Homeಕರ್ನಾಟಕಪ್ರಜ್ವಲ್..‌ ನೀನು ಎಲ್ಲೇ ಇದ್ದರೂ ವಾಪಸ್‌ ಬಾ: ಹೆಚ್ ‌ಡಿ ಕುಮಾರಸ್ವಾಮಿ ಮನವಿ

ಪ್ರಜ್ವಲ್..‌ ನೀನು ಎಲ್ಲೇ ಇದ್ದರೂ ವಾಪಸ್‌ ಬಾ: ಹೆಚ್ ‌ಡಿ ಕುಮಾರಸ್ವಾಮಿ ಮನವಿ

ಪ್ರಜ್ವಲ್‌, ನೀನು ಎಲ್ಲೇ ಇದ್ದರೂ ಕೂಡಲೇ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕಾರ ನೀಡು ಎಂದು ಮಾಜಿ ಮುಖ್ಯಮಂತ್ರಿ ಹೆಚ್.‌ಡಿ.ಕುಮಾರಸ್ವಾಮಿ ಅವರು ಮಾಧ್ಯಮಗಳ ಮೂಲಕ ಪ್ರಜ್ವಲ್‌ ರೇವಣ್ಣಗೆ ಮನವಿ ಮಾಡಿದರು.

ಪಕ್ಷದ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿ, “ಈ ಸರಕಾರಕ್ಕೆ ಪ್ರಜ್ವಲ್ ಕರೆಸುವ ಶಕ್ತಿ ಇದ್ದಂತಿಲ್ಲ. ಅದಕ್ಕೆ ನಾನೇ ಕರೆ ಕೊಡುತ್ತಿದ್ದೇನೆ. ಮಾಧ್ಯಮಗಳ ಮೂಲಕ ಹೇಳುತ್ತಿದ್ದೇನೆ. ಕೂಡಲೇ ವಾಪಸ್‌ ಬಾ.. ದೊಡ್ಡವರು (ದೇವೇಗೌಡರು) ಮತ್ತು ಪಕ್ಷದ ಕಾರ್ಯಕರ್ತರಿಗೆ ಗೌರವ ಕೊಟ್ಟು ತಕ್ಷಣ ವಾಪಸ್‌ ಬಾ.. ತನಿಖಾ ತಂಡಕ್ಕೆ ಸಹಕರಿಸು. ಕಾನೂನು ಪ್ರಕಾರ ಪ್ರಕರಣವನ್ನು ಎದುರಿಸು” ಎಂದು ಮನವಿ ಮಾಡಿದರು.

“ನಮ್ಮ ತಂದೆಯವರ ನೋವು ನೋಡಲಾಗದೆ ಈ ಮಾತನ್ನು ಹೇಳುತ್ತಿದ್ದೇನೆ. ಇತರೆ ಯಾರೂ ನಮ್ಮಿಂದ ನೋವಿಗೆ ತುತ್ತಾಗಬಾರದು. ನಾನೇ ಮಾಧ್ಯಮಗಳ ಮೂಲಕ ಮನವಿ ಮಾಡುತ್ತೇನೆ ಎಂದು ತಂದೆಯವರು ಹೇಳಿದರು. ನಾನೇ ವಾಪಸ್‌ ಬರುವಂತೆ ಸಂದೇಶ ಕೊಡುತ್ತೇನೆ ಎಂದು ನಿಮ್ಮಗಳ (ಮಾಧ್ಯಮಗಳು) ಮೂಲಕ ಬಹಿರಂಗವಾಗಿ ಹೇಳುತ್ತದ್ದೇನೆ” ಎಂದು ಕುಮಾರಸ್ವಾಮಿ ಹೇಳಿದರು.

“ನಾನು ದಿನವೂ ಪದ್ಮನಾಭ ನಗರಕ್ಕೆ ಹೋಗುತ್ತೇನೆ. ಪ್ರಜ್ವಲ್ ರಕ್ಷಣೆ ಹೇಗೆ ಮಾಡಬೇಕು ಎಂದು ಚರ್ಚೆ ಮಾಡುವುದಕ್ಕೆ ನಾನು ಅಲ್ಲಿಗೆ ಹೋಗುತ್ತಿಲ್ಲ. ನಮ್ಮ ತಂದೆ-ತಾಯಿ ಅವರ ಜೀವಕ್ಕೆ ತೊಂದರೆ ಆಗಬಾರದು ಎಂದು ಅವರಿಗೆ ಧೈರ್ಯ ತುಂಬಲು ಹೋಗುತ್ತಿದ್ದೇನೆ. ಆದರೆ, ಇದನ್ನೇ ಬೇರೆಯವರು ಕಥೆ ಕಟ್ಟಿ ಹೇಳುತ್ತಿದ್ದಾರೆ” ಎಂದರು.

“ನನ್ನ ಮತ್ತು ನಮ್ಮ ಕುಟುಂಬದವರ ದೂರವಾಣಿ ಕದ್ದಾಲಿಕೆ ನಡೆಯುತ್ತಿದೆ. ಕುಟುಂಬದ ಎಲ್ಲ ಸದಸ್ಯರ ಮೊಬೈಲ್ ಫೋನ್‌ಗಳನ್ನು ಕದ್ದಾಲಿಸಲಾಗುತ್ತಿದೆ” ಎಂದು ಕುಮಾರಸ್ವಾಮಿ ಇದೇ ವೇಳೆ ಆರೋಪಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments