Homeದೇಶಅಬಕಾರಿ ನೀತಿಯಲ್ಲಿ ಅಕ್ರಮ | ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ಕೇಜ್ರಿವಾಲ್‌

ಅಬಕಾರಿ ನೀತಿಯಲ್ಲಿ ಅಕ್ರಮ | ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ಮುಂದೆ ಹಾಜರಾದ ಕೇಜ್ರಿವಾಲ್‌

ಮದ್ಯ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​​​ ಕೇಜ್ರಿವಾಲ್ ಅವರು ಶನಿವಾರ (ಫೆ.17) ದೆಹಲಿಯ ರೋಸ್‌ ಅವೆನ್ಯೂ ನ್ಯಾಯಾಲಯಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾದರು.

ಅಬಕಾರಿ ನೀತಿಯಲ್ಲಿ ಅಕ್ರಮ ಹಣ ವರ್ಗಾವಣೆ ನಡೆಸಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಸಿದಂತೆ ಕೇಜ್ರಿವಾಲ್ ಅವರಿಗೆ ಆರು ಬಾರಿ ಇ.ಡಿ ಅವರಿಗೆ ಸಮನ್ಸ್​​​ ನೀಡಿತ್ತು. ಆದರೆ, ಒಂದಕ್ಕೂ ಅವರು ಉತ್ತರ ನೀಡಿರಲಿಲ್ಲ. ಈ ಕಾರಣಕ್ಕೆ ಕೋರ್ಟ್​​​ ಅವರಿಗೆ ವಿಚಾರಣೆ ಬರುವಂತೆ ಆದೇಶವನ್ನು ನೀಡಿತ್ತು.

ಕೋರ್ಟ್​​ ಆದೇಶದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರಾಗಿ ಮಾತನಾಡಿದ ಕೇಜ್ರಿವಾಲ್‌, “ಇಂದು ವಿಶ್ವಾಸ ಮತಯಾಚನೆ ನಡೆಯಲಿದೆ. ಆ ಕಾರಣದಿಂದ ದೈಹಿಕವಾಗಿ ಸದನದಲ್ಲಿ ಹಾಜರಾಗಬೇಕು. ಹೀಗಾಗಿ ಕೋರ್ಟ್​​ ವಿಚಾರಣೆಗೆ ವಿಡಿಯೋ ಕಾನ್ಫರೆನ್ಸ್ ಹಾಜರಾಗುತ್ತಿದ್ದೇನೆ” ಎಂದು ತಿಳಿಸಿದರು.

ಮುಂದಿನ ಕೋರ್ಟ್​​ ವಿಚಾರಣೆಗೆ ದೈಹಿಕವಾಗಿ ಹಾಜರಾಗುವುವಂತೆ ಕೋರ್ಟ್‌ ಸೂಚಿಸಿದೆ ಎಂದು ಆಂಗ್ಲಮಾಧ್ಯಮಗಳಲ್ಲಿ ವರದಿಯಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments