Homeದೇಶಇಸ್ರೇಲ್-ಇರಾನ್ ಯುದ್ಧ | ಪ್ರಧಾನಿ ಮೋದಿಯಿಂದ ಸಚಿವ ಸಂಪುಟದ ಭದ್ರತಾ ಸಮಿತಿ ಸಭೆ

ಇಸ್ರೇಲ್-ಇರಾನ್ ಯುದ್ಧ | ಪ್ರಧಾನಿ ಮೋದಿಯಿಂದ ಸಚಿವ ಸಂಪುಟದ ಭದ್ರತಾ ಸಮಿತಿ ಸಭೆ

ಮಧ್ಯ ಪ್ರಾಚ್ಯ ಪ್ರದೇಶದಲ್ಲಿ ಇಸ್ರೇಲ್-ಇರಾನ್ ಯುದ್ದರಿಂದ ಉಂಟಾಗಿರುವ ತೀವ್ರ ಸಂಘರ್ಷ ಮತ್ತು ಅಸ್ಥಿರ ಪರಿಸ್ಥಿತಿ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಚಿವ ಸಂಪುಟದ ಭದ್ರತಾ ಸಮಿತಿ (CCS) ಸಭೆ ನಡೆಸಿ ಪರಿಸ್ಥಿತಿಯ ಸಮಗ್ರ ಪರಿಶೀಲನೆ ನಡೆಸಿದರು.

ಅಮೆರಿಕಾ ಮತ್ತು ಇಸ್ರೇಲ್‌ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್‌ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ. ರಾಜಸ್ಥಾನ, ಗುಜರಾತ್, ಪುದುಚೇರಿ ಮತ್ತು ತಮಿಳುನಾಡು ರಾಜ್ಯಗಳ ಎರಡು ದಿನಗಳ ಪ್ರವಾಸ ಮುಗಿಸಿ ಪ್ರಧಾನಿ ಮೋದಿ ಅವರು ಭಾನುವಾರ ರಾತ್ರಿ ಸುಮಾರು 9.30ರ ವೇಳೆಗೆ ದೆಹಲಿಗೆ ಆಗಮಿಸಿದ ನಂತರ ಈ ಮಹತ್ವದ ಸಭೆ ನಡೆಸಿದರು.

ಸಿಸಿಎಸ್ ಸಮಿತಿಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್, ಗೃಹ ಸಚಿವ ಅಮಿತ್ ಶಾ, ವಿದೇಶಾಂಗ ಸಚಿವ ಎಸ್. ಜೈಶಂಕರ್ ಹಾಗೂ ಹಣಕಾಸು ಸಚಿವ ನಿರ್ಮಲಾ ಸೀತಾರಾಮನ್ ಹಾಜರಿದ್ದರು. ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಸೇರಿದಂತೆ ಪ್ರಧಾನ ಕಾರ್ಯದರ್ಶಿಗಳು, ರಕ್ಷಣಾ ದಳಗಳ ಮುಖ್ಯಸ್ಥರು ಮತ್ತು ವಿದೇಶಾಂಗ ಕಾರ್ಯದರ್ಶಿಯೂ ಸಭೆಯಲ್ಲಿ ಭಾಗವಹಿಸಿದ್ದರು.

ಸಭೆಯಲ್ಲಿ ಮಧ್ಯ ಪ್ರಾಚ್ಯ ಪ್ರದೇಶದಲ್ಲಿರುವ ಭಾರತೀಯರ ಸುರಕ್ಷತೆ ಕುರಿತು ವಿಶೇಷ ಚರ್ಚೆ ನಡೆದಿದೆ. ಇರಾನ್‌ನಲ್ಲಿ ಸುಮಾರು 10,000, ಇಸ್ರೇಲ್‌ನಲ್ಲಿ 40,000ಕ್ಕೂ ಹೆಚ್ಚು ಹಾಗೂ ಪಶ್ಚಿಮ ಏಷ್ಯಾ ಮತ್ತು ಗಲ್ಫ್ ದೇಶಗಳಲ್ಲಿ ಒಟ್ಟಾರೆ ಸುಮಾರು 90 ಲಕ್ಷ ಭಾರತೀಯರು ನೆಲೆಸಿದ್ದಾರೆ.

ಉದ್ವಿಗ್ನತೆ ಹಿನ್ನೆಲೆಯಲ್ಲಿ ವಿಮಾನ ಸಂಚಾರ ವ್ಯತ್ಯಯಗೊಂಡಿದ್ದು, ದುಬೈ ಸೇರಿದಂತೆ ಪ್ರಮುಖ ವಿಮಾನ ನಿಲ್ದಾಣಗಳಲ್ಲಿ ನೂರಾರು ಭಾರತೀಯರು ಸಿಲುಕಿಕೊಂಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments