ಮಹಾರಾಷ್ಟ್ರದ ದೇವೇಂದ್ರ ಫಡ್ನವೀಸ್ ಸರ್ಕಾರ ಬುಧವಾರ ರಾಜ್ಯದ ಮುಸ್ಲಿಮರಿಗೆ ಬಿಗ್ ಶಾಕ್ ನೀಡಿದ್ದು, ಸರ್ಕಾರಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನೀಡಲಾಗಿದ್ದ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸಿದೆ.
ಈ ಸಂಬಂಧ ಅಧಿಸೂಚನೆ ಹೊರಡಿಸಿರುವ ಮಹಾರಾಷ್ಟ್ರ ಸರ್ಕಾರ, ಮುಸ್ಲಿಂ ಸಮುದಾಯಕ್ಕೆ ನೀಡಲಾಗಿದ್ದ ಶೇ. 5 ರಷ್ಟು ಮೀಸಲಾತಿಗೆ ಕೋರ್ಟ್ ಮಧ್ಯಂತರ ತಡೆ ನೀಡಿರುವುದರಿಂದ ಮೀಸಲಾತಿಯನ್ನು ರದ್ದುಗೊಳಿಸಲಾಗಿದೆ ಎಂದು ಸರ್ಕಾರ ಹೇಳಿದೆ.
10 ವರ್ಷಗಳ ಹಿಂದೆ ಅಂದರೆ 2014 ರಲ್ಲಿ ಕಾಂಗ್ರೆಸ್-ಎನ್ಸಿಪಿ ಸರ್ಕಾರ ಅಲ್ಪಸಂಖ್ಯಾತ ಸಮುದಾಯಕ್ಕೆ ಶೇಕಡಾ 5 ರಷ್ಟು ಮೀಸಲಾತಿಯನ್ನು ಘೋಷಿಸಿತು. ಅಲ್ಲದೆ ಈ ಸಂಬಂಧ ಚುನಾವಣೆಗೆ ಮುಂಚಿತವಾಗಿ ಸುಗ್ರೀವಾಜ್ಞೆಯನ್ನು ಹೊರಡಿಸಿತ್ತು. ಆದರೆ 2014 ರ ಮಹಾರಾಷ್ಟ್ರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ-ಶಿವಸೇನೆ ಮೈತ್ರಿಕೂಟ ಅಧಿಕಾರಕ್ಕೆ ಬಂದ ನಂತರ ಈ ಸುಗ್ರೀವಾಜ್ಞೆಯು ರದ್ದಾಗಿತ್ತು.
“ರಾಜ್ಯ ಸರ್ಕಾರದ ಈ ಕ್ರಮದ ವಿರುದ್ಧ ಈ ಬಗ್ಗೆ ವಿರೋಧ ಪಕ್ಷಗಳು ತೀವ್ರ ವಾಗ್ದಾಳಿ ನಡೆಸಿದ್ದು, “ಬಿಜೆಪಿ ನೇತೃತ್ವದ ಮಹಾರಾಷ್ಟ್ರ ಸರ್ಕಾರವು ಮುಸ್ಲಿಮರಿಗೆ ಶೇಕಡಾ 5 ರಷ್ಟು ಮೀಸಲಾತಿಯನ್ನು ರದ್ದುಗೊಳಿಸುವ ನಿರ್ಧಾರವು ಬಿಜೆಪಿಯ ವೈರಿಗಳು, ಬಿಜೆಪಿಯ ಮುಸ್ಲಿಂ ನಾಯಕರು ಮತ್ತು ಅವರ ಮಿತ್ರಪಕ್ಷಗಳನ್ನು ಗೌರವಿಸುವುದಿಲ್ಲ ಎಂಬುದನ್ನು ಸಾಬೀತುಪಡಿಸುತ್ತದೆ. ಇದು ಬಿಜೆಪಿಯ ಮುಸ್ಲಿಂ ನಾಯಕರು ನ್ಯಾಯ ಪಡೆಯಲು ಅಸಮರ್ಥರಾಗಿದ್ದಾರೆ ಎಂಬುದನ್ನು ಇದು ತೋರಿಸುತ್ತದೆ” ಎಂದು ಎನ್ಸಿಪಿ-ಎಸ್ಪಿ ರಾಷ್ಟ್ರೀಯ ವಕ್ತಾರ ಕ್ಲೈಡ್ ಕ್ರಾಸ್ಟೊ ಹೇಳಿದ್ದಾರೆ.


