ನನ್ನ ಹೆಸರಿನಲ್ಲಿರುವುದು 32 ಎಕರೆ ಜಮೀನು, ಸಚಿವರಾದ ಎಂ.ಬಿ.ಪಾಟೀಲ್ ಅವರು ಹೇಳಿರುವಂತೆ 100 ಎಕರೆ ಅಲ್ಲ. ರಾಜಕೀಯ ದುರುದೇಶಕ್ಕಾಗಿ ಮನೆಯವರನ್ನು ಎಳೆದು ತಂದು ಸುಳ್ಳು ಪ್ರಚಾರ ಮಾಡುವುದು ಯಾರಿಗೂ ಶೋಭೆ ತರುವುದಿಲ್ಲ ಎಂದು ಅನಿತಾ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ.
ವೈಯಕ್ತಿಕ ವಿಚಾರಗಳ ಬಗ್ಗೆ ಚರ್ಚಿಸುವ ಕೀಳು ಮಟ್ಟಕ್ಕೆ ಯಾರೂ ಹೋಗಬಾರದು. ಅನಗತ್ಯವಾಗಿ ನನ್ನ ಬಗ್ಗೆ, ನನ್ನ ಕುಟುಂಬದ ಕುರಿತು ಇಲ್ಲಸಲ್ಲದ ಆರೋಪಗಳನ್ನು ಮಾಡಿದರೆ ಕಾನೂನು ಮೂಲಕ ಅಂಥವರಿಗೆ ಉತ್ತರ ಕೊಡುತ್ತೇನೆ ಎಂದು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.


