Homeಕರ್ನಾಟಕರನ್ಯಾ ರಾವ್‌ ಕೇಸ್‌ | ಸಿಐಡಿ ತನಿಖೆ ಹಿಂಪಡೆದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಪರಮೇಶ್ವರ್‌

ರನ್ಯಾ ರಾವ್‌ ಕೇಸ್‌ | ಸಿಐಡಿ ತನಿಖೆ ಹಿಂಪಡೆದ ಬಗ್ಗೆ ಸ್ಪಷ್ಟನೆ ನೀಡಿದ ಸಚಿವ ಪರಮೇಶ್ವರ್‌

ಪೊಲೀಸ್ ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ತಿಳಿದುಕೊಳ್ಳಲು ನಾನು ಸಿಐಡಿ ತನಿಖೆಗೆ ಆದೇಶಿಸಿದ್ದೆ. ಅಷ್ಟರೊಳಗಾಗಲೇ ಸಿಎಂ ಕಚೇರಿಯಿಂದ ಮೇಲ್ಮಟ್ಟದ ತನಿಖೆಗೆ ಆದೇಶ ನೀಡಲಾಗಿತ್ತು. ಒಂದೇ ವಿಚಾರಕ್ಕೆ ಎರಡು ಕಡೆ ತನಿಖೆ ಆಗೋದು ಬೇಡ ಎಂಬ ಕಾರಣಕ್ಕೆ ನಾವು ಸಿಐಡಿ ತನಿಖೆಯನ್ನು ಹಿಂಪಡೆದೆವು ಎಂದು ಗೃಹ ಸಚಿವ ಪರಮೇಶ್ವರ್‌ ತಿಳಿಸಿದರು.

ರನ್ಯಾ ರಾವ್‌ ಪ್ರಕರಣದ ಹಿಂದೆ ಪ್ರಭಾವಿ ರಾಜಕಾರಣಿ ಇದ್ದಾರೆ ಎಂಬ ಮಾತುಗಳು ಕೇಳಿ ಬಂದವು. ಈ ಕಾರಣದಿಂದಲೇ ಸರ್ಕಾರದ ಮೇಲೆ ಒತ್ತಡ ಹೇರಲಾಯಿತು ಮತ್ತು ಸರ್ಕಾರ ಸಿಐಡಿ ತನಿಖೆ ಆದೇಶವನ್ನು ಹಿಂದಕ್ಕೆ ಪಡೆಯಿತು ಎನ್ನುವ ಮಾತು ಕೇಳಿ ಬಂದಿದ್ದವು. ಈಗ ಇದನ್ನು ಪರಮೇಶ್ವರ್‌ ತಳ್ಳಿಹಾಕಿದ್ದಾರೆ.

ಬೆಂಗಳೂರಿನಲ್ಲಿ ಗುರುವಾರ ಮಾಧ್ಯಮಗಳ ಮುಂದೆ ಮಾತನಾಡಿದ ಅವರು, “ತನಿಖೆಗೆ ಆದೇಶ ನೀಡಲೂ ಯಾರು ಒತ್ತಡ ಹೇರಿರಲಿಲ್ಲ. ಹಿಂದಕ್ಕೆ ಪಡೆಯಲೂ ಯಾರೂ ಒತ್ತಡ ಹೇರಿಲ್ಲ. ಎರಡು ತನಿಖೆ ಬೇಡ ಎಂಬ ಕಾರಣಕ್ಕೆ ನಾವು ಹಿಂಪಡೆದಿದ್ದೇವೆ ಅಷ್ಟೇ. ಇಲ್ಲಿ ಯಾವುದೇ ಗೊಂದಲ ಬೇಡ” ಎಂದು ಹೇಳಿದರು.

ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಣೆ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದಾರೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ದುಬೈನಿಂದ ಬೆಂಗಳೂರಿಗೆ ತರುವಾಗ ಅವರನ್ನು ವಿಮಾನ ನಿಲ್ದಾಣದಲ್ಲೇ ತಡೆ ಹಿಡಿಯಲಾಗಿದೆ. ರನ್ಯಾ ಅವರ ಪ್ರಕರಣದಲ್ಲಿ ಪೊಲೀಸ್ ಪ್ರೊಟೋಕಾಲ್ ಉಲ್ಲಂಘನೆ ಆಗಿದೆ ಎಂದು ವರದಿಯಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ತನಿಖೆಗೆ ಸಮಿತಿ ರಚನೆ ಮಾಡಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments