Homeಕರ್ನಾಟಕಎಚ್‌ಡಿಕೆಯ ಭ್ರಷ್ಟಾಚಾರ ಇನ್ನೂ ಹೇಗೆಲ್ಲಾ ಬಹಿರಂಗ ಆಗುತ್ತೋ?: ಸಿದ್ದರಾಮಯ್ಯ

ಎಚ್‌ಡಿಕೆಯ ಭ್ರಷ್ಟಾಚಾರ ಇನ್ನೂ ಹೇಗೆಲ್ಲಾ ಬಹಿರಂಗ ಆಗುತ್ತೋ?: ಸಿದ್ದರಾಮಯ್ಯ

ನೋಂದಣಿಯೇ ಆಗದ ಕಂಪನಿಗೆ 550 ಎಕರೆ ಅರಣ್ಯ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಿ, ಈಗ “ಸಹಿ ನನ್ನದಲ್ಲ, ಯಾರೋ ಫೋರ್ಜರಿ ಮಾಡಿದ್ದಾರೆ” ಎಂದು ಕಣ್ಣೀರು ಸುರಿಸುತ್ತಿರುವ ಕೇಂದ್ರ ಸಚಿವ ಹೆಚ್ .ಡಿ.ಕುಮಾರಸ್ವಾಮಿಯವರೇ, ನಿಮ್ಮ ಬ್ರಹ್ಮಾಂಡ ಭ್ರಷ್ಟಾಚಾರದ ಪುರಾಣ ಮಾಧ್ಯಮಗಳಲ್ಲಿ ಪ್ರಕಟವಾಗಿದೆ. ಮುಂದೆ ಇನ್ನೇನೆಲ್ಲಾ ಬಹಿರಂಗವಾಗಲಿವೆಯೋ? ಎಂದು ಸಿಎಂ ಸಿದ್ದರಾಮಯ್ಯ ಕುಟುಕಿದ್ದಾರೆ.

ಎಕ್ಸ್‌ ತಾಣದಲ್ಲಿ ಈ ಕುರಿತು ಪೋಸ್ಟ್‌ ಮಾಡಿರುವ ಅವರು, “ಮುಡಾ ಬದಲಿ ನಿವೇಶನ ಹಂಚಿಕೆ ಪ್ರಕರಣದಲ್ಲಿ ನನ್ನ ಸಹಿ, ಟಿಪ್ಪಣಿ ಯಾವುದೂ ಇಲ್ಲ, ನನ್ನ ಅಧಿಕಾರವಧಿಯಲ್ಲಿ ನಡೆದದ್ದೇ ಅಲ್ಲ – ಹೀಗಿದ್ದರೂ ನನ್ನ ರಾಜೀನಾಮೆ ಕೇಳುತ್ತಿರುವ ಕುಮಾರಸ್ವಾಮಿಯವರೇ? ನಿಮ್ಮ ಊಟದೆಲೆಯಲ್ಲಿ ಆನೆ ಸತ್ತು ಬಿದ್ದಿದೆ ನೋಡಿ” ಎಂದು ತಿರುಗೇಟು ನೀಡಿದ್ದಾರೆ.

“ನ್ಯಾ.ಎನ್.ಸಂತೋಷ್ ಹೆಗ್ಡೆ ನೇತೃತ್ವದ ಲೋಕಾಯುಕ್ತವೇ ತನಿಖೆ ನಡೆಸಿ ಆರೋಪಪಟ್ಟಿ ಸಲ್ಲಿಸಿದೆ.
ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವುದೊಂದೇ ಬಾಕಿ. ಯಾರನ್ನು ಕಾಯುತ್ತಾ ಕೂತಿದ್ದೀರಿ? ನರೇಂದ್ರ ಮೋದಿಯವರು ಬಂದು ರಕ್ಷಿಸುತ್ತಾರೆಂದೇ? ಸ್ವಂತ ಪಕ್ಷದ ಮುಖ್ಯಮಂತ್ರಿಯನ್ನೇ ಜೈಲಿಗೆ ಕಳಿಸಿದ್ದ ಪಕ್ಷ ನಿಮ್ಮ ರಕ್ಷಣೆಗೆ ಬರುತ್ತಾರೆ ಎಂದು ಅಂದುಕೊಡಿದ್ದೀರಾ” ಎಂದು ವ್ಯಂಗ್ಯವಾಗಿ ಪ್ರಶ್ನಿಸಿದ್ದಾರೆ.

“ಯಾರೋ ಹೇಳಿದ ಕಾಗಕ್ಕ ಗುಬ್ಬಕ್ಕನ ಕಥೆ ಕೇಳಿ ನನ್ನ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರೇ, ನಿಮ್ಮ ಕೈಯಲ್ಲಿರುವ ಹೆಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣದ ದಾಖಲೆ ಪತ್ರಗಳು ಈಗ ಸಾರ್ವಜನಿಕರ ಮುಂದೆ ಇದೆ. ಇವುಗಳ ಒಂದು ಪ್ರತಿಯನ್ನು ನಿಮ್ಮ ಒಡೆಯರಿಗೆ ಕಳಿಸಿಕೊಡಿ, ಪ್ರಾಸಿಕ್ಯೂಷನ್ ಗೆ ಅನುಮತಿ ನೀಡದಂತೆ ಕೈಕಟ್ಟಿಹಾಕಿರುವ ಹಗ್ಗ ಬಿಚ್ಚಿಕೊಳ್ಳಬಹುದು” ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments