Homeಕರ್ನಾಟಕಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ ಅಸಮಾಧಾನ

ಹಾಸನ, ಮಂಡ್ಯದಲ್ಲಿ ಬಿಜೆಪಿ ನಾಯಕರ ಸಹಕಾರ ದೊರೆತಿಲ್ಲ: ಹೆಚ್‌ ಡಿ ದೇವೇಗೌಡ ಅಸಮಾಧಾನ

ಹಾಸನದಲ್ಲಿ ಬಿಜೆಪಿಯ ಕೆಲವರು ವಿರೋಧ ಮಾಡುತ್ತಿದ್ದಾರೆ. ಮಂಡ್ಯದಲ್ಲಿ ಸುಮಲತಾ ಅಂಬರೀಶ್‌ ಅವರು ಈವರೆಗೂ ನಮ್ಮ ಪರವಾಗಿ ಪ್ರಚಾರಕ್ಕೆ ಬಂದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಅಸಮಾಧಾನ ಹೊರಹಾಕಿದ್ದಾರೆ.

ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದ 14 ಕ್ಷೇತ್ರಗಳಿಗೆ ಮತದಾನಕ್ಕೆ ಇನ್ನೊಂದೇ ದಿನ ಬಾಕಿದೆ ಇದೆ. ಈ ಮಧ್ಯೆ, ಬಿಜೆಪಿ ಜೆಡಿಎಸ್ ಮೈತ್ರಿ ಅಭ್ಯರ್ಥಿಗಳ ಪರ ಬಿರುಸಿನ ಪ್ರಚಾರದಲ್ಲಿ ತೊಡಗಿಕೊಂಡಿರುವ ದೇವೇಗೌಡರು ಹಾಸನದಲ್ಲಿ ಮಾತನಾಡಿ ಮೈತ್ರಿಯಲ್ಲಿ ಇನ್ನೂ ಪೂರ್ಣ ಒಮ್ಮತ ಮೂಡದಿರುವ ಬಗ್ಗೆ ಸುಳಿವು ನೀಡಿದ್ದಾರೆ.

“ಮಂಡ್ಯದಲ್ಲಿ ಕುಮಾರಸ್ವಾಮಿಗೆ ಸುಮಲತಾ ಸಹಾಯ ಮಾಡಿಲ್ಲ. ಹಾಸನದಲ್ಲಿ ಬಿಜೆಪಿಯ ಕೆಲವು ವ್ಯಕ್ತಿಗಳು ಸಹಕಾರ ನೀಡದೇ ಇರುವುದು ನಿಜ. ಹೀಗೆಂದ ಮಾತ್ರಕ್ಕೆ ಕುಮಾರಸ್ವಾಮಿಗೆ ಬಹಳ ಅಪಾಯ ಆಗಿಬಿಡುತ್ತದೆ ಎನ್ನೋ ಹಾಗಿಲ್ಲ. ಮೈತ್ರಿ ಅಭ್ಯರ್ಥಿಗಳು ಗೆದ್ದೇ ಗೆಲ್ಲುತ್ತಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಕಳೆದ ಎರಡು ದಿನಗಳಿಂದ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ದೊಡ್ಡ ಹೋರಾಟ ನಡೆದಿದೆ. ಸಂಪತ್ತು ಹಂಚಿಕೆ ಬಗ್ಗೆ ಎರಡು ಪಕ್ಷಗಳ ನಡುವ ದೊಡ್ಡ ಚರ್ಚೆ ನಡೆದಿದೆ. ಸಂಪತ್ತಿನ ಸರ್ವೇ ಹಾಗೂ ಹಂಚಿಕೆ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ. ಅವರ ಮಾತು ಕೇಳಿದರೆ ರಾಹುಲ್ ಗಾಂಧಿ ಪಾಪ ಅನ್ನಿಸುತ್ತದೆ” ಎಂದು ದೇವೇಗೌಡರು ಲೇವಡಿ ಮಾಡಿದರು.

“ಪ್ರಧಾನಿ ಮೋದಿ ಅವರ ಜೊತೆ ಎರಡು ಸಭೆಗಳಲ್ಲಿ ಭಾಗಿಯಾಗಿದ್ದೇನೆ. ಎರಡನೆ ಹಂತದ ಚುನಾವಣೆ ಭಾಗದಲ್ಲೂ ಪ್ರಚಾರ ನಡೆಸುತ್ತೇನೆ. ಮೊದಲ‌ ಹಂತದ ಚುನಾವಣೆಯ ಈ ಭಾಗದಲ್ಲಿ ಬಿಜೆಪಿ ಜೆಡಿಎಸ್ ಸೇರಿ ಪ್ರಚಾರ ಮಾಡುತ್ತಿದ್ದೇವೆ. ಕಾವೇರಿ ಹೋರಾಟ ಜೀವನ್ಮರಣದ ಪ್ರಶ್ನೆ. ಹಾಗಾಗಿಯೇ ನಾವು 28ಕ್ಕೆ 28 ಸ್ಥಾನ‌ ಗೆಲ್ತೇವೆ. ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯಲಿದೆ” ಎಂದರು.

“ಬೆಂಗಳೂರು ಗ್ರಾಮಾಂತರ ಭಾಗದಲ್ಲಿ ಎಲ್ಲಿ ನೋಡಿದರೂ ಜನ ಸಾಗರ. ಅಲ್ಲಿ ನಾನು ನಿನ್ನೆ ಏಳು ಸಭೆ ಮಾಡಿದ್ದೇನೆ. ಆ ಜನ ಸಾಗರದ ನಡುವೆ ಒಂದೊಂದು ಸಭೆ ಮೂರು ಗಂಟೆ ತಡವಾಗಿದೆ. ಕಾಂಗ್ರೆಸ್ ದುಡ್ಡಿನ ಹೊಳೆ ಹರಿಸಿದರೂ ಗೆಲ್ಲುವುದು ನಾವೇ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments