Homeಕರ್ನಾಟಕಹಬ್ಬ ಮುಗಿಸಿ ಬೆಂಗಳೂರಿಗೆ ಧಾವಿಸಿದ ಜನಕ್ಕೆ ಸಂಚಾರ ದಟ್ಟಣೆ ಬಿಸಿ

ಹಬ್ಬ ಮುಗಿಸಿ ಬೆಂಗಳೂರಿಗೆ ಧಾವಿಸಿದ ಜನಕ್ಕೆ ಸಂಚಾರ ದಟ್ಟಣೆ ಬಿಸಿ

ದೀಪಾವಳಿ ಹಬ್ಬಕ್ಕೆ ಸಾಲು ಸಾಲು ರಜೆ ಹಿನ್ನೆಲೆ ತಮ್ಮ ಊರುಗಳಿಗೆ ತೆರಳಿದ್ದ ಜನ, ರಜೆ ಮುಗಿಸಿ ನಗರಕ್ಕೆ ವಾಪಸಾದ ಹಿನ್ನೆಲೆಯಲ್ಲಿ ನಗರದ ವಿವಿಧೆಡೆ ಸಂಚಾರ ದಟ್ಟಣೆ ಉಂಟಾಗಿ ಪರದಾಡುವಂತಾಯಿತು.

ಬೆಂಗಳೂರು-ತುಮಕೂರು ರಸ್ತೆ, ಕೆ.ಆರ್ ಪುರಂ ಮುಖ್ಯರಸ್ತೆ ಹಾಗೂ ಗೊರಗುಂಟೆಪಾಳ್ಯದಿಂದ ಗೋವರ್ಧನ್‌ ವೃತ್ತದ ವರೆಗೂ ಕಿ.ಮೀ ಗಟ್ಟಲೇ ಸಂಚಾರ ದಟ್ಟಣೆ ಉಂಟಾಗಿತ್ತು. ನಿನ್ನೆ ತಡರಾತ್ರಿಯಿಂದಲೇ ಟ್ರಾಫಿಕ್‌ ಜಾಮ್‌ ಸಮಸ್ಯೆ ಉಂಟಾಗಿದ್ದು, ಇದರಿಂದ ಅನ್ಯಜಿಲ್ಲೆಯ ಉದ್ಯೋಗಿಗಳಿಗೂ ಸಮಸ್ಯೆ ಉಂಟಾಯಿತು.

ಮೆಟ್ರೋದತ್ತ ಮುಖ

ದೀಪಾವಳಿ ರಜೆ ಮುಗಿಸಿ ಬೆಂಗಳೂರಿನತ್ತ ಧಾವಿಸಿದ ಜನರಿಗೆ ತುಮಕೂರು ರಸ್ತೆಯಲ್ಲಿ ಸಂಚಾರ ದಟ್ಟಣೆ ಬಿಸಿ ತಟ್ಟಿದೆ. ಟ್ರಾಫಿಕ್‌ಗೆ ಬೇಸತ್ತು ನಾಗಸಂದ್ರ ಮೆಟ್ರೋ ನಿಲ್ದಾಣದ ಬಳಿ ಇಳಿದು ಜನ ಮೆಟ್ರೋ ಸಂಚಾರದ ಮೊರೆ ಹೋದರು. ಈ ಹಿನ್ನಲೆಯಲ್ಲಿ ನಾಗಸಂಧ್ರ ಮೆಟ್ರೋ ನಿಲ್ದಾಣವು ಪ್ರಯಾಣಿಕರಿಂದ ತುಂಬಿ ತುಳುಕಿತು.

ನಗರದ ಗೊರಗುಂಟೆಪಾಳ್ಯದ ಬಳಿಯೂ ಕಿಲೋ ಮೀಟರ್‌ಗಟ್ಟಲೇ ಟ್ರಾಫಿಕ್‌ ಜಾಮ್‌ ಉಂಟಾಯಿತು. ಇದರಿಂದ ನಗರ ಪ್ರವೇಶಿಸುವಷ್ಟರಲ್ಲಿ ಜನ ಹೈರಾಣಾದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments