HomeSportಆರ್‌ಸಿಬಿ ಸಂಭ್ರಮಾಚರಣೆಗೆ ಆಗಮಿಸಿದ ಆರು ಅಭಿಮಾನಿಗಳ ಸಾವು

ಆರ್‌ಸಿಬಿ ಸಂಭ್ರಮಾಚರಣೆಗೆ ಆಗಮಿಸಿದ ಆರು ಅಭಿಮಾನಿಗಳ ಸಾವು

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭ್ರಮ ಕಣ್ತುಂಬಿಕೊಳ್ಳಲು ಬಂದಿದ್ದ ಆರು ಮಂದಿ ಅಭಿಮಾನಿಗಳು ಸಾವನ್ನಪ್ಪಿದ್ದಾರೆ.

ಐಪಿಎಲ್‌ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ಆರ್‌ಸಿಬಿ ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಪಂಜಾಬ್‌ ವಿರುದ್ಧ ಗೆಲ್ಲುವ ಮೂಲಕ 18 ವರ್ಷದ ಕನಸನ್ನು ನನಸಾಗಿಸಿದೆ.

ಈ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡದ ಆಟಗಾರರಿಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರದಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿ 15ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ. ಸದ್ಯಕ್ಕೆ ಓರ್ವ ಮಹಿಳೆ ಸೇರಿ ಐವರು ಆರ್‌ಸಿಬಿ ಅಭಿಮಾನಿಗಳು ಮೃತಪಟ್ಟಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments