Homeಕರ್ನಾಟಕಮಂಡ್ಯ | ತೋಟದ ಮನೆಯಲ್ಲೂ ಹೆಣ್ಣು ಭ್ರೂಣ ಪತ್ತೆ ಕಾರ್ಯ, ಅಧಿಕಾರಿಗಳಿಂದ ದಾಳಿ

ಮಂಡ್ಯ | ತೋಟದ ಮನೆಯಲ್ಲೂ ಹೆಣ್ಣು ಭ್ರೂಣ ಪತ್ತೆ ಕಾರ್ಯ, ಅಧಿಕಾರಿಗಳಿಂದ ದಾಳಿ

ಮಂಡ್ಯದ ಆಲೆಮನೆ, ಹೆಲ್ತ್ ಕ್ವಾಟರ್ಸ್‌ ಬಳಿಕ ಇದೀಗ ತೋಟದ ಮನೆಯಲ್ಲೂ ಹೆಣ್ಣು ಭ್ರೂಣ ಪತ್ತೆ ಮತ್ತು ಹತ್ಯೆ ಕೃತ್ಯ ನಡೆಯುತ್ತಿರುವುದು ಬೆಳಕಿಗೆ ಬಂದಿದೆ.

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಮಾವಿನಕೆರೆ ಗ್ರಾಮದ ತೋಟದ ಮನೆಯಲ್ಲಿ ಹೆಣ್ಣುಭ್ರೂಣ ಪತ್ತೆ ದಂಧೆ ನಡೆಯುತ್ತಿರುವುದಾಗಲೇ ಆರೋಗ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಬ್ಬರು ಆರೋಪಿಗಳಿಬ್ಬರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.

ಗುರುವಾರ ತಡ‌ರಾತ್ರಿ ಡಿಹೆಚ್​ಒ ಡಾ. ಮೋಹನ್ ‌ನೇತೃತ್ವದಲ್ಲಿ ಅಧಿಕಾರಿಗಳು ದಾಳಿ ನಡೆಸಿದ್ದು, ಮನೆಯಲ್ಲಿ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಮಷಿನ್ ಪತ್ತೆಯಾಗಿದೆ. ಇದೇ ವೇಳೆ ಸ್ಥಳದಲ್ಲಿ‌ ಹಾಸನ ಮೂಲದ ಗರ್ಭಿಣಿಯೂ ಇದ್ದರು. ಭ್ರೂಣಲಿಂಗ ಪತ್ತೆಗಾಗಿ ಗರ್ಭಿಣಿಯನ್ನು ಕರೆತರಲಾಗಿತ್ತು. ಗರ್ಭಿಣಿ ಮೂರನೇ ಹೆಣ್ಣುಭ್ರೂಣ ಅಬಾರ್ಷನ್​ಗೆ ಬಂದಿದ್ದರು ಎಂದು ತಿಳಿದುಬಂದಿದೆ.

ದಾಳಿ ವೇಳೆ ಅಬಾರ್ಷನ್ ಕಿಟ್, ಸ್ಕ್ಯಾನಿಂಗ್ ಯಂತ್ರವನ್ನು ಸೀಜ್ ಮಾಡಿದ ಪೊಲೀಸರು, ಗರ್ಭಿಣಿಯ ಪತಿಯನ್ನು ಬಂಧಿಸಿದ್ದಾರೆ. ಸ್ಕ್ಯಾನಿಂಗ್ ಮಾಡುತ್ತಿದ್ದ ಪ್ರಮುಖ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಮನೆ ಮಾಲೀಕ ಧನಂಜಯ್ ಆರೋಗ್ಯ ಇಲಾಖೆಯ ಗ್ರೂಪ್​ ಡಿ ಸಿಬ್ಬಂದಿ ಎನ್ನಲಾಗಿದೆ.

ಕಳೆದ ವರ್ಷದಲ್ಲಿ ಮಂಡ್ಯ ಜಿಲ್ಲೆಯಲ್ಲಿ ಹೆಣ್ಣುಭ್ರೂಣ ಪತ್ತೆ, ಹತ್ಯೆ ನಡೆಯುತ್ತಿರುವ ವಿಚಾರ ಕರ್ನಾಟಕದಾದ್ಯಂತ ಬಹಳಷ್ಟು ಚರ್ಚೆಗೆ ಗ್ರಾಸವಾಗಿತ್ತು. ಪಾಂಡವಪುರ ಸರ್ಕಾರಿ ಹೆಲ್ತ್​​ ಕ್ವಾರ್ಟರ್ಸ್​ನಲ್ಲಿ ನಡೆಯುತ್ತಿದ್ದ ಹೆಣ್ಣು ಭ್ರೂಣ ಹತ್ಯೆ ಪ್ರಕರಣ ಮೇ ತಿಂಗಳಲ್ಲಿ ಭಾರಿ ಸದ್ದು ಮಾಡಿತ್ತು.

ಇದೀಗ ಆ ವಿಚಾರ ಸಂಬಂಧಿತ ಚರ್ಚೆ ತಣ್ಣಗಾಗುತ್ತಿರುವ ಹೊತ್ತಿನಲ್ಲಿಯೇ ಇಂತಹ ಆಘಾತಕಾರಿ ಘಟನೆ ಹೊರಬಂದಿರುವುದು ಹೆಣ್ಣುಭ್ರೂಣ ಹತ್ಯೆ ಪ್ರಕರಣಕ್ಕೆ ಕಡಿವಾಣವೇ ಇಲ್ಲವಾಗಿದೆ ಎಂಬುದನ್ನು ಸೂಚಿಸುತ್ತದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments