Homeಕರ್ನಾಟಕಪೊಲೀಸರ ದೌಲತ್ತು ಮುಂದುವರಿದರೆ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

ಪೊಲೀಸರ ದೌಲತ್ತು ಮುಂದುವರಿದರೆ ಠಾಣೆಗೆ ಮುತ್ತಿಗೆ: ವಿಜಯೇಂದ್ರ ಎಚ್ಚರಿಕೆ

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರದಲ್ಲಿದೆ ಎಂಬ ಕಾರಣಕ್ಕೆ ಪದೇ ಪದೆ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿರುವುದು ಅಕ್ಷಮ್ಯ ಅಪರಾಧ. ಪೊಲೀಸ್ ಅಧಿಕಾರಿಗಳು ಇದೇ ರೀತಿ ದೌಲತ್ತಿನಿಂದ ನಡೆದುಕೊಂಡರೆ ನನ್ನನ್ನೂ ಸೇರಿ ಬಿಜೆಪಿ ಕಾರ್ಯಕರ್ತರು ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಎಚ್ಚರಿಕೆ ನೀಡಿದರು.

ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಪೊಲೀಸರು ರಾಜ್ಯದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲೆ ದಬ್ಬಾಳಿಕೆ ಮಾಡುತ್ತಿದ್ದಾರೆ. ವಿನಾಕಾರಣ ಎಫ್‍ಐಆರ್ ದಾಖಲಿಸುತ್ತಿದ್ದಾರೆ. ಆಡಳಿತ ಪಕ್ಷಕ್ಕೆ ಖುಷಿಪಡಿಸಲು ಅಧಿಕಾರಿಗಳ ಈ ನಡವಳಿಕೆ ಅಕ್ಷಮ್ಯ ಅಪರಾಧ” ಎಂದು ಟೀಕಿಸಿದರು.

“ತಪ್ಪು ಮಾಡಿದ ಅಧಿಕಾರಿಗಳಿಗೆ ತಿಳಿಹೇಳುವ ಕೆಲಸವನ್ನು ಮಾಡಿ. ನಿನ್ನೆ ನಡೆದ ಘಟನೆ ಸಣ್ಣ ಘಟನೆಯಲ್ಲ. ವಿನಾಕಾರಣ ನಮ್ಮ ಕಾರ್ಯಕರ್ತೆಯನ್ನು ಪೊಲೀಸ್ ಠಾಣೆಯಲ್ಲಿ ಮಧ್ಯರಾತ್ರಿವರೆಗೆ ಕೂರಿಸಿದ್ದು ಒಪ್ಪುವ ನಡೆಯಲ್ಲ. ಜನರಿಗೆ ನ್ಯಾಯ ಕೊಡಬೇಕಾದ ಪೊಲೀಸರು ಹೀಗೆ ಮಾಡುವುದು ಸರಿಯೇ” ಎಂದು ಪ್ರಶ್ನಿಸಿದರು.

“ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ನಿನ್ನೆ ನಮ್ಮ ಬಿಜೆಪಿಯ ಕಾರ್ಯಕರ್ತೆ ಛಾಯಾ ಅವರು ಸದಸ್ಯತ್ವ ಅಭಿಯಾನ ಮಾಡುವ ಸಂದರ್ಭದಲ್ಲಿ ರಾತ್ರಿ ಏಕಾಏಕಿ ಪೊಲೀಸರು ಆ ಹೆಣ್ಮಗಳನ್ನು ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂರಿಸಿದ್ದಾರೆ. ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ. ನಮ್ಮ ಕಾರ್ಯಕರ್ತರು ಮತ್ತು ಮುಖಂಡರು ಪೊಲೀಸ್ ಠಾಣೆಗೆ ಧಾವಿಸಿ ಹೋಗಿ ಕಾರಣ ಕೇಳಿದ್ದಾರೆ. ಆಗ ಒಟಿಪಿಗಳನ್ನು ಡೌನ್‍ಲೋಡ್ ಮಾಡುತ್ತಿದ್ದಾರೆಂದು ಏನೇನೋ ಕಥೆ ಹೇಳಿಕೊಂಡು ಆ ಹೆಣ್ಮಗಳನ್ನು ರಾತ್ರಿ 12ರವರೆಗೆ ಪೊಲೀಸ್ ಠಾಣೆಯಲ್ಲಿ ಕೂರಿಸಿಕೊಂಡು ದಬ್ಬಾಳಿಕೆ ಮಾಡಿದ್ದಾರೆ” ಎಂದು ಆಕ್ಷೇಪ ವ್ಯಕ್ತಪಡಿಸಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments