Homeಕರ್ನಾಟಕಶಿವಮೊಗ್ಗ | ಪ್ರತಿಭಟನೆ ವೇಳೆ ಬಿಜೆಪಿಯ ಭಾನುಪ್ರಕಾಶ್ ಹೃದಯಾಘಾತದಿಂದ ಸಾವು

ಶಿವಮೊಗ್ಗ | ಪ್ರತಿಭಟನೆ ವೇಳೆ ಬಿಜೆಪಿಯ ಭಾನುಪ್ರಕಾಶ್ ಹೃದಯಾಘಾತದಿಂದ ಸಾವು

ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ ನಗರದ ಗೋಪಿ ವೃತ್ತದಲ್ಲಿ ಸೋಮವಾರ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಬಿಜೆಪಿ ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಪ್ರತಿಭಟನೆ ವೇಳೆ ಕುಸಿದು ಬಿದ್ದಿದ್ದಾರೆ. ಕೂಡಲೆ ಬಿಜೆಪಿ ಕಾರ್ಯಕರ್ತರು ಖಾಸಗಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಸ್ವಗ್ರಾಮ ಮತ್ತೂರಿಗೆ ಮೃತದೇಹ ರವಾನೆ ಮಾಡಲಾಗಿದೆ.

ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರಾಗಿದ್ದ ಎಂ.ಬಿ ಭಾನುಪ್ರಕಾಶ್​ ಅವರು ಗುರುತಿಸಿಕೊಂಡರು. ಬಿಜೆಪಿ ಎಂ.ಬಿ ಭಾನುಪ್ರಕಾಶ್​ ಅವರನ್ನು ವಿಧಾನ್​ ಪರಿಷತ್​ ಸದಸ್ಯರಾಗಿ, ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿಯೂ ನೇಮಕ ಮಾಡಿತ್ತು.

ಸಂತಾಪ ಸೂಚಿಸಿದ ಗಣ್ಯರು

ರಾಜ್ಯ ಬಿಜೆಪಿಯ ವಿರೋಧ ಪಕ್ಷದ ನಾಯಕ ಆರ್​. ಅಶೋಕ್​ ಎಂ.ಬಿ ಭಾನುಪ್ರಕಾಶ್​ ನಿಧಕ್ಕೆ ಕಂಬನಿ ಮಿಡಿದಿದ್ದಾರೆ. “ಹಿರಿಯರು, ನನ್ನ ಆತ್ಮೀಯರು, ಮಾರ್ಗದರ್ಶಕರು ಆದ ಎಂ.ಬಿ.ಭಾನುಪ್ರಕಾಶ್ ಅವರ ಹಠಾತ್ ನಿಧನದ ಸುದ್ದಿ ತೀವ್ರ ಆಘಾತ ಮೂಡಿಸಿದೆ. ತಮ್ಮ ಜೀವನದುದ್ದಕ್ಕೂ ಜನಪರ ಹೋರಾಟ, ಸಂಘರ್ಷ, ಸಂಘಟನೆಯಲ್ಲೇ ಕಳೆದ ಭಾನುಪ್ರಕಾಶ್ ಅವರು ತಮ್ಮ ಕೊನೆ ಉಸಿರನ್ನೂ ಹೋರಾಟದಲ್ಲೇ ಕಳೆದಿದ್ದು ಅವರ ಹೋರಾಟದ ಬದುಕಿನ ದ್ಯೋತಕವಾಗಿದೆ.”

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ ವೈ ರಾಘವೇಂದ್ರ ಅವರು ಎಂ.ಬಿ ಭಾನುಪ್ರಕಾಶ್​ ಅವರ ನಿಧಕ್ಕೆ ಸಂತಾಪ ಸೂಚಿಸಿದ್ದಾರೆ. “ರಾಷ್ಟೀಯ ಸ್ವಯಂ ಸೇವಕ ಸಂಘದ ಹಿರಿಯ ಸ್ವಯಂ ಸೇವಕರು, ಭಾರತೀಯ ಜನತಾ ಪಕ್ಷದ ಹಿರಿಯ ನಾಯಕರಲ್ಲಿ ಒಬ್ಬರು, ರಾಜ್ಯ ಪ್ರಕೋಷ್ಠಗಳ ಸಂಯೋಜಕರಾಗಿ ಪಕ್ಷವನ್ನು ಶಿಸ್ತು ಬದ್ಧವಾಗಿ ಸಂಘಟಿಸುವಲ್ಲಿ ಅವಿರತ ಶ್ರಮಿಸಿದ ಪ್ರಮುಖರು, ಮಾಜಿ ವಿಧಾನ ಪರಿಷತ್ ಸದಸ್ಯರು, ನನ್ನ ರಾಜಕೀಯ ಮಾರ್ಗದರ್ಶಕರಾಗಿ ಸಲಹೆ ನೀಡಿ ಹರಸಿದ ಶ್ರೀ ಭಾನುಪ್ರಕಾಶ್ ಅವರು ಇಹಲೋಕ ತ್ಯಜಿಸಿದ ಸುದ್ದಿ ತಿಳಿದು ತೀವ್ರ ಆಘಾತವಾಗಿದೆ. ಅವರ ಆತ್ಮಕ್ಕೆ ಭಗವಂತ ಸದ್ಗತಿ ನೀಡಲಿ, ಕುಟುಂಬ ಸದಸ್ಯರಿಗೆ ದುಃಖ ಸಹಿಸುವ ಶಕ್ತಿ ನೀಡಿ ಕೊಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ” ಎಂದು ಎಕ್ಸ್‌ ತಾಣದಲ್ಲಿ ಬರೆದುಕೊಂಡಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments