Homeಕರ್ನಾಟಕಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆಂದು ಎಲ್ಲೂ ಹೇಳಿಲ್ಲ; ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಚ್ಚರಿ ಹೇಳಿಕೆ

ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆಂದು ಎಲ್ಲೂ ಹೇಳಿಲ್ಲ; ವಿಜಯೇಂದ್ರ ಭೇಟಿ ಬಳಿಕ ಸುಮಲತಾ ಅಚ್ಚರಿ ಹೇಳಿಕೆ

ಬಿಜೆಪಿ-ಜೆಡಿಎಸ್‌ ಮೈತ್ರಿಗೆ ಬೆಂಬಲ ನೀಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ ಅವರು ಕೇಳಿದ್ದಾರೆ. ಆದರೆ, ಬೆಂಬಲಿಗರ ಸಭೆ ಬಳಿಕ ನನ್ನ ನಿರ್ಧಾರ ತಿಳಿಸುತ್ತೇನೆ ಎಂದು ಹೇಳಿದ್ದೇನೆ. ಮಂಡ್ಯ ಕ್ಷೇತ್ರ ಬಿಟ್ಟು ಹೋಗುತ್ತೇನೆ ಎಂದು ನಾನು ಎಲ್ಲೂ ಹೇಳಿಲ್ಲ ಎಂದು ಸಂಸದೆ ಸುಮಲತಾ ಅಂಬರೀಶ್‌ ಹೇಳಿದರು.

ಮಂಡ್ಯ ಲೋಕಸಭಾ ಕ್ಷೇತ್ರ ಜೆಡಿಎಸ್​ ಪಾಲಾಗಿರುವುದರಿಂದ ಸುಮಲತಾ ಅಂಬರೀಶ್ ಅವರು ಅಸಮಾಧಾನಗೊಂಡಿದ್ದು, ಅವರನ್ನು ಮನವೊಲಿಸಲು ವಿಜಯೇಂದ್ರ ಶುಕ್ರವಾರ ಬೆಂಗಳೂರಿನ ಜೆಪಿ ನಗರದಲ್ಲಿ ಅವರ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಆ ಬಳಿಕ ಸುಮಲತಾ ಭೇಟಿ ವಿವರವನ್ನು ಸುದ್ದಿಗಾರರಿಗೆ ತಿಳಿಸಿದರು.

“ಮಂಡ್ಯ ಲೋಕಸಭಾ ಕ್ಷೇತ್ರವನ್ನು ಬಿಜೆಪಿಯೇ ಉಳಿಸಿಕೊಳ್ಳಬೇಕಿತ್ತು. ನಾಳೆ(ಮಾರ್ಚ್ 30) ಮಂಡ್ಯದಲ್ಲಿ ನಾನು ಬೆಂಬಲಿಗರ ಜೊತೆ ಸಭೆ ನಡೆಸುತ್ತಿದ್ದೇನೆ. ನನ್ನ ನಿಲುವನ್ನು ಮಂಡ್ಯದಲ್ಲೇ ತಿಳಿಸಲು ಇಷ್ಟಪಡುತ್ತೇನೆ” ಎಂದು ಕುತೂಹಲದ ಹೇಳಿಕೆ ನೀಡಿದರು.

ಸುಮಲತಾ ಭೇಟಿ ಬಳಿಕ ಸುದ್ದಿಗಾರರೊಂದಿಗೆ ವಿಜಯೇಂದ್ರ ಮಾತನಾಡಿ, “ಸುಮಲತಾ ಅವರ ಜೊತೆ ಉತ್ತಮ ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಅವರು ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವ ವಿಶ್ವಾಸವಿದೆ. ಸುಮಲತಾ ಅಂಬರೀಶ್​​ ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಒಳ್ಳೆ ನಿರ್ಧಾರ ಮಾಡುತ್ತಾರೆಂಬ ವಿಶ್ವಾಸವಿದೆ” ಎಂದರು.

“ಸಂಸದರಾಗಿ ಅವರು ಅವರ ಬೆಂಬಲಿಗರ ಸಲಹೆ ಪಡೆಯಬೇಕಾಗುತ್ತದೆ. ನಾನೂ ಕೂಡಾ ಅದೇ ಸಲಹೆ ಕೊಟ್ಟಿದ್ದೇನೆ. ಒಳ್ಳೆಯ ತೀರ್ಮಾನ ಮಾಡುತ್ತಾರೆ ಎಂಬ ವಿಶ್ವಾಸವಿದೆ. ಎಲ್ಲವೂ ರಾಷ್ಟ್ರಮಟ್ಟದಲ್ಲಿ ಚರ್ಚೆ ಆಗಿದೆ. ಸುಮಲತಾ ಅವರಿಗೂ ಈ ಬಗ್ಗೆ ಎಲ್ಲ ಮಾಹಿತಿ ಇದೆ. ಇದರ ನಡುವೆಯೂ ಮೋದಿಯವರಿಗೆ ಶಕ್ತಿ ತುಂಬಬೇಕು ಎಂಬ ಸದಭಿಪ್ರಾಯವೂ ಅವರಲ್ಲಿದೆ” ಎಂದು ಹೇಳಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments