ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿ ಟಿ ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, “ಮುಡಾ ಪ್ರಕರಣ ದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು ಮೊದಲ ದಿನದಿಂದ ನಾವು ಹೇಳುತ್ತಲೇ ಇದ್ದೇವೆ. ಇದೀಗ ಜಿಟಿ ದೇವೇಗೌಡ, ಎಸ್ ಟಿ ಸೋಮಶೇಖರ್ ಹೇಳುತ್ತಿದ್ದಾರೆ” ಎಂದರು.
“ಯಾವುದೇ ಕಾರಣ ಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ. ಇವರೇ ಐದು ವರ್ಷಮುಖ್ಯಮಂತ್ರಿಯಾಗಿರಲಿದ್ದಾರೆ. ನಿವೇಶನ ವಾಪಾಸ್ ಮಾಡಿದ ನಂತರವೂ ಬಿಜೆಪಿ ನಾಯಕರು ಮುಖ್ಯಮಂತ್ರಿ ರಾಜೀನಾಮೆ ಕೇಳುತ್ತಿದ್ದಾರೆ. ಹಾಗಾದರೆ ಲೊಟ್ಟೆಗೊಲ್ಲಹಳ್ಳಿ ಪ್ರಕರಣದಲ್ಲಿ ನೋಟಿಫೈ ಆಗಿದ್ದ ಜಾಗ ಖರೀದಿಸಿ ಡಿನೋಫೈ ಮಾಡಿಸಿಕೊಂಡು ವಿವಾದ ಆದ ನಂತರ ಬಿಡಿಎಗೆ ವಾಪಸ್ ನೀಡಿದ್ದಾರೆ. ಹಾಗಾದರೆ ಅವರು ರಾಜೀನಾಮೆ ನೀಡ ಬೇಕಲ್ಲವೇ. ಇವರಿಗೊಂದು ಕಾನೂನು ನಮಗೆ ಒಂದು ಕಾನೂನು ಇರುತ್ತಾ” ಎಂದು ಪ್ರೆಶ್ನೆ ಮಾಡಿದರು.
“ನ್ಯಾಯಾಲಯ ತನಿಖೆಗೆ ಆದೇಶಿಸಿದೆ. ರಾಜೀನಾಮೆ ನೀಡಲು ಹೇಳಿಲ್ಲ. ತನಿಖೆ ನಡೆಯಲಿ. ಸತ್ಯ ತಿಳಿಯಲಿದೆ” ಎಂದರು.