Homeಕರ್ನಾಟಕದೇವೇಗೌಡರ ನಿರ್ಧಾರದ ವಿರುದ್ಧ ಕಾನೂನು ಹೋರಾಟ: ಸಿ ಎಂ ಇಬ್ರಾಹಿಂ ಎಚ್ಚರಿಕೆ

ದೇವೇಗೌಡರ ನಿರ್ಧಾರದ ವಿರುದ್ಧ ಕಾನೂನು ಹೋರಾಟ: ಸಿ ಎಂ ಇಬ್ರಾಹಿಂ ಎಚ್ಚರಿಕೆ

ಜೆಡಿಎಸ್ ಪಕ್ಷದಿಂದ ಅಮಾನತುಗೊಂಡ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯಿಸಿರುವ ಸಿ ಎಂ ಇಬ್ರಾಹಿಂ, “ದೇವೇಗೌಡರು ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಇರುತ್ತಾರಾ ಇಲ್ಲವಾ ಎಂಬುದು ರಾಷ್ಟ್ರೀಯ ಕಾರ್ಯಕಾರಣಿ‌ ನಿರ್ಧಾರ ಮಾಡಲಿದೆ” ಎಂದು ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಹೆಚ್​ ಡಿ ದೇವೇಗೌಡ ಅವರು ಜೆಡಿಎಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಇರುತ್ತಾರೋ ಇಲ್ಲವೋ ಎಂಬುದೇ ಅನುಮಾನವಿದೆ” ಎನ್ನುವ ಮೂಲಕ ಕುತೂಹಲ ಹೇಳಿಕೆ ನೀಡಿದ್ದಾರೆ.

“ರಾಷ್ಟ್ರೀಯ ಕಾರ್ಯಕಾರಣಿ ಸಭೆ ಮಾಡಿ ದೇವೇಗೌಡರನ್ನು ರಾಷ್ಟ್ರಾಧ್ಯಕ್ಷ ಸ್ಥಾನದಿಂದ ತೆಗೆದುಹಾಕಿದರೆ ಏನು ಮಾಡುತ್ತೀರಿ? ಅಮಾನತು ಮಾಡುವ ಬಗ್ಗೆ ನನಗೆ ನೋಟಿಸ್ ಕೊಟ್ಟಿಲ್ಲ. ನಾನೇನು ಅವರ ಮನೆ ಕೆಲಸದವನಾ? ಏನು ಇವರ ಹುಚ್ಚಾಟ? ಈ ಬಗ್ಗೆ ನಾನು ಕಾನೂನು ಹೋರಾಟ ಮಾಡುತ್ತೇನೆ” ಎಂದು ಎಚ್ಚರಿಸಿದ್ದಾರೆ.

“ಕುಮಾರಸ್ವಾಮಿ ಅವರನ್ನು ರಾಜ್ಯ ಘಟಕದ ಅಧ್ಯಕ್ಷರಾಗಿ ಮಾಡಿದ್ದು ಮೊದಲ ತಪ್ಪು. ಅಮಾನತು ಮಾಡಲು ನನಗೆ ನೋಟಿಸ್ ಕೊಟ್ಟಿದ್ದಾರಾ? ಎಲ್ಲೋ ರೆಸಾರ್ಟ್​​ನಲ್ಲಿ 8ರಿಂದ 10 ಜನ ಸಭೆ ಮಾಡುವುದಲ್ಲ. ನ್ಯಾಷನಲ್ ಕೌನ್ಸಿಲ್ ಮೆಂಬರ್​​ನಲ್ಲಿ 26 ಜನ ಇವರ ಮನೆಯವರೇ ಇದ್ದಾರೆ” ಎಂದು ದೇವೇಗೌಡರು ಹಾಗೂ ಕುಮಾರಸ್ವಾಮಿ ವಿರುದ್ಧ ಇಬ್ರಾಹಿಂ ಕಿಡಿಕಾರಿದ್ದಾರೆ.

“ನಾನು ಈಗಲೂ ಜೆಡಿಎಸ್ ರಾಜ್ಯಾಧ್ಯಕ್ಷ. ‌ ಮಗನಿಗಾಗಿ ಈ ತರ ಮಾಡುವುದು ಸರಿಯಲ್ಲ. ಈಗಲೂ ಮನವಿ ಮಾಡುತ್ತೇವೆ, ನಿರ್ಣಯ ವಾಪಸ್ ಪಡೆಯಿರಿ” ಎಂದು ಆಗ್ರಹಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments