Homeಕರ್ನಾಟಕಪ್ರಜ್ವಲ್‌ ಪ್ರಕರಣ: ಜೆಡಿಎಸ್‌ ನಿಲುವು ನೂರಕ್ಕೆ ನೂರರಷ್ಟು ಸಂತ್ರಸ್ತೆಯರ ಪರ: ಜಿ ಟಿ ದೇವೇಗೌಡ

ಪ್ರಜ್ವಲ್‌ ಪ್ರಕರಣ: ಜೆಡಿಎಸ್‌ ನಿಲುವು ನೂರಕ್ಕೆ ನೂರರಷ್ಟು ಸಂತ್ರಸ್ತೆಯರ ಪರ: ಜಿ ಟಿ ದೇವೇಗೌಡ

ಉಪ್ಪು ತಿಂದ ಮೇಲೆ ನೀರು ಕುಡಿಯಲೇಬೇಕು, ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದು ಕುಮಾರಸ್ವಾಮಿ ಮೊದಲೇ ಹೇಳಿದ್ದಾರೆ. ನಮ್ಮ ಪಕ್ಷ ನೂರಕ್ಕೆ ನೂರು ಸಂತ್ರಸ್ತೆಯರ ಪರವಾಗಿ ಇರಲಿದೆ. ಅವರನ್ನ ಪಕ್ಷದಿಂದ ಹೊರ ಹಾಕಿದ ಮೇಲೆ ಪ್ರಜ್ವಲ್‌ಗೂ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಜೆಡಿಎಸ್‌ ಕೋರ್‌ ಕಮಿಟಿ ಅಧ್ಯಕ್ಷ ಜಿ ಟಿ ದೇವೇಗೌಡ ತಿಳಿಸಿದರು.

ಹಾಸನ ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಜ್ವಲ್‌ ರೇವಣ್ಣ ತಪ್ಪು ಮಾಡಿದ್ದರೆ ಶಿಕ್ಷೆ ಕೊಡಿ ಎಂದು ಹೇಳಿದ್ದೇವೆ. ತನಿಖೆಯಿಂದ ಸಂಪೂರ್ಣ ಉತ್ತರ ಹೊರ ಬರಲಿ. ಎಸ್‌ಐಟಿ ತನಿಖೆಯಿಂದ ಸತ್ಯ ಹೊರ ಬರುವವರೆಗೂ ನಾವೇನೂ ಹೇಳಲು ಆಗಲ್ಲ” ಎಂದರು.

“ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ನಾವು ಸೇರಿ ಎಲ್ಲರೂ ಒತ್ತಾಯಿಸಿದ್ದೆವು. ಈಗ ಬಂಧನ ಆಗಿದೆ. ಅಲ್ಲಿಗೆ ನಮ್ಮ ಕೆಲಸ ಮುಗಿಯಿತು. ಪ್ರಜ್ವಲ್‌ ರೇವಣ್ಣ ಜೊತೆಗೆ ಪೆನ್‌ಡ್ರೈವ್ ಹಂಚಿದವರ ಬಂಧನವೂ ಆಗಬೇಕು” ಎಂದು ಒತ್ತಾಯಿಸಿದರು.

“ನಮ್ಮ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಅಮಾನತು ಮಾಡಿದ್ದು, ಅವರ ಬಂಧನದಿಂದ ಪಕ್ಷದ ಮೇಲೆ ಯಾವುದೇ ಪರಿಣಾಮ ಬೀರಲ್ಲ. ನಮಗೆ ಯಾವುದೇ ಮುಜುಗರ ಇಲ್ಲ. ಎಸ್‌ಐಟಿ ತನಿಖೆಯನ್ನು ನಾವು ಸ್ವಾಗತಿಸಿದ್ದೇವೆ” ಎಂದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments