನರಲ್ಲಿ ಜಾಗೃತಿ ಮೂಡಿಸಿ ಪರಿಸರ ಸಂರಕ್ಷಣೆ ಕಾರ್ಯ ಮಾಡಬೇಕಾಗಿದೆ. ಪರಿಸರ ಉಳಿದರೆ ಜೀವ ಸಂಕುಲಗಳೂ ಉಳಿಯುತ್ತವೆ. ಈ ಸನ್ನಿವೇಶದಲ್ಲಿ ರಾಜಕಾರಣಕ್ಕಿಂತ ಪರಿಸರ ಸಂರಕ್ಷಣೆ ಅತ್ಯಂತ ಮಹತ್ವವೆಂದು ಭಾವಿಸಿರುತ್ತೇನೆ. ನನ್ನ ಪೂರ್ಣ ಸಮಯವನ್ನು, ನನ್ನ ಬದುಕಿನ ಕೃಷಿಯ ಜೊತೆಗೆ ಪರಿಸರ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಲು ತೀರ್ಮಾನಿಸಿರುತ್ತೇನೆ. ಈ ಬಗ್ಗೆ ಈಗಾಗಲೇ ನಾನು ದಿನಾಂಕ 11-04-2025ರಂದು ದೂರವಾಣಿ ಮೂಲಕ ತಮ್ಮ ಜೊತೆ ಮಾತನಾಡಿರುತ್ತೇನೆ. ಆದುದರಿಂದ ನಾನು ಭಾರತೀಯ ಜನತಾ ಪಕ್ಷದ ಸದಸ್ಯತ್ವಕ್ಕೆ ರಾಜಿನಾಮೆ ನೀಡುತ್ತಿದ್ದೇನೆ. ತಾವೆಲ್ಲರೂ ತೋರಿದ ಪ್ರೀತಿ ವಿಶ್ವಾಸಕ್ಕೆ ಕೃತಜ್ಞತೆಗಳು” ಎಂದು ಎ.ಟಿ.ರಾಮಸ್ವಾಮಿ ಪತ್ರದಲ್ಲಿ ತಿಳಿಸಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments