ಓಬಳಾಪುರಂ ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಗಂಗಾವತಿಯ ಶಾಸಕ ಗಾಲಿ ಜನಾರ್ಧನ ರೆಡ್ಡಿಗೆ ಮತ್ತೊಮ್ಮೆ ಹೈದರಾಬಾದ್ನ ನಾಂಪಲ್ಲಿ ಸಿಬಿಐ ಕೋರ್ಟ್ ಬಿಗ್ ಶಾಕ್ ನೀಡಿದೆ. ಸದ್ಯ ಜನಾರ್ಧನ ರೆಡ್ಡಿ ಅವರಿಗೆ ಸಿಬಿಐ ಕೋರ್ಟ್ ಬರೋಬ್ಬರಿ 16 ವರ್ಷದ ಬಳಿಕ ಅವರನ್ನು ದೋಷಿ ಎಂದು ತೀರ್ಪು ನೀಡಿದೆ.
ಸದ್ಯ ಅವರು ಆರೋಪಿ ಎಂದು ಘೋಷಣೆ ಆಗುತ್ತಿದ್ದಂತೆ ಬಂಧನ ಭೀತಿ ಕೂಡ ಎದುರಾಗಿದೆ. ರಾಜ್ಯದ 29 ಲಕ್ಷ ಟನ್ ಅಕ್ರಮ ಅಧಿರು ಲೂಟಿ ಮಾಡಿದ ಆರೋಪದಲ್ಲಿ ಅವರಿಗೆ ಅಪರಾಧಿ ಎಂದು ಶಿಕ್ಷೆ ವಿಧಿಸಿದೆ. ಮಾತ್ರವಲ್ಲ ಅವರಿಗೆ 7 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಸಿಬಿಐ ಕೋರ್ಟ್ ಆದೇಶ ಹೊರಡಿಸಿದೆ.
29 ಲಕ್ಷ ಅಕ್ರಮ ಅಧಿರ ಸಾಗಾಣೆ ಕೇಸ್
ಈ ಹಿಂದೆ ಕೂಡ ಗಾಲಿ ಜನಾರ್ಧನ ರೆಡ್ಡಿ ಬರೋಬ್ಬರಿ ಮೂರುವರೆ ವರ್ಷಗಳ ಕಾಲ ಜೈಲು ಶಿಕ್ಷೆ ಅನುಭವಿಸಿದ್ದರು. ಇದೀಗ ಓಬಳಾಂಪುರ ಮೈನಿಂಗ್ ಕೇಸ್ನಲ್ಲಿ ಅವರ ಆರೋಪ ಸಾಭಿತಾಗಿದೆ. ಅವರನ್ನು ಎ2 ಆರೋಪಿ ಎಂದು ಕೋರ್ಟ್ ತೀರ್ಪು ನೀಡಿದೆ. ರಾಜ್ಯದ 29 ಲಕ್ಷ ಟನ್ ಆಧಿರನ್ನು ಅಕ್ರಮವಾಗಿ ಆಂಧ್ರಕ್ಕೆ ಸಾಗಾಣಿಕೆ ಮಾಡಿದ ಆರೋಪ ಎದುರಿಸುತ್ತಿದ್ದರು. ಇದರಲ್ಲಿ ಅವರು 884 ಕೋಟಿ ಆದಾಯ ಗಳಿಸಿರುವುದು ಸಾಭೀತಾಗಿದ್ದು ಅವರನ್ನು ದೋಷಿ ಎಂದು ಕೋರ್ಟ್ ತೀರ್ಪು ನೀಡಿದೆ.
ಯಾವುದೇ ಶಾಸಕನ ವಿರುದ್ಧ 3 ವರ್ಷಕ್ಕಿಂತ ಹೆಚ್ಚಿನ ವರ್ಷ ಜೈಲು ಶಿಕ್ಷೆ ಪ್ರಕಟವಾದರೆ ತಕ್ಷಣ ಆತನ ಶಾಸಕ ಸ್ಥಾನ ರದ್ದಾಗುತ್ತದೆ. ಸದ್ಯ ಜನಾರ್ಧನ ರೆಡ್ಡಿ ವಿರುದ್ಧ ಬರೋಬ್ಬರಿ 7 ವರ್ಷಗಳ ಕಾಲ ಶಿಕ್ಷೆ ವಿಧಿಸಿದೆ. ಹಾಗಾಗಿ ಜನಾರ್ಧನ ರೆಡ್ಡಿ ಸದ್ಯ ಶಾಸಕ ಸ್ಥಾನ ಕಳೆದುಕೊಳ್ಳುವ ಭೀತಿ ಎದುರಿಸುತ್ತಿದ್ದಾರೆ.
ಗಡಿ ಗುರುತು ನಾಶ ಮತ್ತು ಅರಣ್ಯ ಕಾಯಿದೆ ಉಲ್ಲಂಘನೆಯ ಆರೋಪದ ಮೇಲೆ ಸೆಕ್ಷನ್ 120 ಮತ್ತು 120ಬಿ ಅನ್ವಯ ಗಾಲಿ ರೆಡ್ಡಿ ಹಾಗೂ ಶ್ರೀನಿವಾಸ್ ರೆಡ್ಡಿ ಬಂಧನವಾಗಿತ್ತು. ಐಪಿಸಿ ಸೆಕ್ಷನ್ 120ಬಿ, 379, 411, 420, 422 ಮತ್ತು 447ರ ಅಡಿಯಲ್ಲಿ ಹಾಗೂ ಗಣಿಗಾರಿಕೆ ಮತ್ತು ಅರಣ್ಯ, ಖನೀಜ ಕಾಯ್ದೆಗಳ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಇವರ ವಿರುದ್ಧ ಹಲವು ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಈ ಪ್ರದೇಶದಲ್ಲಿ ಜಿ. ಜನಾರ್ದನರೆಡ್ಡಿ ಅವರ ವ್ಯವಸ್ಥಾಪಕ ನಿರ್ದೇಶಕತ್ವ, ಪಾಲುದಾರತ್ವ ಮತ್ತು ಗಣಿ ಕಂಪನಿಯಲ್ಲದೆ ಗಣಿ ಗುತ್ತಿಗೆ, ಗಡಿ ರೇಖೆ ತಿದ್ದಿರುವುದು, ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್, ಅನಂತಪುರಂ ಮೈನಿಂಗ್ ಕಾರ್ಪೊರೇಷನ್, ಓಬಳಾಪುರಂ ಮೈನಿಂಗ್ ಕಂಪನಿ, ಅಂತರಗಂಗಮ್ಮ ಮೈನಿಂಗ್ ಕಂಪನಿ, ವೈ. ಮಹಾಬಲೇಶ್ವರಪ್ಪ ಅಂಡ್ ಸನ್ಸ್ ಹಾಗೂ ಬಳ್ಳಾರಿ ಐರನ್ ಓರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗಳು ಸುದ್ದಿಯಲ್ಲಿದ್ದವು.
ಟಪಾಲ್ ಗಣೇಶ್ ಬೆಂಬಿಡದ ಹೋರಾಟ
2010ರಲ್ಲಿ ಸುಪ್ರಿಂಕೋರ್ಟ್ ಮುಖ್ಯನ್ಯಾಯಮೂರ್ತಿ ಡಾ ಕೆ ಜಿ ಬಾಲಕೃಷ್ಣನ್ ಹಾಗೂ ನ್ಯಾಯಮೂರ್ತಿ ದೀಪಕ್ ವರ್ಮಾ ನೇತೃತ್ವದ ವಿಭಾಗೀಯ ಪೀಠ ಓಬಳಾಪುರಂ ಮೈನಿಂಗ್ ಕಂಪನಿಯ ಗಣಿಗಾರಿಕೆಗೆ ಸಂಬಂಧಿಸಿದಂತೆ ಭಾರತೀಯ ಸರ್ವೆ ಇಲಾಖೆ ನೇತೃತ್ವದ ಸಮಿತಿ ರಚಿಸಿ ಸಮಗ್ರ ವರದಿ ನೀಡುವಂತೆ ಸೂಚಿಸಿತ್ತು. ಅದರಂತೆ ವರದಿಯನ್ನೂ ಸಲ್ಲಿಸಲಾಗಿತ್ತು. ಆದರೆ 2022ರಲ್ಲಿ ಸರ್ವೇ ಆಫ್ ಇಂಡಿಯಾದವರು ನಡೆಸಿರುವ ಗಡಿ ಗುರುತು ಕಾರ್ಯ ಸರಿಯಾಗಿಲ್ಲ ಎಂದು ಗಣಿ ಉದ್ಯಮಿ ಟಪಾಲ್ ಗಣೇಶ್ ಆಕ್ಷೇಪ ವ್ಯಕ್ತಪಡಿಸಿ ಅರ್ಜಿ ಸಲ್ಲಿಸಿದ್ದರು.
ಸರ್ವೇ ಆಫ್ ಇಂಡಿಯಾ ಅಧಿಕಾರಿಗಳು ಪೂರಕ ದಾಖಲೆ ಇಲ್ಲದೇ, ಆಂಧ್ರ- ಕರ್ನಾಟಕ ಗಡಿ ರೇಖೆ ತಪ್ಪಾಗಿ ಗುರುತಿಸಿದ್ದಾರೆ ಎನ್ನುವುದು ಟಪಾಲ್ ಗಣೇಶ್ ಆರೋಪವಾಗಿದೆ. ಕಾಂಟೂರ್ ಮೆಥಡಾಲಜಿಯನ್ನು ಅನುಸರಿಸದೇ ಕಾಲ್ಪನಿಕ ನಕ್ಷೆ ಇಟ್ಟುಕೊಂಡು ಸರ್ವೆ ಮಾಡಿದ್ದಾರೆ. ಜನಾರ್ದನ ರೆಡ್ಡಿ ಸಂರಕ್ಷಣೆ ಮಾಡೋ ರೀತಿಯಲ್ಲಿ ಸರ್ವೇ ಮಾಡುತ್ತಿದ್ದಾರೆಂದು ಟಪಾಲ್ ಆರೋಪಿಸಿ ಪ್ರಧಾನಿ ಕಚೇರಿಗೆ ಪತ್ರ ಕೂಡ ಬರೆದ್ದಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನ ಮಂತ್ರಿ ಕಚೇರಿ ಪರಿಶೀಲಿಸಿ ಕ್ರಮ ವಹಿಸುವಂತೆ ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ಅರಣ್ಯ ಉಪಸಂರಕ್ಷಣಾ ಅಧಿಕಾರಿಗಳಿಗೆ ಸೂಚನೆ ನೀಡಿದ್ದರು.
ಅಂತರಗಂಗಮ್ಮಕೊಂಡ’ದ (OMC 3) 68 ಎಕರೆ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ ನಡೆದಿರುವ ಪ್ರಕರಣವನ್ನು ಆಂಧ್ರ ಪ್ರದೇಶ ಸರ್ಕಾರವು ಹದಿನಾರು ವರ್ಷಗಳ ಹಿಂದೆಯೇ ಸಿಬಿಐ’ಗೆ ವಹಿಸಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆಯೇ ಹಣದಿಂದ ಜಾಮೀನು ನಡೆದದ್ದು. ಅಂದರೆ ಜನಾರ್ದನ ರೆಡ್ಡಿಯ ಅಣ್ಣ ಸೋಮಶೇಖರ ರೆಡ್ಡಿಯು ತನ್ನ ಅಣ್ಣನಿಗೆ ಜಾಮೀನು ನೀಡಿ ಎಂದು ಸಿಬಿಐ ವಿಶೇಷ ನ್ಯಾಯಾಲಯದ ಆಗಿನ ನ್ಯಾಯಮೂರ್ತಿಗೆ ಮತ್ತೊಬ್ಬ ನ್ಯಾಯಮೂರ್ತಿಯ ಮೂಲಕ ಹತ್ತಾರು ಕೋಟಿ ಲಂಚ ಕೊಟ್ಟಿದ್ದ. ಖದೀಮರೆಲ್ಲರೂ ಸಿಕ್ಕಿಬಿದ್ದಿದ್ದರು. ಇನ್ನೂ ಆ ಪ್ರಕರಣ ವಿಚಾರಣೆ ಹಂತದಲ್ಲಿದೆ.
ನಷ್ಟದ ವಿವರ