Homeಕರ್ನಾಟಕತಿರುಪತಿಗೆ ರಾಜ್ಯದಿಂದ ನೂತನ ರೈಲು ಸಂಚಾರ ವ್ಯವಸ್ಥೆ: ಕೇಂದ್ರ ಸಚಿವ ವಿ. ಸೋಮಣ್ಣ

ತಿರುಪತಿಗೆ ರಾಜ್ಯದಿಂದ ನೂತನ ರೈಲು ಸಂಚಾರ ವ್ಯವಸ್ಥೆ: ಕೇಂದ್ರ ಸಚಿವ ವಿ. ಸೋಮಣ್ಣ

ತಿರುಪತಿಗೆ ಹೋಗುವ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ​ ನೀಡಿದೆ. ಚಿಕ್ಕಮಗಳೂರು to ತಿರುಪತಿಗೆ ನೂತನ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.

ಈ ಬಗ್ಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. “ತಿರುಪತಿ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

“ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಈ ಭಾಗದ ಜನತೆ ಈ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕು” ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments