Homeಕರ್ನಾಟಕಪಾಕ್‌ ಪರ ಘೋಷಣೆ ದೃಢಪಟ್ಟಲ್ಲಿ ಅಂಥವರಿಗೆ ಉಗ್ರ ಶಿಕ್ಷೆ ಕಾದಿದೆ: ಸಚಿವ ಎಂ ಬಿ ಪಾಟೀಲ್‌

ಪಾಕ್‌ ಪರ ಘೋಷಣೆ ದೃಢಪಟ್ಟಲ್ಲಿ ಅಂಥವರಿಗೆ ಉಗ್ರ ಶಿಕ್ಷೆ ಕಾದಿದೆ: ಸಚಿವ ಎಂ ಬಿ ಪಾಟೀಲ್‌

ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮತ್ತು ದೇಶ ವಿಭಜನೆಯನ್ನು ತಡೆಯಲು ಶಕ್ತಿ ಮೀರಿ ಶ್ರಮಿಸಿದ್ದು ಕಾಂಗ್ರೆಸ್‌. ನಮಗೆ ಯಾರೂ ರಾಷ್ಟ್ರೀಯತೆಯನ್ನಾಗಲಿ, ದೇಶಭಕ್ತಿನ್ನಾಗಲಿ ಹೇಳಿಕೊಡಬೇಕಾಗಿಲ್ಲ. ಯಾರಾದರೂ ಪಾಕ್‌ ಪರ ಘೋಷಣೆ ಕೂಗಿರುವುದು ದೃಢಪಟ್ಟಲ್ಲಿ ಅಂಥವರಿಗೆ ಉಗ್ರ ಶಿಕ್ಷೆ ಕಾದಿದೆ. ಯಾರನ್ನೂ ರಕ್ಷಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸಚಿವ ಎಂ ಬಿ ಪಾಟೀಲ್‌ ಹೇಳಿದರು.

ಕಾಂಗ್ರೆಸ್‌ ಅಭ್ಯರ್ಥಿ ಸೈಯದ್‌ ನಾಸಿರ್‌ ಹುಸೇನ್‌ ಅವರ ವಿಜಯೋತ್ಸವದ ಸಂದರ್ಭದಲ್ಲಿ ನಡೆದಿದೆ ಎನ್ನಲಾಗುತ್ತಿರುವ ಈ ಬೆಳವಣಿಗೆ ಕುರಿತು ಮಾಧ್ಯಮ ಪ್ರತಿನಿಧಿಗಳಳಿಗೆ ಪ್ರತಿಕ್ರಿಯಿಸಿದ ಅವರು, “ವಿಧಾನಸೌಧದ ಆವರಣದಲ್ಲಿ ಯಾರಾದರೂ ಪಾಕಿಸ್ತಾನದ ಪರ ಜೈಕಾರ ಹಾಕಿರುವುದು ಸಾಬೀತಾದರೆ ಅಂಥವರನ್ನು ಸಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ. ಅಂತಹ ಶಕ್ತಿಗಳ ವಿರುದ್ಧ ಸರಕಾರ ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಿದೆ. ಸದ್ಯಕ್ಕೆ ತನಿಖೆ ಆರಂಭಿಸಲಾಗಿದೆ” ಎಂದರು.

“ಈಗ ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಆದ್ದರಿಂದ ಈಗಲೇ ತೀರ್ಮಾನಕ್ಕೆ ಬಂದು, ಯಾರ ಮೇಲೋ ಗೂಬೆ ಕೂರಿಸುವುದು ಸರಿಯಲ್ಲ. ಆದರೆ, ಬಿಜೆಪಿ ಇದಕ್ಕೂ ರಾಜಕೀಯ ಬಣ್ಣ ಬಳಿಯುತ್ತಿದ್ದು, ಲಾಭ ಮಾಡಿಕೊಳ್ಳಲು ಹೊರಟಿದೆ. ಹಿಂದೆ ಇಂತಹ ಘಟನೆಗಳು ವರದಿಯಾದಾಗ ಅವುಗಳ ಹಿಂದೆ ನಿಜವಾಗಿಯೂ ಇದ್ದವರು ಬಿಜೆಪಿಯ ಭಾಗವಾಗಿರುವ ಶ್ರೀರಾಮ ಸೇನೆಯ ಕಾರ್ಯಕರ್ತರು ಎನ್ನುವುದು ಗೊತ್ತಾಯಿತು. ಅಂದಮಾತ್ರಕ್ಕೆ ಈ ಘಟನೆಯಲ್ಲಿ ಯಾರಿಗೂ ರಿಯಾಯಿತಿ ನೀಡಲು ನಾನು ನೋಡುತ್ತಿಲ್ಲ ಅಥವಾ ಇದರ ಹಿಂದೆಯೂ ಬಿಜೆಪಿಯವರೇ ಇದ್ದಾರೆ ಎಂದು ನಾನು ಹೇಳಲು ಹೋಗುವುದಿಲ್ಲ” ಎಂದು ಹೇಳಿದರು.

“ಬಿಜೆಪಿ ಈ ಘಟನೆಯನ್ನು ಎನ್‌ ಐಎ ತನಿಖೆಗೆ ವಹಿಸುವಂತೆ ಆಗ್ರಹಿಸುತ್ತಿದೆ. ಎನ್‌ ಐಎ ಒಂದು ಸ್ವತಂತ್ರ ತನಿಖಾ ಸಂಸ್ಥೆ. ಯಾವ ಘಟನೆಯ ವಿಚಾರಣೆಗೂ ಅದಕ್ಕೆ ಯಾರ ಅನುಮತಿಯೂ ಬೇಕಾಗಿಲ್ಲ. ಅದಕ್ಕೆ ಬೇಕೆನಿಸಿದರೆ ಈ ಘಟನೆಯ ಕುರಿತೂ ಬಂದು ತನಿಖೆ ಮಾಡಲಿ. ಬೇಡ ಎಂದಿರುವವರಾರು? ಪ್ರತಿಪಕ್ಷದ ಸಾಲಿನಲ್ಲಿದ್ದಾಗ ಸಿಬಿಐ, ಇ.ಡಿ ಮುಂತಾದ ತನಿಖಾ ಸಂಸ್ಥೆಗಳನ್ನು ಬೈಯುತ್ತಿದ್ದ ಬಿಜೆಪಿ, ತಾನೇ ಅಧಿಕಾರದಲ್ಲಿರುವಾಗ ಇವುಗಳ ಮೂಲಕವೇ ತನ್ನ ರಾಜಕೀಯ ಎದುರಾಳಿಗಳನ್ನು ಹಣಿಯುತ್ತಿದೆ” ಎಂದು ಕಿಡಿಕಾರಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments