Homeಕರ್ನಾಟಕಎಲ್ಲ ಇಲಾಖೆಗಳಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲು ಸಚಿವ ಮಹದೇವಪ್ಪ ಸೂಚನೆ

ಎಲ್ಲ ಇಲಾಖೆಗಳಲ್ಲಿ ಪರಿಶಿಷ್ಟರ ಅಭಿವೃದ್ಧಿಗೆ ಕಾರ್ಯಕ್ರಮ ರೂಪಿಸಲು ಸಚಿವ ಮಹದೇವಪ್ಪ ಸೂಚನೆ

ರಾಜ್ಯದಲ್ಲಿ ಎಲ್ಲ ಇಲಾಖೆಗಳ ವ್ಯಾಪ್ತಿಯಲ್ಲಿ ಪರಿಶಿಷ್ಟ ಸಮುದಾಯಗಳಿಗೆ ಮಾಡಬೇಕಾದ ಸಾಕಷ್ಟು ಕೆಲಸಗಳ ಕುರಿತು ಸೂಕ್ತ ಅಧ್ಯಯನ ನಡೆಸಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು ಎಂದು ಸಚಿವ ಹೆಚ್ ಸಿ ಮಹದೇವಪ್ಪ ಸೂಚಿಸಿದ್ದಾರೆ.

ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ SCSP/TSP ಅನುದಾನದ ಬಳಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳ ಅಧಿಕಾರಿಗಳ ಸಭೆಯನ್ನು ಸಚಿವರು ಬುಧವಾರ ನಡೆಸಿದರು.

“SCSP/TSP ಅನುದಾನವನ್ನು ಪಡೆದುಕೊಳ್ಳುವ ನೋಡಲ್ ಏಜೆನ್ಸಿಗಳು ಪರಿಶಿಷ್ಟ ಸಮುದಾಯಗಳ ಅಭಿವೃದ್ಧಿಗೆ ಉತ್ತಮ ಕಾರ್ಯಕ್ರಮಗಳನ್ನು ರೂಪಿಸಬೇಕು. ಆಯಾ ವರ್ಷದ ಅವಧಿಯ ಅನುದಾನವನ್ನು ಆಯಾ ವರ್ಷವೇ ಖರ್ಚು ಮಾಡುವ ಮೂಲಕ ಅವರ ಅಭಿವೃದ್ಧಿಗೆ ಶ್ರಮಿಸಬೇಕು” ಎಂದು ಸಭೆಯಲ್ಲಿ ಸಚಿವರು ತಿಳಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments