ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳ್ಳಲಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವಿಧಾನ ಪರಿಷತ್ನಲ್ಲಿ ರಾಜ್ಯಪಾಲರ ಬಜೆಟ್ ಭಾಷಣದ ಮೇಲೆ ವಂದನಾ ನಿರ್ಣಯ ಮಂಡಿಸಿ ಸುದೀರ್ಘವಾಗಿ ಮಾತನಾಡಿದರು.
“ಮನಮೋಹನ್ ಸಿಂಗ್ ಅವಧಿಯಲ್ಲಿ ಕಚ್ಛಾತೈಲದ ಬೆಲೆ ಹೆಚ್ಚಿದ್ದರೂ ಡೀಸೆಲ್-ಪೆಟ್ರೋಲ್ ಬೆಲೆ ಕಡಿಮೆ ಇತ್ತು. ಈಗ ಕಚ್ಛಾ ತೈಲ ಬೆಲೆ ಕಡಿಮೆ ಇದ್ದರೂ ಮೋದಿ ಡೀಸೆಲ್-ಪೆಟ್ರೋಲ್ ಬೆಲೆ ವಿಪರೀತ ಹೆಚ್ಚಿಸಿದ್ದಾರೆ” ಎಂದು ಕಿಡಿಕಾರಿದರು.
“ಗೃಹಲಕ್ಷ್ಮಿ ಹಣ ಆರು ತಿಂಗಳಿಂದ ಬಾಕಿ ಇದೆ ಎಂದು ವಿರೋಧಪಕ್ಷದ ನಾಯಕರು ತಿಳಿಸಿದ್ದಾರೆ. ಇದು ಅಪ್ಪಟ ಸುಳ್ಳು. ಆದರೆ ಗೃಹಲಕ್ಷ್ಮಿ ಯೋಜನೆಯ ಕೇವಲ ಜನವರಿಯಿಂದ ಉಳಿದಿದ್ದು, ಅದನ್ನೂ ಪಾವತಿಸಲಾಗುವುದು” ಎಂದು ಭರವಸೆ ನೀಡಿದರು.
“ಶಿಕ್ಷಣ ಇಲಾಖೆಯಡಿ 11400 ಶಿಕ್ಷಕರ ಕೊರತೆ ಇದೆ. 6400 ಶಾಲೆಗಳಲ್ಲಿ ಏಕ ಶಿಕ್ಷಕರು ಇದ್ದಾರೆ. ಬಿಜೆಪಿಯು 4 ವರ್ಷದಲ್ಲಿ ಎಷ್ಟು ಜನ ಶಿಕ್ಷಕರ ನೇಮಕಾತಿ ಮಾಡಿದ್ದಾರೆಂದು ತಿಳಿಸಲಿ” ಎಂದು ಸವಾಲು ಹಾಕಿದರು.
“ಎಲ್ಲ ದುರ್ಬಲವರ್ಗದವರನ್ನೂ ನಾನು ಪ್ರೀತಿಸುತ್ತೇನೆ. ವಿಶ್ವವಿದ್ಯಾಲಯಗಳನ್ನು ಮುಚ್ಚುವ ಬಗ್ಗೆ ಪ್ರಸ್ತಾಪಿಸಲಾಗಿದೆ. ಆದರೆ ವಿವಿಗಳನ್ನು ಮುಚ್ಚುವುದಿಲ್ಲ. ಸಚಿವ ಸಂಪುಟ ಉಪಸಮಿತಿಯ ವರದಿ ಬಂದ ನಂತರ ವಿವಿಗಳನ್ನು ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು. ರೈತರ ಆತ್ಮಹತ್ಯೆಗಳು ಹೆಚ್ಚಿರುವ ಬಗ್ಗೆ ಕೇಳಲಾಗಿದೆ. ಆದರೆ ವಾಸ್ತವಿಕವಾಗಿ 40% ವರೆಗೆ ಆತ್ಮಹತ್ಯೆಗಳು ಕಡಿಮೆಯಾಗಿದೆ. ಫೆಬ್ರವರಿ ಅಂತ್ಯದವರಗೆ 644 ಆಗಿವೆ. ಆತ್ಮಹತ್ಯೆಗಳು ಇಳಿಮುಖವಾಗಿದೆ” ಎಂದು ತಿಳಿಸಿದರು.
“ಬೆಲೆ ಏರಿಕೆಯನ್ನು ಪ್ರಶ್ನಿಸಿದ್ದಾರೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 108-125 ಡಾಲರ್ ಇತ್ತು,, ಆಗ ಡೀಸೆಲ್ ಬೆಲೆ 46.59 ಇತ್ತು, ಮೋದಿಯವರ ಕಾಲದಲ್ಲಿ ಕಚ್ಚಾ ತೈಲದ ಬೆಲೆ 73-76 ಡಾಲರ್ ಇದೆ, ಆದರೆ ಡೀಸೆಲ್ ಬೆಲೆ 90 ರೂ. ಆಗಿದೆ. ಅರ್ದದಷ್ಟು ಬೆಲೆ ಹೆಚ್ಚಾಗಿದೆ. ನಾವು ಎಲ್ಲಾ ಬಾಬ್ತುಗಳಿಂದ 7 ರಿಂದ 8 ಸಾವಿರ ರೂ. ಹೆಚ್ಚಿಸಿದ್ದೇವೆ” ಎಂದರು.
“ಗ್ಯಾರಂಟಿಗಳಿಗೆ 51 ಸಾವಿರ ಕೋಟಿ ರೂ. ನೀಡಿದ್ದೇವೆ, ನೀರಾವರಿಗೆ ಈ ಬಾರಿ ಸಣ್ಣ ನೀರಾವರಿಗೆ 1000 ಕೋಟಿ ರೂ. ಹೆಚ್ಚಿಸಲಾಗಿದೆ. ಯಡಿಯೂರಪ್ಪನವರು ಮಹದಾಯಿ ಯೋಜನೆ ಅನುಷ್ಠಾನ ಮಾಡುವುದಾಗಿ ರಕ್ತದಲ್ಲಿ ಬರೆದುಕೊಡುತ್ತೇನೆ ಎಂದಿದ್ದರು. ಆದರೆ ಅವರಿಂದ ಯೋಜನೆ ಅನುಷ್ಠಾನಗೊಳಿಸಲು ಸಾಧ್ಯವಾಗಲಿಲ್ಲ” ಎಂದು ಮತ್ತೆ ಉಚ್ಚರಿಸಿದರು.
“ಹಿಂದೆ 2013ರಲ್ಲಿ ಕೂಡಲಸಂಗಮದಲ್ಲಿ ಪ್ರತಿ ವರ್ಷ 10 ಸಾವಿರ ಕೋಟಿಗಳನ್ನು ನೀರಾವರಿಗೆ ಇಡುತ್ತೇವೆ , 56000 ಕೋಟಿ ರೂ.ಗಳನ್ನು ನೀರಾವರಿಗೆ ಖರ್ಚು ಮಾಡಿದ್ದೇವೆ. ಪ್ರತಿ ವರ್ಷ 1.50 ಲಕ್ಷ ಕೋಟಿ ಖರ್ಚು ಮಾಡುತ್ತೇವೆ. ಎಂದಿದ್ದ ಬಿಜೆಪಿಯವರು ನಾಲ್ಕು ವರ್ಷ ಪ್ರತಿ ವರ್ಷ ಕೇವಲ ಸರಾಸರಿ 16 ಸಾವಿರ ಕೋಟಿ ಖರ್ಚು ಮಾಡಿದ್ದೀರಿ. ಮಹದಾಯಿ ಯೋಜನೆಗೆ ಪ್ರಾಮಾಣಿಕವಾಗಿ ಪ್ರಯತ್ನಿಸಲಿಲ್ಲ” ಎಂದು ವಾಗ್ದಾಳಿ ನಡೆಸಿದರು.


