Homeಕರ್ನಾಟಕರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕುಮಾರಸ್ವಾಮಿ, ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕುಮಾರಸ್ವಾಮಿ, ರಾಜ್ಯದ ಯೋಜನೆಗಳ ಬಗ್ಗೆ ಚರ್ಚೆ

ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಕೇಂದ್ರದ ಉಕ್ಕು ಮತ್ತು ಭಾರೀ ಕೈಗಾರಿಕೆ ಸಚಿವ ಎಚ್‌ ಡಿ ಕುಮಾರಸ್ವಾಮಿ ಅವರು ರಾಜ್ಯದ ರೈಲ್ವೆ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.

ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಹಾಗೂ ಹಾಲಿ ನಡೆಯುತ್ತಿರುವ ರೈಲ್ವೆ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವುದು, ಹೊಸ ರೈಲ್ವೆ ಮಾರ್ಗಗಳಿಗೆ ಅನುಮೋದನೆ ನೀಡಿ ಹಣಕಾಸು ನೆರವು ಒದಗಿಸುವ ಬಗ್ಗೆ ರೈಲ್ವೆ ಸಚಿವರೊಂದಿಗೆ ಸುದೀರ್ಘ ಸಮಾಲೋಚನೆ ನಡೆಸಿದರು.

“ಸಚಿವರು ಅತ್ಯಂತ ಸಕಾರಾತ್ಮಕವಾಗಿ ಸ್ಪಂದಿಸಿದ್ದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೆಗೌಡ ಅವರ ಕಾಲದಲ್ಲಿ ಮಂಜೂರಾಗಿದ್ದ ಬೆಂಗಳೂರು – ಸತ್ಯಮಂಗಲ – ಚಾಮರಾಜನಗರ (ಕನಕಪುರ – ಮಳವಳ್ಳಿ ಮಾರ್ಗವಾಗಿ) ರೈಲ್ವೆ ಯೋಜನೆಯನ್ನು ಕೈಗೆತ್ತಿಕೊಂಡು ಆದಷ್ಟು ಶೀಘ್ರವಾಗಿ ಪೂರ್ಣಗೊಳಿಸಲು ರೈಲ್ವೆ ಸಚಿವರನ್ನು ಕೋರಿದ್ದೇನೆ” ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

“ಪ್ರಧಾನಮಂತ್ರಿಗಳಾದ ನರೇಂದ್ರ ಮೋದಿ ಅವರ ಕನಸುಗಳನ್ನು ಸಾಕಾರಗೊಳಿಸುವ ನಿಟ್ಟಿನಲ್ಲಿ ರೈಲ್ವೆ ಸಚಿವರ ಜತೆ ಮಾಹಿತಿ ಹಂಚಿಕೊಳ್ಳಲಾಯಿತು” ಎಂದಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments